ಬ್ರೇಕಿಂಗ್ ನ್ಯೂಸ್
01-02-21 05:17 pm Source: MYKHEL Madhukara Shetty ಕ್ರೀಡೆ
ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿಯ ಪತ್ನಿ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಕಳೆದ ತಿಂಗಳು ಮೊದಲನೇ ಮಗುವಿಗೆ ಜನ್ಮ ನೀಡಿದರು. ಹೆಣ್ಣು ಮಗುವಿಗೆ ಹೆತ್ತವರಾದ ಸಂಭ್ರಮದಲ್ಲಿರುವ ಈ ದಂಪತಿ ಈಗ ಮಗುವಿನ ಹೆಸರನ್ನು ಘೋಷಿಸಿದ್ದಾರೆ. ಅನುಷ್ಕಾ ಶರ್ಮಾ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಪುತ್ರಿಯ ಜೊತೆಗಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ.
ವಿರಾಟ್ ಕೊಹ್ಲಿ ಹಾಗೂ ಅನುಷ್ಕಾ ಶರ್ಮಾ ತಮ್ಮ ಪುತ್ರಿಗೆ "ವಮಿಕಾ" ಎಂದು ನಾಮಕರಣ ಮಾಡಿದ್ದಾರೆ. ಫೋಟೋ ಜೊತೆಗೆ ಸುಂದರ ಸಾಲುಗಳನ್ನು ಬರೆದುಕೊಂಡು ಅನುಷ್ಕಾ ತಮ್ಮ ಪುತ್ರಿಯ ಹೆಸರನ್ನು ಮೊದಲ ಬಾರಿಗೆ ಅಭಿಮಾನಿಗಳೊಂದಿಗೆ ಹಂಚಿಕೊಂಡದ್ದಾರೆ.
"ನಾವು ಪ್ರೀತಿ, ಕೃತಜ್ಞತೆ ಉಪಸ್ಥಿತಿಯೊಂದಿಗೆ ಜೊತೆಯಾಗಿ ವಾಸಿಸುತ್ತಿದ್ದೇವೆ. ಆದರೆ ಈಗ ಪುಟ್ಟ ವಮಿಕಾ ಅದನ್ನು ಇನ್ನೊಂದು ಮಟ್ಟಕ್ಕೆ ತೆಗದುಕೊಂಡು ಹೋಗುತ್ತಿದ್ದಾಳೆ. ಕಣ್ಣೀರು, ನಗು, ಚಿಂತೆ, ಆನಂದ ಕೆಲವೊಮ್ಮೆ ನಿಮಿಷಗಳ ಅಂತರದಲ್ಲಿ ಅನುಭವಿಸಿದ ಭಾವನೆಗಳು" ಎಂದು ಅನುಷ್ಕಾ ಶರ್ಮಾ ಟ್ವಿಟ್ಟರ್ನಲ್ಲಿ ಬರೆದುಕೊಂಡಿದ್ದಾರೆ. ಈ ಎಲ್ಲಾ ಭಾವನೆಗಳಿಗಿಂತ ಪುತ್ರಿಯ ಸಾಂಗತ್ಯ ಮಿಗಿಲು ಎಂಬರ್ಥದ ಸಾಲುಗಳನ್ನು ಅನುಷ್ಕಾ ಶರ್ಮ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ವಿರಾಟ್ ಕೊಹ್ಲಿ ಸದ್ಯ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗಾಗಿ ಟೀಮ್ ಇಂಡಿಯಾವನ್ನು ಸೇರಿಕೊಂಡಿದ್ದಾರೆ. ಸದ್ಯ ಚೆನ್ನೈಗೆ ಬಂದಿಳಿದಿರುವ ವಿರಾಟ್ ಕೊಹ್ಲಿ ಹೋಟೆಲ್ ಕ್ವಾರಂಟೈನ್ ಪೂರೈಸುತ್ತಿದ್ದಾರೆ. ಫೆಬ್ರವರಿ 5ರಿಂದ ಆರಂಭವಾಗಲಿರುವ ಟೆಸ್ಟ್ ಸರಣಿಯಲ್ಲಿ ವಿರಾಟ್ ಮತ್ತೆ ಟೀಮ್ ಇಂಡಿಯಾದ ಚುಕ್ಕಾಣಿ ಹಿಡಿಯಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ಅಡಿಲೇಡ್ನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಪಾಲ್ಗೊಂಡ ಬಳಿಕ ವಿರಾಟ್ ಕೊಹ್ಲಿ ತವರಿಗೆ ಮರಳಿದ್ದರು. ಮೊದಲ ಮಗುವಿನ ಜನನದ ನಿರೀಕ್ಷೆಯಲ್ಲಿದ್ದ ವಿರಾಟ್ ಕೊಹ್ಲಿ ಆಸಿಸ್ ವಿರುದ್ಧದ ಅಂತಿಮ ಮೂರು ಟೆಸ್ಟ್ ಪಂದ್ಯಗಳಿಗೆ ಅಲಭ್ಯರಾಗಿದ್ದರು. ಜನವರಿ 11ರಂದು ಅನುಷ್ಕಾ ಶರ್ಮಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು.
This News Article is a Copy of MYKHEL
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm