ಬ್ರೇಕಿಂಗ್ ನ್ಯೂಸ್
15-01-21 03:20 pm Source: MYKHEL Madhukara Shetty ಕ್ರೀಡೆ
ಆಸ್ಟ್ರೇಲಿಯಾ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯದಲ್ಲಿ 300ನೇ ಆಟಗಾರನಾಗಿ ಟೆಸ್ಟ್ ಕ್ರಿಕೆಟ್ಗೆ ಪದಾರ್ಪಣೆಯನ್ನು ಮಾಡಿರುವ ಟಿ ನಟರಾಜನ್ ಮೊದಲ ದಿನದಾಟದಲ್ಲಿ ಅದ್ಭುತವಾಗಿ ಬೌಲಿಂಗ್ ಪ್ರದರ್ಶನ ನೀಡಿ ಮಿಂಚಿದ್ದಾರೆ. ಈ ಮೂಲಕ ಸುದೀರ್ಘ ಮಾದರಿಯ ಕ್ರಿಕೆಟ್ನಲ್ಲೂ ಸ್ಮರಣೀಯ ಆರಂಭವನ್ನು ಪಡೆದುಕೊಂಡಿದ್ದಾರೆ.
ಟೀಮ್ ಇಂಡಿಯಾದ ಅನುಭವಿ ವೇಗಿ ಜಸ್ಪ್ರೀತ್ ಬೂಮ್ರಾ ಗಯಗೊಂಡಿರುವ ಕಾರಣ ಟಿ ನಟರಾಜನ್ಗೆ ಅಂತಿಮ ಟೆಸ್ಟ್ ಪಂದ್ಯದಲ್ಲಿ ಆಡುವ ಅವಕಾಶ ದೊರೆಯಿತು. ಈ ಅವಕಾಶವನ್ನು ನಟರಾಜನ್ ಅದ್ಭುತವಾಗಿ ಬಳಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಮೊದಲ ದಿನ ಆಸ್ಟ್ರೇಲಿಯಾ ಕಳೆದುಕೊಂಡ ಐದು ವಿಕೆಟ್ಗಳಲ್ಲಿ ನಟರಾಜನ್ 2 ವಿಕೆಟ್ ಕಿತ್ತು ಮಿಂಚಿದರು.
ಟಿ ನಟರಾಜನ್ ಪಡೆದ ಎರಡು ವಿಕೆಟ್ಗಳು ಕೂಡ ಭಾರತದ ಪಾಲಿಗೆ ಬಹಳ ಅಮೂಲ್ಯವಾಗಿತ್ತು. ಶತಕದ ಜೊತೆಯಾಟವನ್ನು ಆಡಿ ಮುನ್ನುಗ್ಗುತ್ತಿದ್ದ ಮರ್ನಾಸ್ ಲ್ಯಾಬುಶೇನ್ ಹಾಗೂ ಮ್ಯಾಥ್ಯೂ ವೇಡ್ ಜೋಡಿಯನ್ನು ಬೇರ್ಪಡಿಸಲು ಭಾರತೀಯ ಬೌಲಿಂಗ್ ಪಡೆ ಬೆವರುಹರಿಸುತ್ತಿದ್ದಾಗ ನಟರಾಜನ್ ತಂಡಕ್ಕೆ ಬಹುದೊಡ್ಡ ಬ್ರೇಕ್ ಒದಗಿಸಿದರು. 63ನೇ ಓವರ್ನಲ್ಲಿ ನಟರಾಜನ್ 45 ರನ್ ಗಳಿಸಿ ಮುನ್ನುಗ್ಗುತ್ತಿದ್ದಾಗ ಮ್ಯಾಥ್ಯೂ ವೇಡ್ ಅವರನ್ನು ಬಲಿ ಪಡೆದರು. ಮಿಡ್ಆನ್ನಲ್ಲಿ ಶಾರ್ದೂಲ್ ಠಾಕೂರ್ಗೆ ಸುಲಭ ಕ್ಯಾಚ್ ನೀಡುವ ಮೂಲಕ ವೇಡ್ ಟೆಸ್ಟ್ ಕ್ರಿಕೆಟ್ನಲ್ಲಿ ನಟರಾಜನ್ಗೆ ಮೊದಲ ಬಲಿಯಾಗಿ ನಿರ್ಗಮಿಸಿದರು.
ಅದಾದ ಬಳಿಕ ಶತಕವನ್ನು ಸಿಡಿಸಿ ಟೀಮ್ ಇಂಡಿಯಾಗೆ ಕಗ್ಗಂಟಾಗಿದ್ದ ಮಾರ್ನಸ್ ಲ್ಯಾಬುಶೇನ್ ಕೂಡ ನಟರಾಜನ್ ಎಸೆತವನ್ನು ಸರಿಯಾಗಿ ಗ್ರಹಿಸಲು ಸಾಧ್ಯವಾಗದೆ ಕೀಪರ್ ರಿಷಭ್ ಪಂತ್ಗೆ ಕ್ಯಾಚ್ ನೀಡಿದರು. 108 ರನ್ಗಳಿಗೆ ಲಾಬುಶೇನ್ ತಮ್ಮ ಇನ್ನಿಂಗ್ಸ್ ಅಂತ್ಯಗೊಳಿಸಿದರು. ಹೀಗೆ ಮೊದಲ ದಿನದಲ್ಲಿ ಎರಡು ದೊಡ್ಡ ವಿಕೆಟ್ ಪಡೆಯುವಲ್ಲಿ ಟಿ ನಟರಾಜನ್ ಯಶಸ್ವಿಯಾಗಿದ್ದಾರೆ. ಈ ಮೂಲಕ ಮೂರು ಮಾದರಿಯ ಕ್ರಿಕೆಟ್ನಲ್ಲೂ ನಟರಾಜನ್ ಪದಾರ್ಪಣಾ ಪಂದ್ಯದಲ್ಲೇ ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ.
This News Article is a Copy of MYKHEL
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm