ಬ್ರೇಕಿಂಗ್ ನ್ಯೂಸ್
15-01-21 03:20 pm Source: MYKHEL Madhukara Shetty ಕ್ರೀಡೆ
ಆಸ್ಟ್ರೇಲಿಯಾ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯದಲ್ಲಿ 300ನೇ ಆಟಗಾರನಾಗಿ ಟೆಸ್ಟ್ ಕ್ರಿಕೆಟ್ಗೆ ಪದಾರ್ಪಣೆಯನ್ನು ಮಾಡಿರುವ ಟಿ ನಟರಾಜನ್ ಮೊದಲ ದಿನದಾಟದಲ್ಲಿ ಅದ್ಭುತವಾಗಿ ಬೌಲಿಂಗ್ ಪ್ರದರ್ಶನ ನೀಡಿ ಮಿಂಚಿದ್ದಾರೆ. ಈ ಮೂಲಕ ಸುದೀರ್ಘ ಮಾದರಿಯ ಕ್ರಿಕೆಟ್ನಲ್ಲೂ ಸ್ಮರಣೀಯ ಆರಂಭವನ್ನು ಪಡೆದುಕೊಂಡಿದ್ದಾರೆ.
ಟೀಮ್ ಇಂಡಿಯಾದ ಅನುಭವಿ ವೇಗಿ ಜಸ್ಪ್ರೀತ್ ಬೂಮ್ರಾ ಗಯಗೊಂಡಿರುವ ಕಾರಣ ಟಿ ನಟರಾಜನ್ಗೆ ಅಂತಿಮ ಟೆಸ್ಟ್ ಪಂದ್ಯದಲ್ಲಿ ಆಡುವ ಅವಕಾಶ ದೊರೆಯಿತು. ಈ ಅವಕಾಶವನ್ನು ನಟರಾಜನ್ ಅದ್ಭುತವಾಗಿ ಬಳಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಮೊದಲ ದಿನ ಆಸ್ಟ್ರೇಲಿಯಾ ಕಳೆದುಕೊಂಡ ಐದು ವಿಕೆಟ್ಗಳಲ್ಲಿ ನಟರಾಜನ್ 2 ವಿಕೆಟ್ ಕಿತ್ತು ಮಿಂಚಿದರು.
ಟಿ ನಟರಾಜನ್ ಪಡೆದ ಎರಡು ವಿಕೆಟ್ಗಳು ಕೂಡ ಭಾರತದ ಪಾಲಿಗೆ ಬಹಳ ಅಮೂಲ್ಯವಾಗಿತ್ತು. ಶತಕದ ಜೊತೆಯಾಟವನ್ನು ಆಡಿ ಮುನ್ನುಗ್ಗುತ್ತಿದ್ದ ಮರ್ನಾಸ್ ಲ್ಯಾಬುಶೇನ್ ಹಾಗೂ ಮ್ಯಾಥ್ಯೂ ವೇಡ್ ಜೋಡಿಯನ್ನು ಬೇರ್ಪಡಿಸಲು ಭಾರತೀಯ ಬೌಲಿಂಗ್ ಪಡೆ ಬೆವರುಹರಿಸುತ್ತಿದ್ದಾಗ ನಟರಾಜನ್ ತಂಡಕ್ಕೆ ಬಹುದೊಡ್ಡ ಬ್ರೇಕ್ ಒದಗಿಸಿದರು. 63ನೇ ಓವರ್ನಲ್ಲಿ ನಟರಾಜನ್ 45 ರನ್ ಗಳಿಸಿ ಮುನ್ನುಗ್ಗುತ್ತಿದ್ದಾಗ ಮ್ಯಾಥ್ಯೂ ವೇಡ್ ಅವರನ್ನು ಬಲಿ ಪಡೆದರು. ಮಿಡ್ಆನ್ನಲ್ಲಿ ಶಾರ್ದೂಲ್ ಠಾಕೂರ್ಗೆ ಸುಲಭ ಕ್ಯಾಚ್ ನೀಡುವ ಮೂಲಕ ವೇಡ್ ಟೆಸ್ಟ್ ಕ್ರಿಕೆಟ್ನಲ್ಲಿ ನಟರಾಜನ್ಗೆ ಮೊದಲ ಬಲಿಯಾಗಿ ನಿರ್ಗಮಿಸಿದರು.
ಅದಾದ ಬಳಿಕ ಶತಕವನ್ನು ಸಿಡಿಸಿ ಟೀಮ್ ಇಂಡಿಯಾಗೆ ಕಗ್ಗಂಟಾಗಿದ್ದ ಮಾರ್ನಸ್ ಲ್ಯಾಬುಶೇನ್ ಕೂಡ ನಟರಾಜನ್ ಎಸೆತವನ್ನು ಸರಿಯಾಗಿ ಗ್ರಹಿಸಲು ಸಾಧ್ಯವಾಗದೆ ಕೀಪರ್ ರಿಷಭ್ ಪಂತ್ಗೆ ಕ್ಯಾಚ್ ನೀಡಿದರು. 108 ರನ್ಗಳಿಗೆ ಲಾಬುಶೇನ್ ತಮ್ಮ ಇನ್ನಿಂಗ್ಸ್ ಅಂತ್ಯಗೊಳಿಸಿದರು. ಹೀಗೆ ಮೊದಲ ದಿನದಲ್ಲಿ ಎರಡು ದೊಡ್ಡ ವಿಕೆಟ್ ಪಡೆಯುವಲ್ಲಿ ಟಿ ನಟರಾಜನ್ ಯಶಸ್ವಿಯಾಗಿದ್ದಾರೆ. ಈ ಮೂಲಕ ಮೂರು ಮಾದರಿಯ ಕ್ರಿಕೆಟ್ನಲ್ಲೂ ನಟರಾಜನ್ ಪದಾರ್ಪಣಾ ಪಂದ್ಯದಲ್ಲೇ ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ.
This News Article is a Copy of MYKHEL
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm