ಬ್ರೇಕಿಂಗ್ ನ್ಯೂಸ್
12-08-20 04:53 pm Headline Karnataka News Network ಕ್ರೀಡೆ
ಆಗಸ್ಟ್ 12: ಕಳೆದ ಕೆಲ ದಿನಗಳ ಹಿಂದೆ ಉಸಿರಾಟದ ತೊಂದರೆ ಹಾಗೂ ಅನಾರೋಗ್ಯರಿಂದ ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಬಾಲಿವುಡ್ನ ಖ್ಯಾತ ನಟ ಸಂಜಯ್ ದತ್ ಅವರಿಗೆ ಶ್ವಾಸಕೋಶದ ಕ್ಯಾನ್ಸರ್ ಇರುವುದು ಕಂಡುಬಂದಿದೆ. ಸದ್ಯ 61 ವರ್ಷದ ಸಂಜಯ್ ದತ್ ಅವರಿಗೆ ಕ್ಯಾನ್ಸರ್ 3ನೇ ಹಂತದಲ್ಲಿದ್ದು ಹೆಚ್ಚಿನ ಚಿಕಿತ್ಸೆಗೆ ಯುಎಸ್ಗೆ ತೆರಳಿದ್ದಾರೆ. ಕಳೆದ ಶನಿವಾರದಂದು ಸಂಜಯ್ ದತ್ ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ವೇಳೆ ಐಸಿಯುನಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು. ಈ ವೇಳೆ ಅವರಿಗೆ ಲಂಗ್ ಕ್ಯಾನ್ಸರ್ ಇರುವುದು ಖಚಿತಗೊಂಡಿದೆ.
ಈ ಬಗ್ಗೆ ಟ್ವೀಟ್ ಮಾಡಿದ್ದ ಸಂಜಯ್ ದತ್, ವೃತ್ತಿಯಿಂದ ಸ್ವಲ್ಪ ಸಮಯ ವಿರಾಮ ಪಡೆದುಕೊಳ್ಳುತ್ತಿರುವುದಾಗಿ ತಿಳಿಸಿದ್ದರು. ಅಲ್ಲದೆ ಟ್ವೀಟ್ ಮಾಡಿರುವ ಫಿಲ್ಮ್ ಇನ್ಫಾರ್ಮೇಶನ್ ಮುಖ್ಯ ಸಂಪಾದಕ ಕೋಮಲ್ ನಹ್ತಾ 'ಸಂಜಯ್ ದತ್ ಶ್ವಾಸಕೋಶದ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ' ಎಂದಿದ್ದಾರೆ.
ಸಂಜಯ್ ದತ್ ಆದಷ್ಟು ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಹಾರೈಸಿದ್ದಾರೆ. ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಯುವರಾಜ್ ಸಿಂಗ್ ಕೂಡ ಟ್ವೀಟ್ ಮಾಡಿದ್ದು, "ನೀವು ಫೈಟರ್, ಅಷ್ಟು ಬೇಗ ಸೋಲನ್ನು ಒಪ್ಪಿಕೊಳ್ಳುವವರಲ್ಲ. ಈ ನೋವು ನನಗೆ ಚೆನ್ನಾಗಿಯೆ ತಿಳಿದಿದೆ. ಗಟ್ಟಿಜೀವ ಸಂಜಯ್ ದತ್ ಕ್ಯಾನ್ಸರ್ ಜೊತೆ ಗುದ್ದಾಡಿ ಗೆದ್ದು ಬರಲಿ" ಎಂದು ಯುವಿ ಸ್ಫೂರ್ತಿದಾಯಕ ಸಂದೇಶ ಹೇಳಿದ್ದಾರೆ.
You are, have and always will be a fighter @duttsanjay. I know the pain it causes but I also know you are strong and will see this tough phase through. My prayers and best wishes for your speedy recovery.
— Yuvraj Singh (@YUVSTRONG12) August 11, 2020
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm