ಬ್ರೇಕಿಂಗ್ ನ್ಯೂಸ್
22-01-21 04:12 pm Source: MYKHEL Madhukara Shetty ಕ್ರೀಡೆ
ಬರೋಡಾ ಕ್ರಿಕೆಟಿಗ ದೀಪಕ್ ಹೂಡಾ ಅವರನ್ನು ಬರೋಡಾ ಕ್ರಿಕೆಟ್ ಅಸೋಸಿಯೇಶನ್ ಪ್ರಸಕ್ತ ಕ್ರಿಕೆಟ್ ಋತುವಿಗೆ ಸಂಪೂರ್ಣವಾಗಿ ಅಮಾನತುಗೊಳಿಸುವ ತೀರ್ಮಾ ಕೈಗೊಂಡಿದೆ. ಜನವರಿ 21ರಂದು ಅಪೆಕ್ಸ್ ಕೌನ್ಸಿಲ್ ಮೀಟಿಂಗ್ನಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಮಂಡಳಿಯ ಈ ನಿರ್ಧಾರಕ್ಕೆ ಕೆಲ ಸದಸ್ಯರಯ ವಿರೋಧವನ್ನು ವ್ಯಕ್ತಪಡಿಸಿರುವ ಘಟನೆ ಕೂಡ ನಡೆಯಿತು.
ಬರೋಡಾ ತಂಡದ ನಾಯಕ ಕೃನಾಲ್ ಪಾಂಡ್ಯ ಜೊತೆಗೆ ಮಾತಿನ ಚಕಮಕಿಯ ನಂತರ ದೀಪಕ್ ಹೂಡ ಅಸಮಾಧಾನಗೊಂಡು ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿಯ ಆರಂಭಕ್ಕೆ ಕೆಲವೇ ಗಂಟೆಗಳಿರುವಾಗ ಹೊರಬಂದಿದ್ದರು. ದೀಪಕ್ ಹೂಡಾ ಅವರ ಈ ವರ್ತನೆ ಬರೋಡಾ ಕ್ರಿಕೆಟ್ ಮಂಡಳಿಯ ಆಕ್ರೋಕ್ಕೆ ಕಾರಣವಾಗಿದೆ.
"ಪ್ರಸಕ್ತ ದೇಶೀಯ ಋತುವಿನಲ್ಲಿ ದೀಪಕ್ ಹೂಡಾ ಅವರನ್ನು ಬರೋಡಾ ತಂಡವನ್ನು ಪ್ರತಿನಿಧಿಸಲು ಪರಿಗಣಿಸಲಾಗುವುದಿಲ್ಲ ಎಂದು ಅಪೆಕ್ಸ್ ಕೌನ್ಸಿಲ್ ನಿರ್ಧರಿಸಿದೆ. ಘಟನೆಯ ಬಗ್ಗೆ ತಂಡದ ಮ್ಯಾನೇಜರ್ ಮತ್ತು ತರಬೇತುದಾರರ ವರದಿಗಳು ಹಾಗೂ ಹೂಡಾ ಅವರೊಂದಿಗಿನ ಮಾತುಕತೆಯನ್ನು ಪರಿಗಣಿಸಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ" ಎಂದು ಬರೋಡಾ ಮಂಡಳಿ ಹೇಳಿದೆ. ದೀಪಕ್ ಹೂಡಾ ಅವರು ಪ್ರಸಕ್ತ ನಡೆಯುತ್ತಿರುವ ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಹಾಗೂ ಈ ಋತುವಿನ ಮುಂಬರುವ ಟೂರ್ನಿಗಳಲ್ಲೂ ಪಾಲ್ಗೊಳ್ಳಲು ಸಾಧ್ಯವಾಗುವುದಿಲ್ಲ. 2021-22ರ ಋತುವಿನಲ್ಲಿ ಹೂಡಾ ಅವರು ಮತ್ತೆ ಆಡುವ ಅಚಕಾಶ ಪಡೆಯಲಿದ್ದಾರೆ" ಎಂದು ಬಿಸಿಎನ ಮಾಧ್ಯಮ ಮತ್ತು ಪ್ರಚಾರ ಸಮಿತಿಯ ಮುಖ್ಯಸ್ಥ ಸತ್ಯಜಿತ್ ಗಾಯಕ್ವಾಡ್ ಹೇಳಿದ್ದಾರೆ.
ಆದರೆ ಬಿಸಿಎ ತೆಗೆದುಕೊಮಡಿರುವ ಈ ನಿರ್ಧಾರಕ್ಕೆ ಬಿಸಿಎ ಜೊತೆ ಕಾರ್ಯದರ್ಶಿ ಪರಾಗ್ ಪಟೇಲ್ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ಹೂಡಾ ಅವರು ಮಾಡಿರುವ ತಪ್ಪೆಂದರೆ ತಂಡದ ಮ್ಯಾನೇಜ್ಮೆಂಟ್ ಜೊತೆಗೆ ಘಟನೆಯ ಬಗ್ಗೆ ಚರ್ಚಿಸದೆ ತಂಡದಿಂದ ಹೊರನಡೆದಿದ್ದಾರೆ. ಆದರೆ ಅದಕ್ಕಾಗಿ ಇಡೀ ಋತುವಿನಿಂದ ಅವರನ್ನು ಅಮಾನತು ಮಾಡುವುದು ಅನಗತ್ಯವಾಗಿತ್ತು. ಆತನ ಕೃತ್ಯವನ್ನು ಖಂಡಿಸಿ ಆತನಿಗೆ ಅವಕಾಶವನ್ನು ನೀಡಬಹುದಾಗಿತ್ತು ಎಂದಿದ್ದಾರೆ ಪರಾಗ್ ಪಟೇಲ್.
This News Article is a Copy of MYKHEL
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm