ಬ್ರೇಕಿಂಗ್ ನ್ಯೂಸ್
14-02-21 03:56 pm Source: MYKHEL Madhukara Shetty ಕ್ರೀಡೆ
ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ನಲ್ಲಿ ಅನುಭವಿ ಬೌಲರ್ ಆರ್ ಅಶ್ವಿನ್ ಎದುರಾಳಿ ಇಂಗ್ಲೆಂಡ್ಗೆ ಕಂಟಕವಾಗಿದ್ದಾರೆ. ಅಶ್ವಿನ್ ಬೌಲಿಂಗ್ ದಾಳಿಯನ್ನು ಎದುರಿಸಲು ಇಂಗ್ಲೆಂಡ್ ದಾಂಡಿಗರು ಪರದಾಡುತ್ತಿದ್ದಾರೆ. ಇಂಗ್ಲೆಂಡ್ ಕಳೆದುಕೊಂಡ ಮೊದಲ ಆರು ವಿಕೆಟ್ಗಳ ಪೈಕಿ ಮೂರು ಅಶ್ವಿನ್ ಪಾಲಾಗಿದೆ. ಈ ಮೂಲಕ ಅಶ್ವಿನ್ ತವರಿನಲ್ಲಿ ಹರ್ಭಜನ್ ಸಿಂಗ್ ಸಾಧನೆಯನ್ನು ಹಿಂದಿಕ್ಕಿದ್ದಾರೆ.
ಆರ್ ಅಶ್ವಿನ್ ಆರಂಭಿಕ ಆಟಗಾರ ಡಾಮ್ ಸಿಬ್ಲಿ ಹಾಗೂ ಡೇನಿಯಲ್ ಲಾರೆನ್ಸ್ ವಿಕೆಟ್ ಪಡೆಯುವ ಮೂಲಕ ಹರ್ಭಜನ್ ಸಿಂಗ್ ತವರಿನಲ್ಲಿ ಪಡೆದ ವಿಕೆಟ್ಗೆ ಸಮನಾದ ಸಾಧನೆಯನ್ನು ಮಾಡಿದರು. ನಂತರ ಭೋಜನ ವಿರಾಮ ಮುಗಿಸಿ ದಾಳಿಗಿಳಿದ ಅಶ್ವಿನ್ಗೆ ಬೆನ್ ಸ್ಟೋಕ್ಸ್ ಬೌಲ್ಡ್ ಆಗುವ ಮೂಲಕ ವಿಕೆಟ್ ಒಪ್ಪಿಸಿದರು. ಈ ಮೂಲಕ ತವರಿನಲ್ಲಿ 265 ವಿಕೆಟ್ ಕಬಳಿಸಿದ್ದ ಹರ್ಭಜನ್ ಸಿಂಗ್ ಸಾಧನೆಯನ್ನು ಹಿಂದಿಕ್ಕಿದ್ದಾರೆ.
ಭಾರತದಲ್ಲಿ ಅತಿ ಹೆಚ್ಚು ವಿಕೆ್ ಪಡೆದ ಬೌಲರ್ಗಳ ಪಟ್ಟಿಯಲ್ಲಿ ಮಾಜಿ ನಾಯಕ ಅನಿಲ್ ಕುಂಬ್ಳೆ ಮೊದಲ ಸ್ಥಾನದಲ್ಲಿದ್ದಾರೆ. 62 ಟೆಸ್ಟ್ ಪಂದ್ಯಗಳಲ್ಲಿ ಅನಿಲ್ ಕುಂಬ್ಳೆ 350 ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ. ಇದರಲ್ಲಿ 25 ಐದು ವಿಕೆಟ್ಗಳ ಗೊಂಚಲು ಹಾಗೂ 7 10 ವಿಕೆಟ್ಗಳ ಗೊಂಚಲು ಇದೆ. ಭಾರತದಲ್ಲಿ ಆರ್ ಅಶ್ವಿನ್ 45 ಟೆಸ್ಟ್ ಪಂದ್ಯಗಳನ್ನು ಆಡಿದ್ದು 22.69ರ ಸರಾಸರಿಯಲ್ಲಿ 266 ವಿಕೆಟ್ ಪಡೆದಿದ್ದಾರೆ. ಇದರಲ್ಲಿ 22 ಬಾರಿ 5 ವಿಕೆಟ್ಗಳ ಗೊಂಚಲು ಪಡೆದಿರುವ ಅಶ್ವಿನ್ 6 ಬಾರಿ 10 ವಿಕೆಟ್ಗಳನ್ನು ಪಡೆದ ಸಾಧನೆ ಮಾಡಿದ್ದಾರೆ.
ಎರಡನೇ ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ವಿರುದ್ಧ ಟೀಮ್ ಇಂಡಿಯಾ ಸಂಪೂರ್ಣ ಹಿಡಿತವನ್ನು ಸಾಧಿಸಿದ್ದು ಇಂಗ್ಲೆಂಡ್ ತಂಡ 87 ರನ್ ಗಳಿಸಿದ ವೇಳೆ ತನ್ನ 6 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದೆ. ಈ ಮೂಲಕ ಭಾರತ ಮೊದಲ ಟೆಸ್ಟ್ನ ಸೋಲಿಗೆ ಸರಿಯಾದ ತಿರುಗೇಟು ನೀಡುವ ಕಾತರದಲ್ಲಿದೆ.
This News Article is a Copy of MYKHEL
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm