ಬ್ರೇಕಿಂಗ್ ನ್ಯೂಸ್
24-02-21 01:17 pm Source: MYKHEL ಕ್ರೀಡೆ
ಗೋವಾ: ಲೀಗ್ ಪ್ರಶಸ್ತಿಯನ್ನು ಗುರಿಯಾಗಿಸಿಕೊಂಡಿರುವ ಮುಂಬೈ ಸಿಟಿ ಎಫ್ ಸಿ ತಂಡ ಹೀರೋ ಇಂಡಿಯನ್ ಸೂಪರ್ ಲೀಗ್ ನ ಕೊನೆಯ ಲೀಗ್ ಪಂದ್ಯದಲ್ಲಿ ಒಡಿಶಾ ಎಫ್ ಸಿ ವಿರುದ್ಧ ಸೆಣಸಲಿದೆ. ಹೈದರಾಬಾದ್ ಎಫ್ ಸಿ ವಿರುದ್ಧದ ಪಂದ್ಯದಲ್ಲಿ ಎಟಿಕೆ ಮೋಹನ್ ಬಾಗನ್ ಅಂಕ ಕಳೆದುಕೊಂಡಿದ್ದರಿಂದ ಈಗ ಸರ್ಗಿಯೊ ಲೊಬೆರಾ ಪಡೆಯ ಮೇಲೆ ಎಲ್ಲರ ದೃಷ್ಟಿ. ಏಕೆಂದರೆ ಲೀಗ್ ವಿನ್ನರ್ ಪ್ರೋಫಿ ಗೆಲ್ಲಲು ಅವಕಾಶ ಉತ್ತಮವಾಗಿದೆ. ಒಡಿಶಾ ಕೇವಲ ಗೌರವಕ್ಕಾಗಿ ಆಡಲಿದ್ದು ಕೊನೆಯ ಪಂದ್ಯದಲ್ಲಿ ಜಯ ಗಳಿಸಿ ಋತುವನ್ನು ಮುಗಿಸುವ ಗುರಿಹೊಂದಿದೆ.
ಮುಂಬೈ ತಂಡಕ್ಕೆ ಇಲ್ಲಿ ಜಯದ ಅಗತ್ಯ ಇದೆ. ಲೀಗ್ ನಲ್ಲಿ ಬಹಳ ಸಮಯದಿಂದ ಅಗ್ರ ಸ್ಥಾನದಲ್ಲಿದ್ದ ಮುಂಬೈ ಸಿಟಿ ತಂಡ ಇದ್ದಕ್ಕಿದ್ದಂತೆ ಅಗ್ರ ಸ್ಥಾನ ಕಳೆದುಕೊಂಡಿತು. ಕಳೆದ ಆರು ಪಂದ್ಯಗಳಲ್ಲಿ ಲೊಬೆರಾ ಪಡೆ ಜಯ ಗಳಿಸಿದ್ದು ಕೇವಲ ಒಂದು ಪಂದ್ಯದಲ್ಲಿ.
ಮೂರು ಪಂದ್ಯಗಳಲ್ಲಿ ಜಯ ಗಳಿಸಿಲ್ಲ
ಕಳೆದ ಮೂರು ಪಂದ್ಯಗಳಲ್ಲಿ ಜಯ ಗಳಿಸಿಲ್ಲ. ಜೆಮ್ಷೆಡ್ಪುರ ವಿರುದ್ಧ ನಡೆ ಪಂದ್ಯದಲ್ಲಿ ಮುಂಬೈ ಸೋಲನುಭವಿಸಿತ್ತು, ಎಲ್ಲಿಯವರೆಗೆ ತಂಡ ಸುಧಾರಣೆ ಕಾಣುವುದಿಲ್ಲವೊ ಅಲ್ಲಿಯವರೆಗೆ ಪ್ರಶಸ್ತಿಯ ಆಸೆ ಸೂಕ್ತವಲ್ಲ ಎಂದು ಲೊಬೆರಾ ಹೇಳಿದ್ದಾರೆ. "ನಾವು ನಮ್ಮ ಆಟದಲ್ಲಿ ಸುಧಾರಣೆ ಕಂಡುಕೊಳ್ಳಬೇಕಾಗಿದೆ. ಏಕೆಂದರೆ ನಾವು ಪಂದ್ಯವನ್ನು ಗೆಲ್ಲಬೇಕು . ಕಳೆದ ಪಂದ್ಯದ ರೀತಿಯಲ್ಲಿ ನಾವು ಆಡಿದರೆ ಪಂದ್ಯವನ್ನು ಗೆಲ್ಲುವುದು ಅಸಾಧ್ಯ. ನಾವು ಎರಡೂ ತುದಿಯಿಂದಲೂ ಸುಧಾರಿಸಿಕೊಳ್ಳಬೇಕಾದ ಅಗತ್ಯ ಇದೆ," ಎಂದರು.
