ಬ್ರೇಕಿಂಗ್ ನ್ಯೂಸ್
20-02-21 10:27 am Headline Karnataka News Network ಕ್ರೀಡೆ
ತಿರುವನಂತಪುರಂ, ಫೆ.20: 'ಮೆಟ್ರೋ ಮ್ಯಾನ್' ಖ್ಯಾತಿಯ ಇ. ಶ್ರೀಧರನ್ ಅವರು ಬಿಜೆಪಿ ಸೇರ್ಪಡೆಯಾದ ಬೆನ್ನಲ್ಲೇ ಕೇರಳದಿಂದ ಮತ್ತೊಬ್ಬ ಸೆಲೆಬ್ರಿಟಿ ಕೂಡ ಕೇಸರಿ ಪಾಳೆಯದತ್ತ ಮುಖ ಮಾಡಿದ್ದಾರೆ. 'ಪಯ್ಯೋಲಿ ಎಕ್ಸ್ಪ್ರೆಸ್' ಖ್ಯಾತಿಯ ಭಾರತದ ಮಾಜಿ ಅಥ್ಲೀಟ್ ಹಾಗೂ ಒಲಿಂಪಿಯನ್ ಪಿ.ಟಿ. ಉಷಾ ಅವರು ಬಿಜೆಪಿ ಸೇರಲು ಮುಂದಾಗಿದ್ದಾರೆ ಎನ್ನಲಾಗಿದೆ. ಉಷಾ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಜವಾಬ್ದಾರಿಯನ್ನು ಕೇರಳ ರಾಜ್ಯ ಘಟಕದ ಬಿಜೆಪಿ ಅಧ್ಯಕ್ಷ ಕೆ. ಸುರೇಂದ್ರನ್ ಅವರಿಗೆ ವಹಿಸಲಾಗಿದೆ.
ಕೇರಳದಲ್ಲಿ ಚುನಾವಣೆಗೆ ಪೂರ್ವ ತಯಾರಿ ನಡೆಸಲು ಬಿಜೆಪಿ 'ವಿಜಯ ಯಾತ್ರೆ' ಆಯೋಜಿಸುತ್ತಿದ್ದು, ಈ ಸಂದರ್ಭದಲ್ಲಿ ಪಿಟಿ ಉಷಾ ಅವರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದು ವರದಿಯಾಗಿದೆ. ಇತ್ತೀಚೆಗೆ ರೈತರ ಪ್ರತಿಭಟನೆ ವಿಚಾರದಲ್ಲಿ ವಿದೇಶಿಗರು ಪ್ರತಿಕ್ರಿಯೆ ನೀಡಿದ ಸಂದರ್ಭದಲ್ಲಿ ಭಾರತ ಸರ್ಕಾರವನ್ನು ಬೆಂಬಲಿಸಿ ಟ್ವೀಟ್ ಮಾಡಿದ ಸೆಲೆಬ್ರಿಟಿಗಳಲ್ಲಿ ಪಿಟಿ ಉಷಾ ಕೂಡ ಸೇರಿದ್ದರು. ಅದೇ ವೇಳೆ ಪಿಟಿ ಉಷಾ ಅವರ ಬಿಜೆಪಿ ಸೇರ್ಪಡೆಯ ಚರ್ಚೆ ಶುರುವಾಗಿತ್ತು. ಈ ಹಿಂದೆಯೂ ಪಿಟಿ ಉಷಾ ಅವರ ಬಿಜೆಪಿ ಸೇರ್ಪಡೆ ಚರ್ಚೆ ನಡೆದಿತ್ತು. ಆದರೆ ಅದನ್ನು ಅವರು ನಿರಾಕರಿಸಿದ್ದರು.

ಕೇರಳ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಬಿಜೆಪಿಯು ಪಕ್ಷಕ್ಕೆ ಸೆಲೆಬ್ರಿಟಿಗಳನ್ನು ಸೆಳೆದುಕೊಳ್ಳುವ ಪ್ರಯತ್ನಕ್ಕೆ ಮುಂದಾಗಿದೆ. ನಟ ಉನ್ನಿ ಮುಕುಂದನ್ ಜತೆ ಸುರೇಂದ್ರ ಅವರು ಮಾತುಕತೆ ನಡೆಸಿ, ಚುನಾವಣೆಗೆ ಸ್ಪರ್ಧಿಸುವಂತೆ ಆಹ್ವಾನಿಸಿದ್ದರು. ಆದರೆ ಉನ್ನಿ ಮುಕುಂದನ್ ಪ್ರಸ್ತುತ ಸಿನಿಮಾಗಳ ಮೇಲೆ ಗಮನ ಹರಿಸುತ್ತಿದ್ದು, ಮುಂದಿನ ದಿನಗಳಲ್ಲಿ ಸ್ಪರ್ಧೆಯ ಬಗ್ಗೆ ಪರಿಗಣಿಸುವುದಾಗಿ ಹೇಳಿದ್ದಾರೆ ಎನ್ನಲಾಗಿದೆ.

ನಟಿ ಅನುಶ್ರೀ ಜತೆ ಕೂಡ ಬಿಜೆಪಿ ಸಮಾಲೋಚನೆ ನಡೆಸಿದ್ದು, ಸಕ್ರಿಯ ರಾಜಕಾರಣದ ಬಗ್ಗೆ ತಮಗೆ ಆಸಕ್ತಿ ಇಲ್ಲ ಎಂದು ಅವರು ಹೇಳಿದ್ದಾರೆ. ಕಿರುತೆರೆ ನಟಿ ನಿಶಾ ಸಾರಂಗ್, ನಟಿ ಮಲ್ಲಿಕಾ ಸುಕುಮಾರನ್ ಜತೆ ಕೂಡ ಮಾತುಕತೆ ನಡೆಯುತ್ತಿದೆ. ಮಲ್ಲಿಕಾ ಅವರು ಸ್ಪರ್ಧೆಗೆ ಇಳಿಯಲು ನಿರಾಕರಿಸಿದ್ದಾರೆ. ಆದರೆ ಚುನಾವಣಾ ಪ್ರಚಾರಕ್ಕೆ ಆಗಮಿಸುವ ಭರವಸೆ ನೀಡಿದ್ದಾರೆ.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am