ಬ್ರೇಕಿಂಗ್ ನ್ಯೂಸ್
14-02-21 03:51 pm Source: MYKHEL Madhukara Shetty ಕ್ರೀಡೆ
ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಟೆಸ್ಟ್ ಸರಣಿಯ ಎರಡನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಯಶಸ್ಸನ್ನು ಸಾಧಿಸಿದೆ. ಇಂಗ್ಲೆಂಡ್ ತಂಡವನ್ನು ಕೇವಲ 134 ರನ್ಗಳಿಗೆ ಆಲೌಟ್ ಮಾಡುವಲ್ಲಿ ಟೀಮ್ ಇಂಡಿಯಾ ಯಶಸ್ವಿಯಾಗಿದೆ. ಈ ಮೂಲಕ ಮೊದಲ 195 ರನ್ಗಳ ದೊಡ್ಡ ಅಂತರದ ಮುನ್ನಡೆಯನ್ನು ಸಾಧಿಸುವಲ್ಲಿ ಯಶಸ್ವಿಯಾಗಿದೆ
ಟೀಮ್ ಇಂಡಿಯಾದ ಬೌಲಿಂಗ್ ದಾಳಿಗೆ ಆಂಗ್ಲ ಬ್ಯಾಟ್ಸ್ಮನ್ಗಳು ಸಂಪೂರ್ಣವಾಗಿ ವಿಫಲರಾದರು. ಅದರಲ್ಲೂ ಸ್ಪಿನ್ ಬೌಲಿಂಗ್ ಪಡೆಗೆ ಪ್ರತ್ಯುತ್ತರವನ್ನು ನೀಡಲು ಇಂಗ್ಲೆಂಡ್ ಆಟಗಾರರಿಂದ ಅಸಾಧ್ಯವಾಯಿತು. ಹೀಗಾಗಿ 134 ರನ್ಗಳಿಗೆ ತನ್ನ ಎಲ್ಲಾ ವಿಕೆಟ್ಗಳನ್ನು ಕಳೆದುಕೊಂಡಿದೆ. ಟೀಮ್ ಇಂಡಿಯಾ ಪರವಾಗಿ ಆರ್ ಅಶ್ವಿನ್ 5 ವಿಕೆಟ್ಗಳನ್ನು ಪಡೆದು ಇಂಗ್ಲೆಂಡ್ ತಂಡಕ್ಕೆ ಆಘಾತವನ್ನು ನೀಡಿದ್ದಾರೆ. ವೇಗಿ ಇಶಾಂತ್ ಶರ್ಮಾ ಹಾಗೂ ಅಕ್ಷರ್ ಪಟೇಲ್ ತಲಾ 2 ವಿಕೆಟ್ ಪಡೆದು ಮಿಂಚಿದ್ದಾರೆ. ಒಂದು ವಿಕೆಟ್ ಮೊಹಮ್ಮದ್ ಸಿರಾಜ್ ಪಾಲಾಗಿದೆ. ಸುದೀರ್ಘ ಬೆಂಚ್ ಕಾದು ಆಡುವ ಬಳಗದಲ್ಲಿ ಅವಕಾಶ ಪಡೆದ ಕುಲ್ದೀಪ್ ಯಾದವ್ ವಿಕೆಟ್ ಪಡೆಯದೆ ನಿರಾಸೆ ಅನುಭವಿಸಿದ್ದಾರೆ. ಇನ್ನು ಇಂಗ್ಲೆಂಡ್ ತಂಡದ ಪರವಾಗಿ ವಿಕೆಟ್ ಕೀಪರ್ ಬೆನ್ ಫೋಕ್ಸ್ ಗಳಿಸಿದ 42 ರನ್ ಹೈಯೆಸ್ಟ್ ಸ್ಕೋರ್ ಎನಿಸಿದೆ. ಒಲ್ಲೀ ಪೋಪ್ 22 ಬೆನ್ ಸ್ಟೋಕ್ಸ್ 18 ಹಾಗೂ ಡಾಮಿನಿಕ್ ಸಿಬ್ಲಿ 16 ರನ್ ಗಳಿಸಿದ್ದು ಈ ಆಟಗಾರರು ಮಾತ್ರವೇ ಎರಡಂಕಿಯನ್ನು ದಾಟುವಲ್ಲಿ ಯಶಸ್ವಿಯಾದರು.
ಟೀಮ್ ಇಂಡಿಯಾ ಎರಡನೇ ಇನ್ನಿಂಗ್ಸ್ನಲ್ಲಿ ಬ್ಯಾಟಿಂಗ್ ಆರಂಭಿಸಿದ್ದು ಬೃಹತ್ ಮೊತ್ತದ ಗುರಿಯನ್ನು ಇಂಗ್ಲೆಂಡ್ಗೆ ನೀಡುವ ಉದ್ದೇಶವಿಟ್ಟುಕೊಂಡಿದೆ. ಈ ಮೂಲಕ ಮೊದಲ ಟೆಸ್ಟ್ನಲ್ಲಿ ಅನುಭವಿಸಿದ ಸೋಲಿಗೆ ತಕ್ಕದಾದ ಪ್ರತ್ಯುತ್ತರವನ್ನು ನೀಡಲು ಟೀಮ್ ಇಂಡಿಯಾ ಸಜ್ಜಾಗಿದೆ.
This News Article is a Copy of MYKHEL
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm