ಬ್ರೇಕಿಂಗ್ ನ್ಯೂಸ್
09-01-21 03:51 pm Source: MYKHEL Sadashiva ಕ್ರೀಡೆ
ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ನ ಬಲಿಷ್ಠ ತಂಡವಾಗಿ ಗುರುತಿಸಿಕೊಂಡಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡ 2021ರ ಸೀಸನ್ನಲ್ಲಿ ಪರದಾಡಿತ್ತು. ಅಲ್ಲದೆ ಲೀಗ್ ಹಂತದಲ್ಲಿ ಹೊರ ಬಿದ್ದ ಮೊದಲ ತಂಡವಾಗಿ ಗುರುತಿಸಿಕೊಂಡಿತ್ತು. ಅಷ್ಟೇ ಅಲ್ಲ, ಐಪಿಎಲ್ ಇತಿಹಾಸದಲ್ಲಿ ಸಿಎಸ್ಕೆ ಪ್ಲೇ ಆಫ್ಗೆ ಪ್ರವೇಶಿಸದೆಯೇ ಹೊರ ಬಿದ್ದಿದ್ದು ಕಳೆದ ಸೀಸನ್ನಲ್ಲೇ ಮೊದಲು. ಟೂರ್ನಿ ಮುಗಿಯುವಾಗ ಸಿಎಸ್ಕೆ 7ನೇ ಸ್ಥಾನಿಯಾಗಿ ಅಂಕಪಟ್ಟಿಯಲ್ಲಿ ಕಾಣಿಸಿಕೊಂಡಿತ್ತು.
14 ಆವೃತ್ತಿಯ ಐಪಿಎಲ್ಗೆ ಬಿಸಿಸಿಐ ತಯಾರಿ ನಡೆಸುತ್ತಿರುವ ಬೆನ್ನಲ್ಲೇ ಚೆನ್ನೈ ಸೂಪರ್ ಕಿಂಗ್ಸ್ ಕೂಡ ತಂಡದಲ್ಲಿ ಆಟಗಾರರನ್ನು ಬದಲಾಯಿಸಿಕೊಳ್ಳಲು ಯೋಚಿಸುತ್ತಿದೆ. ಕಳೆದ ಸೀಸನ್ನಲ್ಲಿ ತಂಡ ಕೆಟ್ಟ ಪ್ರದರ್ಶನ ನೀಡಿದ್ದರಿಂದ ಮುಂಬರುವ ಸೀಸನ್ಲ್ಲಿ ಸಿಎಸ್ಕೆ ಬದಲಾವಣೆ ಮಾಡಿಕೊಳ್ಳಬೇಕಾದ ಅನಿವಾರ್ಯತೆಯಲ್ಲಿದೆ.
ಫೆಬ್ರವರಿಯಲ್ಲಿ 2021ರ ಐಪಿಎಲ್ಗಾಗಿ ಆಟಗಾರರ ಹರಾಜು ನಡೆಯಲಿದೆ. ಆದರೆ ಇದಕ್ಕೂ ಮುನ್ನವೇ ಸಿಎಸ್ಕೆ ಪ್ರಮುಖ 7-8 ಆಟಗಾರರನ್ನು ತಂಡದಿಂದ ಕೈಬಿಡಲಿದೆ ಎನ್ನಲಾಗುತ್ತಿದೆ.

ತಂಡದಿಂದ ಹೊರ ಹಾಕೋದ್ಯಾಕೆ
ಸಿಎಸ್ಕೆ ತಂಡದಿಂದ ಪ್ರಮುಖ ಆಟಗಾರರನ್ನು ಹೊರ ಹಾಕುವುದರಲ್ಲಿದೆ ಯಾಕೆಂದರೆ ಸಿಎಸ್ಕೆ ಪರ್ಸ್ನಲ್ಲಿ ಸದ್ಯ ಏನೂ ಹಣವಿಲ್ಲ. ಸಿಎಸ್ಕೆ ಪರ್ಸ್ನಲ್ಲಿ ಸದ್ಯ ಕೇವಲ 15 ಲಕ್ಷ ಮಾತ್ರ ಹಣವಿದೆ. ಈ ಬಾರಿಯ ಹರಾಜಿನ ವೇಳೆ ಪರ್ಸ್ ಮೌಲ್ಯವನ್ನು ಹೆಚ್ಚಿಸಲಾಗುವುದಿಲ್ಲ ಎಂದು ಐಪಿಎಲ್ ಗವರ್ನಿಂಗ್ ಕೌನ್ಸಿಲ್ ಈಗಾಗಲೇ ಹೇಳಿರುವುದರಿಂದ ಹೆಚ್ಚು ಬೆಲೆ ಬಾಳುವ ಆದರೆ ಫಾರ್ಮ್ನಲ್ಲಿ ಇಲ್ಲದ ಪ್ರಮುಖ ಆಟಗಾರರನ್ನು ಕೈ ಬಿಡಲು ಸಿಎಸ್ಕೆ ಯೋಚಿಸಿದೆ ಎಂದು ತಿಳಿದುಬಂದಿದೆ.

ಪ್ರಮುಖ ಆಟಗಾರರು ಹೊರಕ್ಕೆ
2021ರ ಐಪಿಎಲ್ ಸೀಸನ್ನಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡ, ಆಲ್ ರೌಂಡರ್ ಕೇದಾರ್ ಜಾಧವ್, ಇಮ್ರಾನ್ ತಾಹಿರ್, ಡ್ವೇನ್ ಬ್ರಾವೋ, ಹರ್ಭಜನ್ ಸಿಂಗ್ ಇಂಥ ಪ್ರಮುಖ ಆಟಗಾರರನ್ನು ಕೈಬಿಡಲಿದೆ. ಇದರಲ್ಲಿ ಕಳೆದ ಸೀಸನ್ನಲ್ಲಿ ಕೆಲವರಿಗೆ ಆಡಲು ಸರಿಯಾದ ಅವಕಾಶ ಲಭಿಸಲಿಲ್ಲ. ಅವಕಾಶ ಲಭಿಸಿದ ಒಂದಿಷ್ಟು ಮಂದಿ ಉತ್ತಮ ಪ್ರದರ್ಶನ ನೀಡಿರಲಿಲ್ಲ. ಆದರೆ ಮುಂದಿನ ಬಾರಿಯೂ ಸಿಎಸ್ಕೆ ಎಂದಿನ ನಾಯಕ ಎಂಎಸ್ ಧೋನಿ ಅವರೇ ಕ್ಯಾಪ್ಟನ್ ಆಗಿರಲಿದ್ದಾರೆ ಎನ್ನಲಾಗಿದೆ.

ಹೊರ ಬೀಳಬಹುದಾದ ಆಟಗಾರರು
1) ಕೇದಾರ ಜಾಧವ್ - 7.8 ಕೋ.ರೂ.
2) ಇಮ್ರಾನ್ ತಾಹಿರ್ - 1 ಕೋ.ರೂ.
3) ಪಿಯೂಷ್ ಚಾವ್ಲಾ - 6.75 ಕೋ.ರೂ.
4) ಹರ್ಭಜನ್ ಸಿಂಗ್ - 2 ಕೋ.ರೂ.
5) ಮುರಳಿ ವಿಜಯ್ - 2 ಕೋ.ರೂ.
6) ಡ್ವೇನ್ ಬ್ರಾವೋ - 6.4 ಕೋ.ರೂ. (ಫಿಟ್ನೆಸ್ ಅನ್ನು ಅವಲಂಬಿಸಿರುತ್ತದೆ)
7) ಜೋಶ್ ಹ್ಯಾಝಲ್ವುಡ್ 2.0 ಕೋ.ರೂ.
8) ಕರ್ಣ್ ಶರ್ಮಾ 5 ಕೋ.ರೂ.

ಉಳಿಸಿಕೊಳ್ಳಬಹುದಾದ ಆಟಗಾರರು
1) ಎಂ.ಎಸ್ ಧೋನಿ (15 ಕೋ.ರೂ.)
2) ದೀಪಕ್ ಚಾಹರ್
3) ಲುಂಗಿ ಎನ್ಗಿಡಿ (0.50 ಕೋ.ರೂ.)
4) ರವೀಂದ್ರ ಜಡೇಜಾ (7 ಕೋ.ರೂ.)
5) ರುತುರಾಜ್ ಗಾಯಕ್ವಾಡ್ (0.2 ಕೋ.ರೂ.)
6) ಶಾರ್ದೂಲ್ ಠಾಕೂರ್ (2.6 ಕೋ.ರೂ.)
7) ಸ್ಯಾಮ್ ಕರ್ರನ್ (5.5 ಕೋ.ರೂ.)
8) ನಾರಾಯಣ್ ಜಗದೀಶನ್ (0.2 ಕೋ.ರೂ.)
This News Article is a Copy of MYKHEL
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm