ಬ್ರೇಕಿಂಗ್ ನ್ಯೂಸ್
14-02-21 03:56 pm Source: MYKHEL Madhukara Shetty ಕ್ರೀಡೆ
ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ನಲ್ಲಿ ಅನುಭವಿ ಬೌಲರ್ ಆರ್ ಅಶ್ವಿನ್ ಎದುರಾಳಿ ಇಂಗ್ಲೆಂಡ್ಗೆ ಕಂಟಕವಾಗಿದ್ದಾರೆ. ಅಶ್ವಿನ್ ಬೌಲಿಂಗ್ ದಾಳಿಯನ್ನು ಎದುರಿಸಲು ಇಂಗ್ಲೆಂಡ್ ದಾಂಡಿಗರು ಪರದಾಡುತ್ತಿದ್ದಾರೆ. ಇಂಗ್ಲೆಂಡ್ ಕಳೆದುಕೊಂಡ ಮೊದಲ ಆರು ವಿಕೆಟ್ಗಳ ಪೈಕಿ ಮೂರು ಅಶ್ವಿನ್ ಪಾಲಾಗಿದೆ. ಈ ಮೂಲಕ ಅಶ್ವಿನ್ ತವರಿನಲ್ಲಿ ಹರ್ಭಜನ್ ಸಿಂಗ್ ಸಾಧನೆಯನ್ನು ಹಿಂದಿಕ್ಕಿದ್ದಾರೆ.
ಆರ್ ಅಶ್ವಿನ್ ಆರಂಭಿಕ ಆಟಗಾರ ಡಾಮ್ ಸಿಬ್ಲಿ ಹಾಗೂ ಡೇನಿಯಲ್ ಲಾರೆನ್ಸ್ ವಿಕೆಟ್ ಪಡೆಯುವ ಮೂಲಕ ಹರ್ಭಜನ್ ಸಿಂಗ್ ತವರಿನಲ್ಲಿ ಪಡೆದ ವಿಕೆಟ್ಗೆ ಸಮನಾದ ಸಾಧನೆಯನ್ನು ಮಾಡಿದರು. ನಂತರ ಭೋಜನ ವಿರಾಮ ಮುಗಿಸಿ ದಾಳಿಗಿಳಿದ ಅಶ್ವಿನ್ಗೆ ಬೆನ್ ಸ್ಟೋಕ್ಸ್ ಬೌಲ್ಡ್ ಆಗುವ ಮೂಲಕ ವಿಕೆಟ್ ಒಪ್ಪಿಸಿದರು. ಈ ಮೂಲಕ ತವರಿನಲ್ಲಿ 265 ವಿಕೆಟ್ ಕಬಳಿಸಿದ್ದ ಹರ್ಭಜನ್ ಸಿಂಗ್ ಸಾಧನೆಯನ್ನು ಹಿಂದಿಕ್ಕಿದ್ದಾರೆ.
ಭಾರತದಲ್ಲಿ ಅತಿ ಹೆಚ್ಚು ವಿಕೆ್ ಪಡೆದ ಬೌಲರ್ಗಳ ಪಟ್ಟಿಯಲ್ಲಿ ಮಾಜಿ ನಾಯಕ ಅನಿಲ್ ಕುಂಬ್ಳೆ ಮೊದಲ ಸ್ಥಾನದಲ್ಲಿದ್ದಾರೆ. 62 ಟೆಸ್ಟ್ ಪಂದ್ಯಗಳಲ್ಲಿ ಅನಿಲ್ ಕುಂಬ್ಳೆ 350 ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ. ಇದರಲ್ಲಿ 25 ಐದು ವಿಕೆಟ್ಗಳ ಗೊಂಚಲು ಹಾಗೂ 7 10 ವಿಕೆಟ್ಗಳ ಗೊಂಚಲು ಇದೆ. ಭಾರತದಲ್ಲಿ ಆರ್ ಅಶ್ವಿನ್ 45 ಟೆಸ್ಟ್ ಪಂದ್ಯಗಳನ್ನು ಆಡಿದ್ದು 22.69ರ ಸರಾಸರಿಯಲ್ಲಿ 266 ವಿಕೆಟ್ ಪಡೆದಿದ್ದಾರೆ. ಇದರಲ್ಲಿ 22 ಬಾರಿ 5 ವಿಕೆಟ್ಗಳ ಗೊಂಚಲು ಪಡೆದಿರುವ ಅಶ್ವಿನ್ 6 ಬಾರಿ 10 ವಿಕೆಟ್ಗಳನ್ನು ಪಡೆದ ಸಾಧನೆ ಮಾಡಿದ್ದಾರೆ.
ಎರಡನೇ ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ವಿರುದ್ಧ ಟೀಮ್ ಇಂಡಿಯಾ ಸಂಪೂರ್ಣ ಹಿಡಿತವನ್ನು ಸಾಧಿಸಿದ್ದು ಇಂಗ್ಲೆಂಡ್ ತಂಡ 87 ರನ್ ಗಳಿಸಿದ ವೇಳೆ ತನ್ನ 6 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದೆ. ಈ ಮೂಲಕ ಭಾರತ ಮೊದಲ ಟೆಸ್ಟ್ನ ಸೋಲಿಗೆ ಸರಿಯಾದ ತಿರುಗೇಟು ನೀಡುವ ಕಾತರದಲ್ಲಿದೆ.
This News Article is a Copy of MYKHEL
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am