ಬ್ರೇಕಿಂಗ್ ನ್ಯೂಸ್
18-01-21 03:32 pm Source: MYKHEL Madhukara Shetty ಕ್ರೀಡೆ
ಭಾರತೀಯ ಕ್ರಿಕೆಟ್ ಕಂಡ ಶ್ರೇಷ್ಠ ಸ್ಪಿನ್ ಬೌಲರ್ ದಿಗ್ಗಜ ಆಟಗಾರ ಬಿಎಸ್ ಚಂದ್ರಶೇಖರ್ ಅನಾರೋಗ್ಯದಿಂದ ಬಳಲುತ್ತಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಿಎಸ್ ಚಂದ್ರಶೇಖರ್ ಅವರಿಗೆ 75 ವರ್ಷ ವಯಸ್ಸಾಗಿದ್ದು ಬೆಂಗಳೂರಿನ ಖಾಸಗೀ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ದಾರೆ.
ಬಿಎಸ್ ಚಂದ್ರ ಶೇಖರ್ ಅವರ ಆರೋಗ್ಯದ ಬಗ್ಗೆ ಆಸ್ಪತ್ರೆಯ ಮೂಲಗಳು ಮಾಹಿತಿಯನ್ನು ನೀಡಿದ್ದಾರೆ. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಚಂದ್ರಶೇಖರ್ ಅವರ ಆರೋಗ್ಯ ಸ್ಥಿರವಾಗಿದ್ದು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ವೈದ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಬಿಎಸ್ ಚಂದ್ರಶೇಖರ್ 1960-70ರ ದಶಕದಲ್ಲಿ ಭಾರತೀಯ ಕ್ರಿಕೆಟ್ ತಂಡದ ಅವಿಭಾಜ್ಯ ಅಂಗವಾಗಿದ್ದರು. ಸ್ಪಿನ್ ಬೌಲಿಂಗ್ ಮೂಲಕ ಎದುರಾಳಿ ಬ್ಯಾಟ್ಸ್ಮನ್ಗಳನ್ನು ಕಂಗೆಡಿಸಿದ್ದರು. ಇಎಎಸ್ ಪ್ರಸನ್ನ, ಬಿಷನ್ ಸಿಂಗ್ ಬೇಡಿ ಹಾಗೂ ಎಸ್ ವೆಂಕಟ ರಾಘವನ್ ಅವರ ಜೊತೆಗೆ ಬಿಎಸ್ ಚಂದ್ರ ಶೇಖರ್ ಭಾರತ ತಂಡದ ದೊಡ್ಡ ಅಸ್ತ್ರವಾಗಿದ್ದರು. ಚಂದ್ರ ಶೇಖರ್ 16 ವರ್ಷಗಳ ಕಾಲ ಅಂತಾರಾಷ್ಟರೀಯ ಕ್ರಿಕೆಟ್ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದಾರೆ. ಈ ಅವಧಿಯಲ್ಲಿ ಅವರು 58 ಟೆಸ್ಟ್ ಪಂದ್ಯಗಳಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದು 242 ವಿಕೆಟ್ಗಳನ್ನು ಕಿತ್ತಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಗಳಿಸಿದ ರನ್ಗಿಂತ ಅಧಿಕ ವಿಕೆಟ್ ಪಡೆದ ವಿಶ್ವದ ಕೇವಲ ಇಬ್ಬರೇ ಆಟಗಾರರ ಪೈಕಿ ಚಂದ್ರ ಶೇಖರ್ ಕೂಡ ಒಬ್ಬರಾಗಿದ್ದಾರೆ. ಟೆಸ್ಟ್ ಕ್ರಿಕೆಟ್ನಲ್ಲಿ ಚಂದ್ರ ಶೇಖರ್ ಒಟ್ಟಾರೆ 167 ರನ್ ಗಳಿಸಿದ್ದಾರೆ.
1972ರಲ್ಲಿ ಚಂದ್ರ ಶೇಖರ್ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದರು. 2002ರಲ್ಲಿ ವಿಸ್ಡನ್ನ "ಶತಮಾನದ ಅತ್ಯುತ್ತಮ ಬೌಲಿಂಗ್ ಪ್ರದರ್ಶನ" ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದರು. ಬಿಎಸ್ ಚಂದ್ರಶೇಖರ್ ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆಯಲ್ಲಿ ಕ್ರಿಕೆಟ್ ಪ್ರೇಮಿಗಳು ಅವರ ಶೀಘ್ರ ಚೇತರಿಕೆಗಾಗಿ ಹಾರೈಸುತ್ತಿದ್ದಾರೆ.
This News Article is a Copy of MYKHEL
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm