ಬ್ರೇಕಿಂಗ್ ನ್ಯೂಸ್
10-01-21 02:17 pm Source: MYKHEL Madhukara Shetty ಕ್ರೀಡೆ
ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ನ ನಾಲ್ಕನೇ ದಿನದಾಟ ಅಂತ್ಯವಾಗಿದೆ. ಆಸ್ಟ್ರೇಲಿಯಾ ನೀಡಿದ 407 ರನ್ಗಳ ಬೃಹತ್ ಗುರಿಯನ್ನು ಟೀಮ್ ಇಂಡಿಯಾ ಬೆನ್ನತ್ತಲು ಆರಂಬಿಸಿದ್ದು ಎರಡು ವಿಕೆಟ್ಗಳನ್ನು ಕಳೆದುಕೊಂಡಿದೆ. ಆರಂಭಿಕರಾದ ರೋಹಿತ್ ಶರ್ಮಾ ಹಾಗೂ ಶುಬ್ಮನ್ ಗಿಲ್ ತಮ್ಮ ವಿಕೆಟ್ ಕಳೆದುಕೊಂಡಿದ್ದಾರೆ.
ಎರಡನೇ ಇನ್ನಿಂಗ್ಸ್ನಲ್ಲಿ ಆಸ್ಟ್ರೇಲಿಯಾ ಲಾಬುಶೇನ್, ಸ್ಮಿತ್ ಹಾಗೂ ಕ್ಯಾಮರೂನ್ ಗ್ರೀನ್ ಸಿಡಿಸಿದ ಭರ್ಜರಿ ಅರ್ಧ ಶತಕಗಳ ನೆರವಿನಿಂದ 312 ರನ್ ಗಳಿಸಿತು. ಈ ವೇಳೆ ಆಸಿಸ್ ಡಿಕ್ಲೇರ್ ಮಾಡಿಕೊಂಡಿದ್ದು ಭಾರತಕ್ಕೆ 407 ರನ್ಗಳ ಬೃಹತ್ ಗುರಿಯನ್ನು ನೀಡಿದಂತಾಯಿತು.
ಆಸ್ಟ್ರೇಲಿಯಾ ನೀಡಿದ ಬೃಹತ್ ಗುರಿಯನ್ನನು ಟೀಮ್ ಇಂಡಿಯಾ ಆರಂಭಿಕರು ಉತ್ತಮ ರೀತಿಯಲ್ಲಿ ಬೆನ್ನಟ್ಟಿದರಾದರೂ ದೊಡ್ಡ ಜೊಯೆತಾಟವನ್ನಾಗಿ ಪರಿವರ್ತಿಸುವಲ್ಲಿ ವಿಫಲರಾದರು. ಮೊದಲ ವಿಕೆಟ್ಗೆ 71 ರನ್ಗಳ ಜೊತೆಯಾಟ ಆರಂಭಿಕರಿಂದ ಬಂದಿತ್ತು. ಶುಬ್ಮನ್ ಗಿಲ್ 31 ರನ್ ಗಳಿಸಿ ವಿಕೆಟ್ ಒಪ್ಪಿಸಿದ್ದಾರೆ. ರೋಹಿತ್ ಶರ್ಮಾ ಎರಡನೇ ಇನ್ನಿಂಗ್ಸ್ನಲ್ಲಿ ಅರ್ಧ ಶತಕವನ್ನು ಬಾರಿಸುವಲ್ಲಿ ಯಶಸ್ವಿಯಾಗಿದ್ದು 52 ರನ್ ಗಳಿಸಿ ಪ್ಯಾಟ್ ಕಮ್ಮಿನ್ಸ್ಗೆ ವಿಕೆಟ್ ಒಪ್ಪಿಸಿದ್ದಾರೆ. ಹೀಗೆ ಭಾರತ ಆಸಿಸ್ ನೀಡಿರುವ ಬೃಹತ್ ಗುರಿಯನ್ನು ಬೆನ್ನತ್ತುವ ವೇಳೆ ಎರಡು ವಿಕೆಟ್ ಕಳೆದುಕೊಂಡಿದ್ದು 98 ರನ್ ಸಿಡಿಸಿದೆ.
ಅಂತಿಮ ದಿನ ಭಾರತ ಗೆಲ್ಲಲು 309 ರನ್ಗಳ ಅವಶ್ಯಕತೆಯಿದೆ. ಸದ್ಯ ಕ್ರೀಸ್ನಲ್ಲಿ ನಾಯಕ ಚೇತೇಶ್ವರ್ ಪೂಜಾರ ಹಾಗೂ ಅಜಿಂಕ್ಯ ರಹಾನೆ ಕ್ರೀಸ್ನಲ್ಲಿದ್ದು ಕ್ರಮವಾಗಿ 9 ಹಾಗೂ 4 ರನ್ ಗಳಿಸಿದ್ದಾರೆ. ಅಂತಿಮ ದಿನದಾಟದಲ್ಲಿ ಭಾರತೀಯ ಬ್ಯಾಟ್ಸ್ಮನ್ಗಳು ಯಾವ ರೀತಿಯ ಪ್ರದರ್ಶನವನ್ನು ನೀಡಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ.
This News Article is a Copy of MYKHEL
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm