ಬ್ರೇಕಿಂಗ್ ನ್ಯೂಸ್
09-01-21 03:58 pm Source: MYKHEL ಕ್ರೀಡೆ
ಗೋವಾ: ತನ್ನ ಶ್ರೇಷ್ಠ ಲಯ ಕಂಡುಕೊಂಡಂತ್ತಿರುವ ಹೈದರಾಬಾದ್ ಎಫ್ಸಿ ತಂಡ ಇಲ್ಲಿ ನಡೆಯುತ್ತಿರುವ ಪ್ರಸಕ್ತ ಸಾಲಿನ ಇಂಡಿಯನ್ ಸೂಪರ್ ಲೀಗ್ ಫುಟ್ಬಾಲ್ ಟೂರ್ನಿಯ 51ನೇ ಲೀಗ್ ಪಂದ್ಯದಲ್ಲಿ ಅಪಾಯಕಾರಿ ನಾರ್ತ್ಈಸ್ಟ್ ಯುನೈಟೆಡ್ ಎಫ್ಸಿ ತಂಡವನ್ನು ಬಗ್ಗುಬಡಿದಿದೆ. ಇಲ್ಲಿನ ತಿಲಕ್ ಮೈದಾನ್ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಹೈ-ವೋಲ್ಟೇಜ್ ಪಂದ್ಯದಲ್ಲಿ ಹೈದರಾಬಾದ್ ಎಫ್ಸಿ ತಂಡ ಒತ್ತಡ ಮೆಟ್ಟಿನಿಂತು 4-2 ಗೋಲ್ಗಳಿಂದ ನಾರ್ತ್ಈಸ್ಟ್ ಯುನೈಟೆಡ್ ಎಫ್ಸಿ ತಂಡವನ್ನು ಮಣಿಸಿ ಸಂಪೂರ್ಣ 3 ಅಂಕಗಳನ್ನು ತನ್ನದಾಗಿಸಿಕೊಂಡಿತು.
ಈ ಅಮೋಘ ಜಯದೊಂದಿಗೆ ಹೈದರಾಬಾದ್ ತಂಡ ಇದೀಗ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೆ ಜಿಗಿದಿದೆ. ಆಡಿದ ಒಟ್ಟು 10 ಪಂದ್ಯಗಳಿಂದ ಹೈದರಾಬಾದ್ ತಂಡ 15 ಅಂಕಗಳನ್ನು ಕಲೆಹಾಕುವಲ್ಲಿ ಸಫಲವಾಗಿದ್ದು, 6ನೇ ಸ್ಥಾನದಿಂದ 3ನೇ ಸ್ಥಾನಕ್ಕೇರಿದೆ. ಮತ್ತೊಂದೆಡೆ ಈ ಪಂದ್ಯಕ್ಕೂ ಮುನ್ನ 7ನೇ ಸ್ಥಾನದಲ್ಲಿದ್ದ ನಾರ್ತ್ಈಸ್ಟ್ ಯುನೈಟೆಡ್ ಎಫ್ಸಿ ತಂಡ 10 ಪಂದ್ಯಗಳಿಂದ 11 ಅಂಕಗಳಿಗೆ ತೃಪ್ತಿಪಟ್ಟಿದ್ದು, ತನ್ನ ಸ್ಥಾನದಿಂದ ಅಲುಗಾಡದಂತೆ ಉಳಿದುಕೊಂಡಿದೆ.

ಗೋಲ್ಗಳಿಗೆ ಸಾಕ್ಷಿಯಾದ ರೋಚಕ ಪಂದ್ಯ
ಇನ್ನು ಒಟ್ಟಾರೆ 5 ಗೋಲ್ಗಳಿಗೆ ಸಾಕ್ಷಿಯಾದ ರೋಚಕ ಪಂದ್ಯದಲ್ಲಿ ಹೈದರಾಬಾದ್ ಎಫ್ಸಿ ತಂಡದ ಪರ ಸ್ಟ್ರೈಕರ್ ಲಿಸ್ಟನ್ ಕೊಲಾಕೊ (85ನೇ ನಿ. ಮತ್ತು 90+4ನೇ ನಿಮಿಷ) ಡಬಲ್ ಗೋಲ್ ಬಾರಿಸುವ ಮೂಲಕ ಭರ್ಜರಿ ಗೆಲುವಿನ ರೂವಾರಿ ಎನಿಸಿದರೆ, ಇದಕ್ಕೂ ಮುನ್ನ ಪಂದ್ಯದ ಪ್ರಥಮಾರ್ಧದಲ್ಲೇ ಸ್ಟ್ರೈಕರ್ ಅರಿದಾನೆ ಸ್ಯಾಂಟಾನ (3ನೇ ನಿಮಿಷ) ಮತ್ತು ಮಿಡ್ಫೀಲ್ಡರ್ ಜೊಯೆಲ್ ಚಿಯಾನಿಸ್ (36) ಮೇಲುಗೈ ಒದಗಿಸಿದ್ದರು.

ಕೆಚ್ಚೆದೆಯ ಹೋರಾಟ ಪ್ರದರ್ಶಿಸಿದ ನಾರ್ತ್ಈಸ್ಟ್
ಕೆಚ್ಚೆದೆಯ ಹೋರಾಟ ಪ್ರದರ್ಶಿಸಿದ ನಾರ್ತ್ಈಸ್ಟ್ ಯುನೈಟೆಡ್ ಎಫ್ಸಿ ತಂಡದ ಪರ ಪ್ರಥಮಾರ್ಧದ ಅಂತ್ಯದ ಹೊತ್ತಿಗೆ ಮಿಡ್ಫೀಲ್ಡರ್ ಫೆಡೆರಿಕೊ ಗಲೇಗೊ (45ನೇ ನಿ.) ಪೆನಾಲ್ಟಿ ಸ್ಪಾಟ್ ಕಿಕ್ ಮೂಲಕ ಮೊದಲ ಗೋಲ್ ತಂದುಕೊಟ್ಟರೆ, ಹೆಚ್ಚುವರಿ ಸಮಯದಲ್ಲಿ ಡಿಫೆಂಡರ್ಬೆನ್ಜಮಿನ್ ಲಾಂಬೊಟ್ (45+2ನೇ ನಿ.) ಎರಡನೇ ಗೋಲ್ ತಂದುಕೊಟ್ಟರು. ಆದರೆ, 2ನೇ ಅವಧಿಯಲ್ಲಿ ಬಿಟ್ಟುಕೊಟ್ಟ 2 ಗೋಲ್ ಪರಿಣಾಮ ನಾರ್ತ್ಈಸ್ಟ್ ತಂಡ ಸೋಲಿನ ಕಡಲಲ್ಲಿ ಮುಳುಗುವಂತ್ತಾಯಿತು.

17 ಬಾರಿ ಗೋಲ್ ಗಳಿಕೆಯ ಅವಕಾಶ
ಪಂದ್ಯದಲ್ಲಿ ಆಕ್ರಮಣಕಾರಿ ಆಟವಾಡಿ 17 ಬಾರಿ ಗೋಲ್ ಗಳಿಕೆಯ ಅವಕಾಶ ಸೃಷ್ಟಿಸಿದ್ದ ನಾರ್ತ್ಈಸ್ಟ್ ತಂಡ 8 ಬಾರಿ ಚೆಂಡನ್ನು ಗುರಿಯತ್ತ ಕಳುಹಿಸಿತ್ತು. ಆದರೆ, ಯಶಸ್ಸು ಲಭ್ಯವಾಗಿದ್ದು 2 ಬಾರಿ ಮಾತ್ರ. ಮತ್ತೊಂದೆಡೆ ಹೈದರಾಬಾದ್ ತಂಡ 13 ಅವಕಾಶಗಳಲ್ಲಿ 5 ಬಾರಿ ಚೆಂಡನ್ನು ಗುರಿಯತ್ತ ಕಳುಹಿಸಿ 4 ಗೋಲ್ಗನ್ನು ದಕ್ಕಿಸಿಕೊಳ್ಳುವಲ್ಲಿ ಸಫಲವಾಗಿ ಗೆಲುವಿನ ನಗೆ ಬೀರಿತು.
This News Article is a Copy of MYKHEL
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am