ಬ್ರೇಕಿಂಗ್ ನ್ಯೂಸ್
02-02-21 02:56 pm Source: MYKHEL Madhukara Shetty ಕ್ರೀಡೆ
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಎರಡು ಪಂದ್ಯಗಳಿಗೆ ಹೆಸರಿಸಿರುವ ತಂಡದಲ್ಲಿ ವೇಗಿ ನಟರಾಜನ್ ಆಯ್ಕೆಯಾಗಿಲ್ಲ. ಹೀಗಾಗಿ ನಟರಾಜನ್ ಸದ್ಯ ತಮಿಳುನಾಡಿನಲ್ಲಿ ತಮ್ಮ ಕುಟುಂಬದೊಂದಿಗೆ ಸಮಯವನ್ನು ಕಳೆಯುತ್ತಿದ್ದಾರೆ. ಆದರೆ ಈ ಸಂದರ್ಭದಲ್ಲಿ ಅವರು ಟೀಮ್ ಇಂಡಿಯಾ ಬಳಗವನ್ನು ಮಿಸ್ ಮಾಡಿಕೊಳ್ಳುತ್ತಿದ್ದಾರೆ ಎಂದು ಸ್ವತಃ ನಟರಾಜನ್ ಹೇಳಿದ್ದಾರೆ.
ಆಸ್ಟ್ರೇಲಿಯಾ ಪ್ರವಾಸದಲ್ಲಿ ಟೀಮ್ ಇಂಡಿಯಾದ ಎಲ್ಲಾ ಮಾದರಿಯ ತಂಡದಲ್ಲೂ ಅವಕಾಶ ಪಡೆದಿದ್ದ ನಟರಾಜನ್ ಸುದೀರ್ಘ ಕಾಲ ತಂಡದ ಸದಸ್ಯರ ಜೊತೆಯಲ್ಲಿ ಬಯೋ ಬಬಲ್ನಲ್ಲಿದ್ದರು. ಆದರೆ ಜನವರಿ ಮಧ್ಯದಲ್ಲಿ ಆಸಿಸ್ ವಿರುದ್ಧದ ಸರಣಿ ಮುಕ್ತಾಯದೊದಿಗೆ ಟೀಮ್ ಇಂಡಿಯಾ ತವರಿಗೆ ಮರಳಿತು.
"ಕಳೆದ ಕಲ ತಿಂಗಳುಗಳಿಂದ ತಂಡದ ಭಾಗವಾಗಿದ್ದು ಸದಸ್ಯರ ಜೊತೆಯಲ್ಲಿ ಆತ್ಮೀಯವಾಗಿದ್ದೆ. ಈಗ ಖಂಡಿತವಾಗಿ ತಂಡವನ್ನು ಮಿಸ್ ಮಾಡಿಕೊಳ್ಳುತ್ತಿದ್ದೇನೆ. ಆದರೆ ಈ ವಿರಾಮದ ಅಗತ್ಯವನ್ನು ನಾನು ಅರ್ಥ ಮಾಡಿಕೊಳ್ಳುತ್ತೇನೆ. ಕಳೆದ ಆರು ತಿಂಗಳಿನಿಂದ ನಾನು ನನ್ನ ಕುಟುಂಬಕ್ಕೆ ಸಮಯವನ್ನು ನೀಡಿರಲಿಲ್ಲ. ಆದರೆ ಅದಕ್ಕೆ ಬೇಸರವಿಲ್ಲ. ಆದರೆ ತಂಡ ಚೆನ್ನೈನಲ್ಲಿ ಆಡುತ್ತಿರುವಾಗ ನಾನು ರಾಷ್ಟ್ರೀಯ ತಂಡದ ಭಾಗವಾಗದಿರುವ ಬಗ್ಗೆ ಖಂಡಿತಾ ನನಗೆ ಬೇಸರವಿದೆ" ಎಂದಿದ್ದಾರೆ ನಟರಾಜನ್. ಇನ್ನು ಇದೇ ಸಂದರ್ಭದಲ್ಲಿ ನಟರಾಜನ್ ಎಲ್ಲಾ ಮಾದರಿಯ ತಂಡದಲ್ಲೂ ಟೀಮ್ ಇಂಡಿಯಾದ ಭಾಗವಾಗಲು ಇಷ್ಟ ಪಡುತ್ತೇನೆ ಎಂದಿದ್ದಾರೆ. ಇದೇ ಸಂದರ್ಭದಲ್ಲಿ ಕೆಲಸದ ಒತ್ತಡವನ್ನೂ ನಿಭಾಯಿಸಿಕೊಳ್ಳುತ್ತೇನೆ ಎಂದು ನಟರಾಜನ್ ಹೇಳಿದ್ದಾರೆ.
"ನಾನು ಎಲ್ಲಾ ಮಾದರಿಯಲ್ಲೂ ಆಡುವ ಜೊತೆಗೆ ಕೆಲಸದ ಒತ್ತಡವನ್ನು ನಿಭಾಯಿಸುವತ್ತ ಗಮನಹರಿಸುತ್ತಿದ್ದೇನೆ. ನನ್ನ ಸಾಮರ್ಥ್ಯ ಹಾಗೂ ಸಹನೆಯ ಮಟ್ಟವನ್ನು ಏರಿಸಲು ಮುಮದಿನ ದಿನಗಳಲ್ಲಿ ಬಯಸುತ್ತೇನೆ. ನಾನು ನನ್ನ ಜೋವನದಲ್ಲಿ ಇದೇ ಮೊದಲ ಬಾರಿಗೆ ಸುದೀರ್ಘ 6 ತಿಂಗಳುಗಳ ಕಾಲ ನಿರಂತರವಾಗಿ ಆಡಿದ್ದು ಇದೇ ಮೊದಲು" ಎಂದು ನಟರಾಜನ್ ಹೇಳಿದರು.
This News Article is a Copy of MYKHEL
19-08-25 11:13 am
Bangalore Correspondent
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
ನಿಮ್ಮ ಮನೆ ಹುಡುಗಿನ ನಮ್ಮ ಸಮುದಾಯದ ಯುವಕನಿಗೆ ಮದುವೆ...
18-08-25 10:35 pm
Dk Shivakumar, Dharmasthala Case: ಧರ್ಮಸ್ಥಳ ವಿ...
18-08-25 08:45 pm
20-08-25 11:01 am
HK News Desk
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
19-08-25 11:07 pm
Mangalore Correspondent
Mangalore Thokottu Sports Winner: ಕಂಪನಿ ಬ್ರಾಂ...
19-08-25 08:54 pm
Ullal Municipal Commissioner: ಉಳ್ಳಾಲ ನಗರಸಭೆಯಲ...
19-08-25 08:28 pm
Puttur, Baby, Sreekrishna J. Rao: ಬಿಜೆಪಿ ಮುಖಂ...
19-08-25 07:04 pm
Activists Mahesh Shetty Thimarodi, Harish Poo...
18-08-25 06:14 pm
19-08-25 10:52 pm
Mangalore Correspondent
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm
Ullal Police Raid, Sports Winners, Mangalore:...
19-08-25 12:41 pm