ಬ್ರೇಕಿಂಗ್ ನ್ಯೂಸ್
17-01-21 03:46 pm Source: MYKHEL Madhukara Shetty ಕ್ರೀಡೆ
ಟೀಮ್ ಇಂಡಿಯಾದ ಆಲ್ರೌಂಡರ್ ವಾಶಿಂಗ್ಟನ್ ಸುಂದರ್ ಹಾಗೂ ವೇಗಿ ಶಾರ್ದೂಲ್ ಠಾಕೂರ್ ಆಸ್ಟ್ರೇಲಿಯಾ ವಿರುದ್ಧ ಬ್ರಿಸ್ಬೇನ್ನಲ್ಲಿ ನಡೆಯುತ್ತಿರುವ ನಾಲ್ಕನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ನಲ್ಲಿ ಬ್ಯಾಟಿಂಗ್ನಲ್ಲಿ ಅದ್ಭುತವಾದ ಪ್ರದರ್ಶನವನ್ನು ನೀಡಿದರು. ಈ ಶ್ರೇಷ್ಠ ಪ್ರದರ್ಶನಕ್ಕೆ ಟೀಮ್ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಪ್ರಶಂಸೆಯನ್ನು ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ.
ಚೊಚ್ಚಲ ಪಂದ್ಯವನ್ನಾಡುತ್ತಿರುವ ವಾಶಿಂಗ್ಟನ್ ಸುಂದರ್ ಹಾಗೂ ಎರಡನೇ ಟೆಸ್ಟ್ನಲ್ಲಿ ಕಣಕ್ಕಿಳಿದಿರುವ ಶಾರ್ದೂಲ್ ಠಾಕೂರ್ ಜೋಡಿ 7ನೇ ವಿಕೆಟ್ಗೆ 217 ಎಸೆತಗಳಲ್ಲಿ 123 ರನ್ಗಳ ಅದ್ಭುತ ಜೊತೆಯಾಟವನ್ನು ನೀಡುವ ಮೂಲಕ ಪಂದ್ಯದಲ್ಲಿ ಭಾರತ ಮರಳಿ ಹೋರಾಟದ ಹಾದಿಗೆ ತಂದಿರಿಸಿದರು. ಈ ಜೋಡಿ ಕಣಕ್ಕಿಳಿಯುವ ವೇಳೆಗೆ ಭಾರತ ತಂಡ 186 ರನ್ಗಳಿಗೆ 6 ವಿಕೆಟ್ ಕಳೆದುಕೊಂಡು ಸಂಕಷ್ಟದ ಸ್ಥಿತಿಯಲ್ಲಿತ್ತು.
"ವಾಶಿಂಗ್ಟನ್ ಸುಂದರ್ ಹಾಗೂ ಶಾರ್ದೂಲ್ ಠಾಕೂರ್ ನಿಮ್ಮಿಂ ನಂಬಿಕಾರ್ಹವಾದ ಹಾಗೂ ಶ್ರೇಷ್ಠವಾದ ಪ್ರದರ್ಶನ. ಟೆಸ್ಟ್ ಕ್ರಿಕೆಟ್ನ ಶ್ರೇಷ್ಠತೆಯೇ ಇದು. ಮೊದಲ ಪಂದ್ಯದಲ್ಲೇ ವಾಶಿ ಅದ್ಭುತವಾದ ಹಿಡಿತ ಮತ್ತು ಹ್ಯಾಟ್ಸ್ಆಫ್ ಟು ಯೂ ಠಾಕೂರ್" ಎಂದು ವಿರಾಟ್ ಕೊಹ್ಲಿ ಟ್ವೀಟ್ ಮೂಲಕ ಇಬ್ಬರು ಆಟಗಾರರ ಪ್ರದರ್ಶನವನ್ನು ವಿರಾಟ್ ಕೊಹ್ಲಿ ಕೊಂಡಾಡಿದ್ದಾರೆ. ಆಸ್ಟ್ರೇಲಿಯಾ ಮೊದೊಲ ಇನ್ನಿಂಗ್ಸ್ನಲ್ಲಿ 369 ರನ್ ಗಳಿಸಿದ್ದು ಅದಕ್ಕೆ ಪ್ರತಿಯಾಗಿ ಭಾರತ ಮೊದಲ ಇನ್ನಿಂಗ್ಸ್ನಲ್ಲಿ 336 ರನ್ ಗಳಿಸಿದೆ. ಶಾರ್ದೂಲ್ ಠಾಕೂರ್ ಹಾಗೂ ವಾಶಿಂಗ್ಟನ್ ಸುಂದರ್ ಅರ್ಧ ಶತಕವನ್ನು ಹೊರತು ಪಡಿಸಿದರೆ ರೋಹಿತ್ ಶರ್ಮಾ 44 ರನ್, ಮಯಾಂಕ್ ಅಗರ್ವಾಲ್ 38 ರನ್ ಹಾಗೂ ಅಜಿಂಕ್ಯ ರಹಾನೆ 37 ರನ್ ಬ್ಯಾಟಿಂಗ್ ಮೂಲಕ ಕೊಡುಗೆ ನೀಡಿದ ಇತರ ಆಟಗಾರರಾಗಿದ್ದಾರೆ.
ಜೋಶ್ ಹ್ಯಾಜಲ್ವುಡ್ ಆಸ್ಟ್ರೇಲಿಯಾ ತಮಡದ ಪರವಾಗಿ 5 ವಿಕೆಟ್ಗಳ ಗೊಂಚಲನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಇದು ಟೆಸ್ಟ್ ಕ್ರಿಕೆಟ್ನಲ್ಲಿ ಅವರ 9ನೇ ಐದು ವಿಕೆಟ್ಗಳ ಗೊಂಚಲಾಗಿದೆ. ಸ್ಟಾರ್ಕ್ ಹಾಗೂ ಪ್ಯಾಟ್ ಕಮ್ಮಿನ್ಸ್ ತಲಾ ಎರಡು ವಿಕೆಟ್ ಪಡೆಯುವ ಮೂಲಕ ಮಿಂಚಿದ್ದಾರೆ
This News Article is a Copy of MYKHEL
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm