ಬ್ರೇಕಿಂಗ್ ನ್ಯೂಸ್
01-02-21 04:11 pm Source: MYKHEL Madhukara Shetty ಕ್ರೀಡೆ
ಟೀಮ್ ಇಂಡಿಯಾ ಆಸ್ಟ್ರೇಲಿಯಾ ನೆಲದಲ್ಲಿ ಸಾಧಿಸಿದ ದಿಗ್ವಿಜಯ ಕ್ರಿಕೆಟ್ ಪ್ರೇಮಿಗಳಿಗೆ ಸುದೀರ್ಘ ಕಾಲ ನೆನಪಿನಲ್ಲಿ ಉಳಿಯುಂತಾ ಕ್ಷಣ. ಆಸಿಸ್ ನೆಲದಲ್ಲಿ ಭಾರತ ಸರಣಿ ಗೆದ್ದ ರೀತಿಗೆ ವಿಶ್ವ ಕ್ರಿಕೆಟ್ ಲೋಕವೇ ತಲೆದೂಗಿದೆ. ಈಗ ಈ ಗೆಲುವಿನ ಸಾಹಸಗಾಥೆ ಭಾರತದ ಕೇಂದ್ರ ಸರ್ಕಾರದ ಬಜೆಟ್ ಭಾಷಣದ ವೇಳೆಯಲ್ಲಿಯೂ ಉಲ್ಲೇಖವಾಗಿದೆ.
ಫೆಬ್ರವರಿ 1ರಂದು ಕೇಂದ್ರ ಸರ್ಕಾರದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು 2021-22ನೇ ಸಾಲಿನ ಬಜೆಟ್ಅನ್ನು ಪಾರ್ಲಿಮೆಂಟ್ನಲ್ಲಿ ಮಂಡಿಸಿದರು. ಈ ಸಂದರ್ಭದಲ್ಲಿ ಆಸ್ಟ್ರೇಲಿಯಾ ನೆಲದಲ್ಲಿ ಭಾರತೀಯ ಕ್ರಿಕೆಟ್ ತಂಡ ಸಾಧಿಸಿದ ಅಮೋಘ ಜಯವನ್ನು ನಿರ್ಮಲಾ ಸೀತಾರಾಮನ್ ಅವರು ಉದಾಹರಣೆಯಾಗಿ ನೀಡಿದರು.
ಕ್ರಿಕೆಟ್ಅನ್ನು ಪ್ರೀತಿಸುವ ದೇಶವಾಗಿ ಭಾರತ ಕ್ರಿಕೆಟ್ ತಂಡ ಆಸ್ಟ್ರೇಲಿಯಾದಲ್ಲಿ ಸಾಧಿಸಿದ ಅಭೂತಪೂರ್ವ ಯಶಸ್ಸನ್ನು ಸ್ಮರಿಸಿಕೊಳ್ಳುತ್ತೇನೆ" ಎಂದು ನಿರ್ಮಲಾ ಸೀತಾರಾಮನ್ ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್ ಗವಾಸ್ಕರ್ ಟ್ರೋಫಿಯನ್ನು ವಶಕ್ಕೆ ಪಡೆದುಕೊಂಡ ಟೀಮ್ ಇಂಡಿಯಾ ಸಾಧನೆಗೆ ಪ್ರಶಂಸೆಯನ್ನು ವ್ಯಕ್ತಪಡಿಸಿದರು. "ಈ ಗೆಲುವು ನಮಗೆ ವ್ಯಕ್ತಿಗಳಾಗಿ ನಾವು ಅದರಲ್ಲೂ ವಿಶೇಷವಾಗಿ ನಮ್ಮ ಯುವಕರು ಹೊಂದಿರುವ ಸಾಮರ್ಥ್ಯ ಹಾಗೂ ಗೆಲುವನ್ನು ಪಡೆಯುವ ಸಲುವಾಗಿ ಹೇರಳವಾದ ಭರವಸೆಯನ್ನು ನಮಗೆ ನೆನಪಿಸಿದೆ" ಎಂದು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧದ ಟೀಮ್ ಇಂಡಿಯಾ ಮೊದಲ ಟೆಸ್ಟ್ನಲ್ಲಿ 36 ರನ್ಗೆ ಎರಡನೇ ಇನ್ನಿಂಗ್ಸ್ನಲ್ಲಿ ಆಲೌಟ್ ಆಗಿ ಹೀನಾಯ ಸೋಲು ಕಂಡಿತ್ತು. ಆದರೆ ಈ ಸೋಲಿನಿಂದ ಅದ್ಭುತವಾಗಿ ತಿರುಗಿ ಬೀಳಲು ಯಶಸ್ವಿಯಾದ ತಂಡ ಮುಂದಿನ ಮೂರು ಪಂದ್ಯಗಳಲ್ಲಿ ಎರಡು ಪಂದ್ಯವನ್ನು ಗೆದ್ದು ಮತ್ತೊಂದು ಪಂದ್ಯವನ್ನು ಡ್ರಾ ಮಾಡಿಕೊಂಡು ಬಾರ್ಡರ್ ಗವಾಸ್ಕರ್ ಟ್ರೋಫಿಯನ್ನು ಮತ್ತೊಮ್ಮೆ ವಶಕ್ಕೆ ಪಡೆಯಲು ಯಶಸ್ವಿಯಾಗಿತ್ತು.
This News Article is a Copy of MYKHEL
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm