ಬ್ರೇಕಿಂಗ್ ನ್ಯೂಸ್
23-02-21 03:35 pm Source: MYKHEL ಕ್ರೀಡೆ
ಅಹ್ಮದಾಬಾದ್: ಟೀಮ್ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ವಿಶ್ವದಾಖಲೆಯ ಸಮೀಪದಲ್ಲಿದ್ದಾರೆ. ಮುಂಬರಲಿರುವ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಕೊಹ್ಲಿಗೆ ಆಸ್ಟ್ರೇಲಿಯಾ ಮಾಜಿ ನಾಯಕ ರಿಕಿ ಪಾಂಟಿಂಗ್ ದಾಖಲೆ ಸರಿಗಟ್ಟಿ ವಿಶ್ವದಾಖಲೆ ನಿರ್ಮಿಸುವ ಅವಕಾಶವಿದೆ. ಅಹ್ಮದಾಬಾದ್ ಮೊಟೆರಾ ಸ್ಟೇಡಿಯಂನಲ್ಲಿ ನಡೆಯಲಿರುವ ಪಿಂಕ್ಬಾಲ್ ಟೆಸ್ಟ್ನಲ್ಲಿ ಕೊಹ್ಲಿ ಏನಾದರೂ ಶತಕ ಬಾರಿಸಿದೆ ಮೈಲುಗಲ್ಲು ಸ್ಥಾಪನೆಯಾಗಲಿದೆ.
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಕೊಹ್ಲಿ ಎರಡು ಅರ್ಧಶತಕಗಳನ್ನು ಬಾರಿಸಿದ್ದರು. ಆದರೆ ಅದನ್ನು ಶತಕಕ್ಕೆ ಪರಿವರ್ತಿಸುವಲ್ಲಿ ಕೊಹ್ಲಿ ಎಡವಿದ್ದರು. ಫೆಬ್ರವರಿ 24ರಿಂದ ಆರಂಭಗೊಳ್ಳಲಿರುವ ಮೂರನೇ ಟೆಸ್ಟ್ನಲ್ಲಿ ಕೊಹ್ಲಿ ಶತಕ ಬಾರಿಸಿದರೆ ದಾಖಲೆ ನಿರ್ಮಾಣವಾಗಲಿದೆ.
ಭಾರತ-ಇಂಗ್ಲೆಂಡ್ ತೃತೀಯ (ಡೇ-ನೈಟ್) ಟೆಸ್ಟ್ ಅಹ್ಮದಾಬಾದ್ನ ಮೊಟೆರಾ (ಸರ್ದಾರ್ ಪಟೇಲ್ ಸ್ಟೇಡಿಯಂ)ದಲ್ಲಿ ಫೆಬ್ರವರಿ 24ರಂದು 2:30 PMಗೆ ಆರಂಭಗೊಳ್ಳಲಿದೆ.

ಶತಕ ಬಾರಿಸಿ ಬಹಳ ದಿನವಾಗಿದೆ
2019ರಂದು ಕೋಲ್ಕತ್ತಾದ ಈಡನ್ ಗಾರ್ಡನ್ನಲ್ಲಿ ನಡೆದಿದ್ದ ಬಾಂಗ್ಲಾದೇಶ ವಿರುದ್ಧದ ಡೇ-ನೈಟ್ ಟೆಸ್ಟ್ನಿಂದಲೂ ವಿರಾಟ್ ಕೊಹ್ಲಿ ಶತಕವನ್ನೇ ಬಾರಿಸಿಲ್ಲ. ಆ ಪಂದ್ಯದ ಬಳಿಕ ಕೊಹ್ಲಿ 10 ಅಂತಾರಾಷ್ಟ್ರೀಯ ಇನ್ನಿಂಗ್ಸ್ಗಳನ್ನು ಆಡಿದ್ದಾರೆ. ಆದರೂ ಶತಕ ದಾಖಲಿಸೋದು ಕೊಹ್ಲಿಯಿಂದ ಸಾಧ್ಯವಾಗಿಲ್ಲ.

ಪಾಂಟಿಂಗ್ ದಾಖಲೆ ಬದಿಗೆ
ಇಂಗ್ಲೆಂಡ್ ವಿರುದ್ಧದ ಪಿಂಕ್ಬಾಲ್ ಟೆಸ್ಟ್ನಲ್ಲಿ ಕೊಹ್ಲಿಯೇನಾದರೂ ಶತಕ ಬಾರಿಸಿದರೆ ನಾಯಕನಾಗಿ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತೀ ಹೆಚ್ಚು ಶತಕಗಳನ್ನು ಬಾರಿಸಿದ ಬ್ಯಾಟ್ಸ್ಮನ್ ಆಗಿ ಕೊಹ್ಲಿ ಗುರುತಿಸಿಕೊಳ್ಳಲಿದ್ದಾರೆ. ಆ ಶತಕದೊಂದಿಗೆ ಕೊಹ್ಲಿ 42 ಅಂತಾರಾಷ್ಟ್ರೀಯ ಶತಕಗಳನ್ನು ಬಾರಿಸಿದಂತಾಗುತ್ತದೆ. ಇಷ್ಟು ಶತಕ ಬಾರಿಸಿದ ವಿಶ್ವದ ಮೊದಲ ನಾಯಕನೆಂಬ ದಾಖಲೆಗೆ ಕೊಹ್ಲಿ ಪಾತ್ರರಾಗಲಿದ್ದಾರೆ.

ಪಾಂಟಿಂಗ್-ಕೊಹ್ಲಿ ಸರಿಸಮ
ವಿರಾಟ್ ಕೊಹ್ಲಿ ಮತ್ತು ರಿಕಿ ಪಾಂಟಿಂಗ್ ಸದ್ಯ ನಾಯಕರಾಗಿ 41 ಶತಕಗಳ ದಾಖಲೆ ಹೊಂದಿದ್ದಾರೆ. ಇನ್ನೊಂದು ಶತಕ ಬಾರಿಸಿದರೂ ರನ್ ಮಷೀನ್ ಹೆಸರಿನಲ್ಲಿ ವಿಶ್ವ ದಾಖಲೆ ನಿರ್ಮಾಣವಾಗಲಿದೆ. ತೃತೀಯ ಟೆಸ್ಟ್ನಲ್ಲಿ ಕೊಹ್ಲಿ ಶತಕ ಬಾರಿಸಿದರೆ ಟೆಸ್ಟ್ ಕ್ರಿಕೆಟ್ನಲ್ಲಿ ಕೊಹ್ಲಿ 28ನೇ ಶತಕ ಬಾರಿಸಿದಂತಾಗುತ್ತದೆ. ಇಂಗ್ಲೆಂಡ್ ವಿರುದ್ಧದ ದ್ವಿತೀಯ ಪಂದ್ಯದಲ್ಲಿ ಗೆಲುವಿನೊಂದಿಗೆ ಕೊಹ್ಲಿ, ಎಂಸ್ ಧೋನಿ ದಾಖಲೆ ಮೀರಿಸಿದ್ದರು. ತವರಿನಲ್ಲಿ ನಡೆದ ಟೆಸ್ಟ್ ಪಂದ್ಯಗಳಲ್ಲಿ 21 ಗೆಲುವುಗಳನ್ನು ಕಂಡ ನಾಯಕನಾಗಿ ಕೊಹ್ಲಿ ಗುರುತಿಸಿಕೊಂಡಿದ್ದರು.
This News Article is a Copy of MYKHEL
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am