ಬ್ರೇಕಿಂಗ್ ನ್ಯೂಸ್
05-02-21 04:11 pm Source: MYKHEL Madhukara Shetty ಕ್ರೀಡೆ
ಭಾರತೀಯ ಕ್ರಿಕೆಟ್ ತಂಡದ ಕೋಚ್ ರವಿ ಶಾಸ್ತ್ರಿ ಈ ಬಾರಿಯ ಐಪಿಎಲ್ ಆವೃತ್ತಿಯ ಅಂತ್ಯದ ಬಳಿಕ ಎರಡು ವಾರಗಳ ವಿರಾಮ ಅತ್ಯಂತ ಅಗತ್ಯವಾಗಿದೆ ಎಂದು ಹೇಳಿದ್ದಾರೆ. ಬಯೋ ಬಬಲ್ ಹಾಗೂ ಕ್ವಾರಂಟೈನ್ ಅವಧಿಗಳು ಆಟಗಾರರಿಗೆ ಮಾನಸಿಕವಾಗಿ ಒತ್ತಡವನ್ನು ನಿಡುತ್ತದೆ. ಹೀಗಾಗಿ ಭಾರತೀಯ ಕ್ರಿಕೆಟ್ನ ಒತ್ತಡ ಕ್ಯಾಲೆಂಡರ್ ಮಧ್ಯೆ ವಿಶ್ರಾಂತಿಯ ಅಗತ್ಯವಿದೆ ಎಂದು ಕೋಚ್ ರವಿ ಶಾಸ್ತ್ರಿ ಹೇಳಿದ್ದಾರೆ.
ಟೀಮ್ ಇಂಡಿಯಾದ ಮುಖ್ಯ ಕೋಚ್ ರವಿ ಶಾಸ್ತ್ರಿ "ಭಾರತೀಯ ಆಟಗಾರರು ಇಂಗ್ಲೆಂಡ್ ವಿರುದ್ಧ ನಾಲ್ಕು ಟೆಸ್ಟ್, 5 ಟಿ20 ಹಾಗೂ 3 ಏಕದಿನ ಪಂದ್ಯಗಳಲ್ಲಿ ಪಾಲ್ಗೊಂಡ ಬಳಿಕ ಐಪಿಎಲ್ನಲ್ಲಿ ಪಾಲ್ಗೊಳ್ಳಲಿದ್ದಾರೆ. ಆದರೆ ಅದಾದ ನಂತರ ಮುಂದಿನ ಸರಣಿಗೂ ಮುನ್ನ ಎರಡು ವಾರಗಳ ವಿಶ್ರಾಂತಿ ಬೇಕು" ಎಂದಿದ್ದಾರೆ ರವಿ ಶಾಸ್ತ್ರಿ.
ಭಾರತ ಐಪಿಎಲ್ ನಂತರ ಶ್ರೀಲಂಕಾ ವಿರುದ್ಧ ಸರಣಿಯನ್ನು ಭಾರತದಲ್ಲಿ ಆಡಲಿದೆ. ಟೆಸ್ಟ್ ಚಾಂಪಿಯನ್ಶಿಪ್ನ ಫೈನಲ್ಗೆ ಆಯ್ಕೆಯಾದರೆ ಅದರಲ್ಲೂ ಪಾಲ್ಗೊಳ್ಳಬೇಕಿದೆ. ಈ ವರ್ಷಾಂತ್ಯದಲ್ಲಿ ಟಿ20 ವಿಶ್ವಕಪ್ ಭಾರತದಲ್ಲಿ ಆಯೋಜನೆಯಾಗಲಿರುವ ಕಾರಣ ಅದಕ್ಕೂ ಮುನ್ನ ಕೆಲ ದ್ವಿಪಕ್ಷೀಯ ಟಿ20 ಸರಣಿಗಳು ಭಾರತದಲ್ಲಿ ಆಯೋಜನೆಯಾಗುವ ನಿರೀಕ್ಷೆಯಿದೆ. ಟೀಮ್ ಇಂಡಿಯಾ ಆಟಗಾರರು ಆಸ್ಟ್ರೇಲಿಯಾ ವಿರುದ್ಧದ ಸುದೀರ್ಘ ಸರಣಿಯನ್ನು ಮುಗಿಸಿದ ಬಳಿಕ ತವರಿಗೆ ಆಗಮಿಸಿದರು. ಆದರೆ ಕುಟುಂಬದೊಂದಿಗೆ ಸಮಯಕಳೆಯಲು ಕೇವಲ ಒಂದು ವಾರಗಳ ಕಾಲಾವಕಾಶ ಮಾತ್ರವೇ ಅವರಿಗೆ ದೊರೆತಿತ್ತು. ಬಳಿಕ ಚೆನ್ನೈಗೆ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗಾಗಿ ಬಂದ ಕ್ರಿಕೆಟಿಗರು ಆರು ದಿನ ಹೋಟೆಲ್ ಕ್ವಾರಂಟೈನ್ ಪೂರೈಸಿ ತರಬೇತಿ ಆರಂಭಿಸಿದ್ದರು.
" ಕೆಲ ಸಂದರ್ಭಗಳಲ್ಲಿ ಆಟಗಾರರಿಗೆ ಅಂತಾರಾಷ್ಟ್ರೀಯ ಕ್ರಿಕೆಟ್ನಿಂದ ಕೆಲ ಸಮಯಗಳ ವಿರಾಮ ಅಗತ್ಯವಿರುತ್ತದೆ ಎಂದು ನಾನು ನಂಬುತ್ತೇನೆ. ಇಂಗ್ಲೆಂಡ್ ವಿರುದ್ಧದ ಸರಣಿಯ ನಂತರ ಅವರು ಐಪಿಎಲ್ಗೆ ಕಾಲಿಡುತ್ತಾರೆ. ಮತ್ತೊಂದು ಐಪಿಎಲ್ನ ನಂತರ ಒಂದೆರಡು ವಾರಗಳ ವಿರಾಮ ಅಗತ್ಯವಾಗಿದೆ. ಯಾಕೆಂದರೆ ಈ ಬಯೋಬಬಲ್ಗಳು ಹಾಗೂ ಕ್ವಾರಂಟೈನ್ಗಳು ಆಟಗಾರರನ್ನು ಮಾನಸಿಕವಾಗಿ ಸಾಕಷ್ಟು ಬಳಲುವಂತೆ ಮಾಡುತ್ತದೆ. ಅಂತಿಮವಾಗಿ ಅವರು ಕೂಡ ಮನುಷ್ಯರೇ ಅಲ್ಲವೇ" ಎಂದು ರವಿ ಶಾಸ್ತ್ರಿ ಹೇಳಿದ್ದಾರೆ.
This News Article is a Copy of MYKHEL
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm