ಬ್ರೇಕಿಂಗ್ ನ್ಯೂಸ್
29-01-21 02:51 pm Source: MYKHEL Sadashiva ಕ್ರೀಡೆ
ಮೆಲ್ಬರ್ನ್: ಮೂಲತಃ ಭಾರತದವರಾದ, ಪಂಜಾಬ್ನಿಂದ ವಲಸೆ ಹೋಗಿರುವ ರೈತನ ಮಗ ತನ್ವೀರ್ ಸಂಘ ಅವರು ಆಸ್ಟ್ರೇಲಿಯಾ ರಾಷ್ಟ್ರೀಯ ಕ್ರಿಕೆಟ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಆಸ್ಟ್ರೇಲಿಯಾ ತಂಡದಲ್ಲಿ ಅರ್ಹತೆ ಗಿಟ್ಟಿಸಿಕೊಂಡ ಕೇವಲ ಎರಡನೇ ಭಾರತ ಮೂಲದ ಆಟಗಾರನಾಗಿ 19ರ ಹರೆಯದ ತನ್ವೀರ್ ಗುರುತಿಸಿಕೊಂಡಿದ್ದಾರೆ.
ಫೆಬ್ರವರಿಯಲ್ಲಿ ನಡೆಯಲಿರುವ ಆಸ್ಟ್ರೇಲಿಯಾ-ನ್ಯೂಜಿಲೆಂಡ್ ಟಿ20ಐ ಸರಣಿಗಾಗಿ ಕ್ರಿಕೆಟ್ ಆಸ್ಟ್ರೇಲಿಯಾ (ಸಿಎ) ಪ್ರಕಟಿಸಿರುವ 18 ಮಂದಿಯ ತಂಡದಲ್ಲಿ ಲೆಗ್ ಸ್ಪಿನ್ನರ್ ಆಗಿರುವ ತನ್ವೀರ್ ಸಂಘ ಕೂಡ ಇದ್ದಾರೆ. ಆಸ್ಟ್ರೇಲಿಯಾ ತಂಡಕ್ಕೆ ಆಯ್ಕೆಯಾಗಿರುವ ಬಗ್ಗೆ ತನ್ವೀರ್ ಖುಷಿ ವ್ಯಕ್ತಪಡಿಸಿದ್ದಾರೆ. 'ಆಸ್ಟ್ರೇಲಿಯಾ ರಾಷ್ಟ್ರೀಯ ತಂಡಕ್ಕೆ ಕರೆ ಬಂದಾಗ ನನಗೆ ಚಂದ್ರಲೋಕಕ್ಕೆ ಹೋದಷ್ಟು ಖುಷಿಯಾಯ್ತು. ಕಡೆಗೂ ತಂಡದಲ್ಲಿ ಸ್ಥಾನ ಸಿಕ್ಕಿದೆ. ಇಷ್ಟು ಸಣ್ಣ ವಯಸ್ಸಿನಲ್ಲಿ ಆಸೀಸ್ ತಂಡದಲ್ಲಿ ಸ್ಥಾನ ಸಿಗಬಹುದು ಎಂದು ನಾನು ನಿರೀಕ್ಷಿಸಿರಲಿಲ್ಲ,' ಎಂದು ಟೈಮ್ಸ್ ಆಫ್ ಇಂಡಿಯಾ ಜೊತೆ ತನ್ವೀರ್ ಹೇಳಿಕೊಂಡಿದ್ದಾರೆ.
ಭಾರತದಲ್ಲಿ ಜನಿಸಿದ ಒಂದಿಷ್ಟು ಆಟಗಾರರು ಈ ಹಿಂದೆ ಆಸ್ಟ್ರೇಲಿಯಾ ತಂಡಗಳ ಪರ ಆಡಿದ್ದು ಇದೆ. ಆದರೆ ಅದು ದೇಸಿ ಕ್ರಿಕೆಟ್ ಅಥವಾ ಅಂಡರ್ 19 ತಂಡದಲ್ಲಿ. ಜೇಸನ್ ಸಂಘ, ಅರ್ಜುನ್ ನಾಯರ್, ಪರಮ್ ಉಪ್ಪಾಲ್ ಇವರೆಲ್ಲ ಭಾರತ ಮೂಲದ ಆಸ್ಟ್ರೇಲಿಯಾ ಆಟಗಾರರು. ಆದರೆ ಪಂಜಾಬ್ ಮೂಲದ ಗುರೀಂದರ್ ಸಂದು ಮತ್ತು ಸನ್ವೀರ್ ಸಂಘ ಇಬ್ಬರೇ ಆಸ್ಟ್ರೇಲಿಯಾ ರಾಷ್ಟ್ರೀಯ ತಂಡದ ಪರ ಆಯ್ಕೆಯಾದವರು.
This News Article is a Copy of MYKHEL
15-05-25 11:59 am
HK News Desk
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
15-05-25 03:33 pm
Mangalore Correspondent
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
15-05-25 06:02 pm
Bangalore Correspondent
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm