ಬ್ರೇಕಿಂಗ್ ನ್ಯೂಸ್
20-01-21 02:42 pm Source: MYKHEL Madhukara Shetty ಕ್ರೀಡೆ
ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಸರಣಿ ಅಂತ್ಯವಾಗಿದ್ದು ಟೀಮ್ ಇಂಡಿಯಾ 2-1 ಅಂತರದಿಂದ ಸರಣಿಯನ್ನು ಸತತ ಎರಡನೇ ಬಾರಿಗೆ ಕೈವಶ ಮಾಡಿಕೊಂಡಿದೆ. ಈ ಸರಣಿಯ ಬಳಿಕ ಐಸಿಸಿ ಶ್ರೇಯಾಂಕ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು ಬ್ಯಾಟ್ಸ್ಮನ್ಗಳ ಪಟ್ಟಿಯಲ್ಲಿ ಟೀಮ್ ಇಂಡಿಯಾದ ಖಾಯಂ ನಾಯಕ ವಿರಾಟ್ ಕೊಹ್ಲಿ ಹಿನ್ನೆಡೆ ಅನುಭವಿಸಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ವಿರಾಟ್ ಕೊಹ್ಲಿ ಕೇವಲ 1 ಪಂದ್ಯವನ್ನಷ್ಟೇ ಆಡಿ ಬಳಿಕ ಪಿತೃತ್ವದ ರಜೆಯಲ್ಲಿ ಭಾರತಕ್ಕೆ ಮರಳಿದ್ದರು. ಹೀಗಾಗಿ ವಿರಾಟ್ ಕೊಹ್ಲಿ ಟೆಸ್ಟ್ ಶ್ರೇಯಾಂಕದಲ್ಲಿ ಕುಸಿತವನ್ನು ಕಂಡಿದ್ದಾರೆ. ಆಸ್ಟ್ರೇಲಿಯಾದ ಯುವ ಆಟಗಾರ ಮಾರ್ನಾಸ್ ಲಾಬುಶೇನ್ ಮೂರನೇ ಸ್ಥಾನಕ್ಕೇರುವಲ್ಲಿ ಯಶಸ್ವಿಯಾಗಿದ್ದು ವಿರಾಟ್ ಕೊಹ್ಲಿ ನಾಲ್ಕನೇ ಸ್ಥಾನಕ್ಕೆ ಕುಸಿದಿದ್ದಾರೆ.
ಬ್ಯಾಟ್ಸ್ಮನ್ಗಳ ಪಟ್ಟಿಯಲ್ಲಿ ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಅಗ್ರ ಸ್ಥಾನದಲ್ಲಿ ಮುಂದುವರಿಸಿದ್ದಾರೆ. ಆರಂಭಿಕ ಎರಡು ಪಂದ್ಯಗಳಲ್ಲಿ ಕಳಪೆ ಪ್ರದರ್ಶನದ ಬಳಿಕ ಫಾರ್ಮ್ ಕಂಡುಕೊಂಡ ಸ್ಮಿತ್ ಎರಡನೇ ಸ್ಥಾನವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಟೆಸ್ಟ್ ಸರಣಿಯಲ್ಲಿ ಅದ್ಭುತ ಪ್ರದರ್ಶನ ತೋರಿದ ಮಾರ್ನಾಸ್ ಲ್ಯಾಬುಶೇನ್ ಮೂರನೇ ಸ್ಥಾನಕ್ಕೇರಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧದ ಸರಣಿಯ ಬಳಿಕ ಪ್ರಕಟವಾದ ಈ ಶ್ರೇಯಾಂಕ ಪಟ್ಟಿಯಲ್ಲಿ ಅತಿ ಹೆಚ್ಚು ಗಳಿಕೆಯನ್ನು ಕಂಡ ಬ್ಯಾಟ್ಸ್ಮನ್ ಎಂದರೆ ಅದು ಟೀಮ್ ಇಂಡಿಯಾದ ವಿಕೆಟ್ ಕೀಪರ್ ರಿಷಭ್ ಪಂತ್. ಗಾಬಾ ಅಂಗಳದಲ್ಲಿ ಮ್ಯಾಚ್ ವಿನ್ನಿಂಗ್ ಪ್ರದರ್ಶನ ನೀಡಿ ತಂಡದ ಗೆಲುವಿಗೆ ಕಾರಣರಾದ ಪಂತ್ ತಮ್ಮ ವೃತ್ತಿ ಜೀವನದಲ್ಲಿ ಮೊದಲ ಬಾರಿಗೆ 13ನೇ ಸ್ಥಾನಕ್ಕೇರಿದ್ದಾರೆ. ಈ ಮೂಲಕ ವಿಕೆಟ್ ಕೀಪರ್ಗಳ ಪೈಕಿ ಅತಿ ಹೆಚ್ಚು ಶ್ರೇಯಾಂಕ ಹೊಂದಿರುವ ಆಟಗಾರ ಎನಿಸಿಕೊಂಡಿದ್ದಾರೆ.
This News Article is a Copy of MYKHEL
↗️ Labuschagne moves to No.3
— ICC (@ICC) January 20, 2021
↗️ Root enters top five
↗️ Pujara moves up one spot to No.7
The latest @MRFWorldwide ICC Test Player Rankings for batting are out!
Full rankings: https://t.co/OMjjVx5Mgf pic.twitter.com/49DbXmXznS
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm