ಬ್ರೇಕಿಂಗ್ ನ್ಯೂಸ್
14-01-21 04:50 pm Source: MYKHEL Madhukara Shetty ಕ್ರೀಡೆ
ಆಸ್ಟ್ರೇಲಿಯಾ ತಂಡದ ಯುವ ಆರಂಭಿಕ ಆಟಗಾರ ವಿಲ್ ಪುಕೋವ್ಸ್ಕಿ ಭಾರತದ ವಿರುದ್ಧದ ಟೆಸ್ಟ್ ಸರಣಿಯ ನಾಲ್ಕನೇ ಹಾಗೂ ಅಂತಿಮ ಪಂದ್ಯದಿಂದ ಹೊರಬಿದ್ದದ್ದಾರೆ. ಸಿಡ್ನಿಯಲ್ಲಿ ನಡೆದ ಮೂರನೇ ಟೆಸ್ಟ್ ಒಂದ್ಯದ ವೇಳೆ ಪುಕೋವ್ಸ್ಕಿ ಭುಜದ ನೋವಿಗೆ ತುತ್ತಾಗಿದ್ದರು. ಹೀಗಾಗಿ ಅವರು ಅಂತಿಮ ಪಂದ್ಯದಲ್ಲಿ ಕಣಕ್ಕಿಳಿಯುವುದಿಲ್ಲ ಎಂಬುದು ಖಚಿತವಾಗಿದೆ.
ಆಸ್ಟ್ರೇಲಿಯಾ ತಂಡದ ನಾಯಕ ಟಿಮ್ ಪೈನ್ ಈ ಬಗ್ಗೆ ಖಚಿತವಾಗಿ ಗುರುವಾರ ಮಾಧ್ಯಮಗಳಿಗೆ ಮಾಹಿತಿಯನ್ನು ನೀಡಿದ್ದಾರೆ. ಭುಜದ ನೋವಿಗೆ ಒಳಗಾಗಿರುವ ಪುಕೋವ್ಸ್ಕಿ ಆಡಲು ಸಮರ್ಥರಾಗಿಲ್ಲ. ಹೀಗಾಗಿ ಮುಂದಿನ ಪಂದ್ಯದಲ್ಲಿ ಅವರು ಕಣಕ್ಕಿಳಿಯಲಾರರು ಅವರ ಬದಲಿಗೆ ಮಾರ್ಕಸ್ ಹ್ಯಾರಿಸ್ ಆರಂಭಿಕನಾಗಿ ಡೇವಿಡ್ ವಾರ್ನರ್ಗೆ ಸಾಥ್ ನೀಡಲಿದ್ದಾರೆ ಎಂದು ಟಿಮ್ ಪೈನ್ ಹೇಳಿದ್ದಾರೆ.
ಶುಕ್ರವಾರದಿಂದ ಆರಂಭವಾಗಲಿರುವ ನಾಲ್ಕನೇ ಟೆಸ್ಟ್ ಪಂದ್ಯದ ಹಿನ್ನೆಲೆಯಲ್ಲಿ ವಿಲ್ ಪುಕೋವ್ಸ್ಕಿಗೆ ಗುರುವಾರ ಫಿಟ್ನೆಸ್ ಪರೀಕ್ಷೆ ನಡೆಸಲಾಗಿದ್ದು ಇದರಲ್ಲಿ ಅವರು ವಿಫಲರಾಗಿದ್ದಾರೆ. ಹೀಗಾಗಿ 2019ರ ಆ್ಯಶಸ್ ಸರಣಿಯಲ್ಲಿ ಕೊನೆಯದಾಗಿ ಕಣಕ್ಕಿಳಿದಿದ್ದ ಹ್ಯಾರಿಸ್ ಭಾರತದ ಇನ್ನಿಂಗ್ಸ್ ಆರಂಭಿಸಲಿದ್ದಾರೆ. ವಿಲ್ ಪುಕೋವ್ಸ್ಕಿ ಅಲಭ್ಯತೆಯಿಂದಾಗಿ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಆಸಿಸ್ ಪರವಾಗಿ ಕಣಕ್ಕಿಳಿಯುತ್ತಿರುವ ಐದನೇ ಆರಂಭಿಕ ಆಟಗಾರ ಹ್ಯಾರಿಸ್ ಆಗಲಿದ್ದಾರೆ. ಸಿಡ್ನಿಯಲ್ಲಿ ನಡೆದ ಮೂರನೇ ಟೆಸ್ಟ್ನ ಅಂತಿಮ ದಿನದಾಟ ಸೋಮವಾರ ನಡೆಯುತ್ತಿದ್ದ ವೇಳೆ ವಿಲ್ ಪುಕೋವ್ಸ್ಕಿ ಫೀಲ್ಡಿಂಗ್ ವೇಳೆ ಗಾಯಗೊಂಡಿದ್ದರು. ಭುಜದ ನೋವಿಗೆ ಒಳಗಾಗಿದ್ದ ಅವರು ಬಳಿಕ ಸ್ಕ್ಯಾನಿಂಗ್ಗೆ ಒಳಪಟ್ಟರು. ಈ ಸಂದರ್ಭದಲ್ಲಿ ಭುಜದ ಮೂಳೆಯಲ್ಲಿ ಸಣ್ಣ ಸ್ಥಳಾಂತರವಾಗಿರುವುದು ಕಂಡು ಬಂದಿತ್ತು. ಇದರಿಂದ ಚೇತರಿದಿಕೊಳ್ಳದ ಹಿನ್ನೆಲೆಯಲ್ಲಿ ಅವರು ಅಂತಿಮ ಟೆಸ್ಟ್ನಿಂದ ಹೊರಗುಳಿಯಲಿದ್ದಾರೆ.
ಆಸ್ಟ್ರೇಲಿಯಾ ಆಡುವ ಬಳಗ: ಡೇವಿಡ್ ವಾರ್ನರ್, ಮಾರ್ಕಸ್ ಹ್ಯಾರಿಸ್, ಮಾರ್ನಸ್ ಲಾಬುಶೇನ್, ಸ್ಟೀವ್ ಸ್ಮಿತ್, ಮ್ಯಾಥ್ಯೂ ವೇಡ್, ಕ್ಯಾಮೆರಾನ್ ಗ್ರೀನ್, ಟಿಮ್ ಪೈನ್ (ನಾಯಕ/ ವಿಕೆಟ್ ಕೀಪರ್), ಮಿಚೆಲ್ ಸ್ಟಾರ್ಕ್, ಪ್ಯಾಟ್ ಕಮ್ಮಿನ್ಸ್, ಜೋಶ್ ಹ್ಯಾಜಲ್ವುಡ್, ನಥನ್ ಲಿಯಾನ್.
This News Article is a Copy of MYKHEL
19-08-25 11:13 am
Bangalore Correspondent
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
ನಿಮ್ಮ ಮನೆ ಹುಡುಗಿನ ನಮ್ಮ ಸಮುದಾಯದ ಯುವಕನಿಗೆ ಮದುವೆ...
18-08-25 10:35 pm
Dk Shivakumar, Dharmasthala Case: ಧರ್ಮಸ್ಥಳ ವಿ...
18-08-25 08:45 pm
19-08-25 06:59 pm
HK News Desk
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
19-08-25 11:07 pm
Mangalore Correspondent
Mangalore Thokottu Sports Winner: ಕಂಪನಿ ಬ್ರಾಂ...
19-08-25 08:54 pm
Ullal Municipal Commissioner: ಉಳ್ಳಾಲ ನಗರಸಭೆಯಲ...
19-08-25 08:28 pm
Puttur, Baby, Sreekrishna J. Rao: ಬಿಜೆಪಿ ಮುಖಂ...
19-08-25 07:04 pm
Activists Mahesh Shetty Thimarodi, Harish Poo...
18-08-25 06:14 pm
19-08-25 10:52 pm
Mangalore Correspondent
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm
Ullal Police Raid, Sports Winners, Mangalore:...
19-08-25 12:41 pm