ಕೆಟ್ಟ ಪಂದ್ಯಗಳನ್ನು ಆಡಿದೆವು
"ನಾವು ಸಾಕಷ್ಟು ಅವಕಾಶಗಳನ್ನು ಮತ್ತು ಗೋಲುಗಳನ್ನೂ ನೀಡಿದೆವು. ನಾವು ಗೋಲು ಗಳಿಸುವ ಅವಕಾಶಗಳನ್ನು ನಿರ್ಮಿಸಿಲ್ಲ, ನಾವು ಈ ವಿಭಾಗದಲ್ಲಿ ಸುಧಾರಣೆ ಕಂಡುಕೊಳ್ಳಬೇಕಾಗಿದೆ. ನಾವು ಋತುವಿನಲ್ಲಿಯೇ ಅತ್ಯಂತ ಕೆಟ್ಟ ಪಂದ್ಯಗಳನ್ನು ಆಡಿದೆವು. ಅದು ಈಗಾ ಇತಿಹಾಸ, ನಮಗೆ ವರ್ತಮಾನವು ಅತ್ಯಂತ ಪ್ರಮುಖವಾದುದು, ಜತೆಯಲ್ಲಿ ಭವಿಷ್ಯ. ಕೆಲವೊಮ್ಮೆ ಕೆಟ್ಟ ಸಂದರ್ಭಗಳು ಎದುರಾಗುತ್ತವೆ, ಅದು ಪುನರಾವರ್ತನೆಯಾಗದಂತೆ ನೋಡಿಕೊಳ್ಳಬೇಕು," ಎಂದರು.
ಸಮತೋಲನದಿಂದ ಕೂಡಿದ ತಂಡ
ತಂಡ ಗೆರಾಲ್ಡ್ ಪೆಟನ್ ಅವರು ವೈಯಕ್ತಿಕ ಕಾರಣಕ್ಕಾಗಿ ಕ್ಲಬ್ ತೊರೆದ ಕಾರಣ ಸ್ಟೀವನ್ ಡಿಯಾಸ್ ಅವರು ಒಡಿಶಾ ತಂಡದ ನೂತನ ಕೋಚ್ ಆಗಿ ಆಯ್ಕೆಯಾಗಿದ್ದಾರೆ. ಭಾರದತ ಮಾಜಿ ಅಂತಾರಾಷ್ಟ್ರೀಯ ಆಟಗಾರ, ನಾಳೆಯ ಪಂದ್ಯದಲ್ಲಿ ಯುವ ಆಟಗಾರರಿಗೆ ಹೆಚ್ಚಿನ ಅವಕಾಶ ನೀಡುವುದಾಗಿ ಹೇಳಿದ್ದಾರೆ. " ನಮ್ಮ ತಂಡವು ನಿಜವಾಗಿಯೂ ಯುವ ಆಟಗಾರರಿಂದ ಕೂಡಿದೆ. ನಮ್ಮದು ಸಮತೋಲನದಿಂದ ಕೂಡಿದ ತಂಡ. ಆದರೆ ನಮ್ಮ ತಂಡಕ್ಕೆ ಅದೃಷ್ಟ ಇರಲಿಲ್ಲ. ಆರಂಭದಲ್ಲಿ ಥೊಯಿಬಾ ಸಿಂಗ್ ಮತ್ತು ಸೌರಭ್ ಮೆಹರ್ ಅವರು ಆಡಿದರು, ಆದರೆ ನಂತರ ಬಾಕ್ಸ್ಟರ್ ಭಾರತದ ಆಟಗಾರರಿಗೆ ಅವಕಾಶ ನೀಡಲಿಲ್ಲ. ನಮ್ಮ ಆಟಗಾರರಲ್ಲಿ ಉತ್ತಮ ಪ್ರತಿಭೆ ಇದೆ. ತರಬೇತಿಯ ವೇಳೆ ನಾನು ಈ ಆಟಗಾರರನ್ನು ಗಮನಿಸಿದ್ದೇನೆ. ಮುಂದಿನ ದಿನಗಳಲ್ಲಿ ಇವರು ಉತ್ತಮ ಆಟಗಾರರಾಗಿ ರೂಪುಗೊಳ್ಳಲಿದ್ದಾರೆ. ನಾವು ಯುವ ಆಟಗಾರರಿಗೆ ಅವಕಾಶವನ್ನೇ ನೀಡಲಿಲ್ಲ. ನಾನು ಅವರಿಗೆ ಅವಕಾಶ ನೀಡಲು ಯತ್ನಿಸುವೆ. ಒಂದು ಪಂದ್ಯ ಭವಿಷ್ಯವನ್ನೇ ಬದಲಾಯಿಸಬಲ್ಲದು,' ಎಂದು ಡಿಯಾಸ್ ಹೇಳಿದ್ದಾರೆ.
This News Article is a Copy of MYKHEL
15-05-25 11:59 am
HK News Desk
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
15-05-25 06:36 pm
Mangalore Correspondent
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
15-05-25 06:02 pm
Bangalore Correspondent
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm