ಬ್ರೇಕಿಂಗ್ ನ್ಯೂಸ್
19-02-21 05:08 pm Source: MYKHEL Mahesh Malnad ಕ್ರೀಡೆ
ಯುವ ಪ್ರತಿಭಾವಂತರಿಗೆ ವೇದಿಕೆ ಒದಗಿಸುವ ಶ್ರೀಮಂತ ಕ್ರಿಕೆಟ್ ಲೀಗ್ ಎನಿಸಿರುವ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) 2021ರ ಹರಾಜು ಪ್ರಕ್ರಿಯೆ ಮುಕ್ತಾಯಗೊಂಡಿದೆ. ಫೆ.18ರಂದು ಚೆನ್ನೈನಲ್ಲಿ ನಡೆದ ಮಿನಿ ಹರಾಜು ಪ್ರಕ್ರಿಯೆಯಲ್ಲಿ ಗಮನ ಸೆಳೆದ ಖರೀದಿ ಪೈಕಿ ಚೇತನ್ ಸಕಾರಿಯಾ ಅವರಿಗಾಗಿ ಮಾಡಿದ ಬಿಡ್ಡಿಂಗ್ ಕೂಡಾ ಒಂದು. ರಾಜಸ್ಥಾನ ರಾಯಲ್ಸ್ ತಂಡ ಸೇರಿದ ಚೇತನ್ ಸಕಾರಿಯಾ ಬಗ್ಗೆ ಒಂದಷ್ಟು ಮಾಹಿತಿ ಇಲ್ಲಿದೆ.
ಒಂದು ಕಾಲದಲ್ಲಿ ಚೇತನ್ ಸಕಾರಿಯಾ ಅವರ ತಂದೆ ಟೆಂಪೋ ಚಾಲಕರಾಗಿದ್ದರು. ತಮ್ಮ ಮಗ ಕ್ರಿಕೆಟ್ ಸ್ಟಾರ್ ಆಗಬೇಕು ಎಂದು ಕನಸು ಕಂಡಿದ್ದರು. 22 ವರ್ಷ ವಯಸ್ಸಿನ ಚೇತನ್ ಭರ್ಜರಿ 1.2 ಕೋಟಿ ರು ಗಳಿಗೆ ಮಾರಾಟವಾಗಿದ್ದಾರೆ. ಸೌರಾಷ್ಟ್ರ ಮೂಲದ ಎಡಗೈ ವೇಗದ ಬೌಲರ್ ಗೆ ಭರ್ಜರಿ ಮೊತ್ತ ನೀಡಿ ರಾಯಲ್ಸ್ ಖರೀದಿಸಿದೆ. ಕಳೆದ ತಿಂಗಳು ಆತ್ಮಹತ್ಯೆ ಮಾಡಿಕೊಂಡು ಅಗಲಿದ ತಮ್ಮನ ಅಗಲಿಕೆಯ ನೋವಿನಲ್ಲಿದ್ದ ಚೇತನ್ ಹಾಗೂ ಕುಟುಂಬಸ್ಥರಲ್ಲಿ ಐಪಿಎಲ್ ಹರಾಜು ಪ್ರಕ್ರಿಯೆ ನಂತರ ಸಂತಸ ಮೂಡಿದೆ.
ತಮ್ಮನ ಆಸೆಯಂತೆ ಐಪಿಎಲ್ ತಂಡ ಸೇರಿದ ಖುಷಿ ಚೇತನ್ ರಲ್ಲಿ ಮೂಡಿದೆ. ಮನೆಯಲ್ಲಿ ಟಿವಿ ಕೂಡಾ ಇರದ ಬಡತನ ಪರಿಸ್ಥಿತಿಯಲ್ಲಿ ಚೇತನ್ ಅವರ ತಂದೆ ಗುಜರಾತಿನ ವರ್ತೇಜ್ ಎಂಬಲ್ಲಿ ಟೆಂಪೋ ಚಾಲನೆ ಮಾಡಿ ದುಡಿದು ಸಂಸಾರ ನಡೆಸಿದ್ದಾರೆ. ಸ್ನೇಹಿತರ ಮನೆಯಲ್ಲಿ ಕ್ರಿಕೆಟ್ ಪಂದ್ಯ ವೀಕ್ಷಿಸುತ್ತಾ ಬೆಳೆದ ಚೇತನ್, ಜನವರಿಯಲ್ಲಿ ನನ್ನ ತಮ್ಮ ಆತ್ಮಹತ್ಯೆ ಮಾಡಿಕೊಂಡ ಸಂದರ್ಭದಲ್ಲಿ ನಾನು ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಆಡುತ್ತಿದ್ದೆ. ನನಗೆ ಸಾವಿನ ಸುದ್ದಿಯನ್ನು ಕುಟುಂಬಸ್ಥರು ಮುಟ್ಟಿಸಲೇ ಇಲ್ಲ, ರಾಹುಲ್ (ತಮ್ಮ) ಬಗ್ಗೆ ಕೇಳಿದಾಗ, ಹೊರಗಡೆ ಹೋಗಿದ್ದಾನೆ ಎಂದಷ್ಟೇ ಹೇಳುತ್ತಿದ್ದರು. ಅವನ ಅಗಲಿಕೆ ನಷ್ಟ ತುಂಬಲು ಸಾಧ್ಯವಿಲ್ಲ, ಇಂದು ಐಪಿಎಲ್ ತಂಡಕ್ಕೆ ಆಯ್ಕೆಯಾಗಿದ್ದು ತಿಳಿದಿದ್ದರೆ ಅವನು ತುಂಬಾ ಸಂತಸ ಪಡುತ್ತಿದ್ದ ಎಂದು ಚೇತನ್ ಅವರು ಇಂಡಿಯನ್ ಎಕ್ಸ್ ಪ್ರೆಸ್ ಜೊತೆ ಮಾತನಾಡುತ್ತಾ ಹೇಳಿದ್ದಾರೆ.
ಆರ್ ಸಿಬಿ ನೆಟ್ ಬೌಲರ್
ಯುಎಇಯಲ್ಲಿ ನಡೆದ ಕಳೆದ ಐಪಿಎಲ್ ಸೀಸನ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನೆಟ್ ಬೌಲರ್ ಆಗಿ ಚೇತನ್ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. ಸೈಮನ್ ಕಾಟಿಚ್ ಹಾಗೂ ಮೈಕ್ ಹೆಸ್ಸನ್ ಮಾರ್ಗದರ್ಶನವನ್ನು ಸ್ಮರಿಸಿದ್ದಾರೆ. ಮೊಟ್ಟಮೊದಲು ರಾಜ್ ಕೋಟ್ ಶಿಫ್ಟ್ ಆಗಿ ಸ್ವಂತ ಮನೆ ಖರೀದಿಸುವುದು ನನ್ನ ಮೊದಲ ಆದ್ಯತೆ ಎಂದಿದ್ದಾರೆ.
This News Article is a Copy of MYKHEL
19-08-25 11:13 am
Bangalore Correspondent
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
ನಿಮ್ಮ ಮನೆ ಹುಡುಗಿನ ನಮ್ಮ ಸಮುದಾಯದ ಯುವಕನಿಗೆ ಮದುವೆ...
18-08-25 10:35 pm
Dk Shivakumar, Dharmasthala Case: ಧರ್ಮಸ್ಥಳ ವಿ...
18-08-25 08:45 pm
20-08-25 11:01 am
HK News Desk
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
19-08-25 11:07 pm
Mangalore Correspondent
Mangalore Thokottu Sports Winner: ಕಂಪನಿ ಬ್ರಾಂ...
19-08-25 08:54 pm
Ullal Municipal Commissioner: ಉಳ್ಳಾಲ ನಗರಸಭೆಯಲ...
19-08-25 08:28 pm
Puttur, Baby, Sreekrishna J. Rao: ಬಿಜೆಪಿ ಮುಖಂ...
19-08-25 07:04 pm
Activists Mahesh Shetty Thimarodi, Harish Poo...
18-08-25 06:14 pm
19-08-25 10:52 pm
Mangalore Correspondent
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm
Ullal Police Raid, Sports Winners, Mangalore:...
19-08-25 12:41 pm