ಬ್ರೇಕಿಂಗ್ ನ್ಯೂಸ್
26-02-21 12:02 pm Source: MYKHEL ಕ್ರೀಡೆ
ಗೋವಾ: ಹೀರೋ ಇಂಡಿಯನ್ ಸೂಪರ್ ಲೀಗ್ ನ ಕಳೆದ ಎಂಟು ಪಂದ್ಯಗಳಲ್ಲಿ ಸೋಲು ಕಂಡಿರದ ನಾರ್ಥ್ ಈಸ್ಟ್ ಯುನೈಟೆಡ್ ತಂಡ, ಕಠಿಣ ಪಂದ್ಯಗಳಲ್ಲೂ ಜಯ ಗಳಿಸಿ ಅದ್ಭುತ ಪ್ರದರ್ಶನ ತೋರಿದೆ. ಕೇರಳ ಬ್ಲಾಸ್ಟರ್ಸ್ ವಿರುದ್ಧದ ಪಂದ್ಯದಲ್ಲಿ ಡ್ರಾ ಗಳಿಸಿದರೂ ಪ್ಲೇ ಆಫ್ ನಲ್ಲಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಳ್ಳಲಿದೆ. ಖಾಲೀದ್ ಜಮೀಲ್ ಕೋಚ್ ಜವಾಬ್ದಾರಿ ವಹಿಸಿಕೊಂಡಾಗಿನಿಂದ ನಾರ್ಥ್ ಈಸ್ಟ್ ಉತ್ತಮ ಪ್ರದರ್ಶಶನ ತೋರುತ್ತಿರುವುದು ಗಮನಾರ್ಹ.
ಕೇರಳ ತಂಡ ಕೊನೆಯಲ್ಲಿ ಎರಡನೇ ಸ್ಥಾನದಲ್ಲಿದೆ. ಆದರೆ ಆ ತಂಡವನ್ನು ಹಗುರವಾಗಿ ಪರಿಗಣಿಸಬಾರದು ಎಂದು ಜಮೀಲ್ ತಮ್ಮ ತಂಡಕ್ಕೆ ಎಚ್ಚರಿಕೆ ನೀಡಿದ್ದಾರೆ. "ಕೇರಳ ಬ್ಲಾಸ್ಟರ್ಸ್ ತಂಡ ಬಲಿಷ್ಠ ಮತ್ತು ಉತ್ತಮ ತಂಡವಾಗಿದೆ. ಅವರಲ್ಲಿ ಪ್ರತಿಭಾವಂತ ಆಟಗಾರಿದ್ದಾರೆ. ನಾವು ಅದಕ್ಕೆ ಸಜ್ಜಾಗಿರಬೇಕು. ನಾವು ಈ ಪಂದ್ವಯವನ್ನು ಹಗುರವಾಗಿ ಪರಿಗಣಿಸಬಾರದು, ನಾವು ಹೋರಾಟ ನೀಡಬೇಕು,' ಎಂದು ಹೇಳಿದ್ದಾರೆ.

ಜಯಕ್ಕಾಗಿಯೇ ಸಿದ್ಧತೆ ನಡೆಸಿದ್ದೇವೆ
ನಾರ್ಥ್ ಈಸ್ಟ್ ಯುನೈಟೆಡ್ ತಂಡಕ್ಕೆ ಕೇವಲ ಒಂದು ಅಂಕ ಬೇಕಾಗಿರಬಹುದು, ಆದರೆ ಕೇವಲ ಅದಕ್ಕೆ ಮಾತ್ರ ಸೀಮಿತವಾಗಿರಬಾರದು ಎಂದು ಜಮೀಲ್ ಹೇಳಿದ್ದಾರೆ, "ಏನಾದರೂ ಆಗಲಿ ಎಂದು ನಾವು ಯೋಚಿಸುವುದಿಲ್ಲ. ನಾವು ಜಯಕ್ಕಾಗಿಯೇ ಸಿದ್ಧತೆ ನಡೆಸಿದ್ದೇವೆ. ಏನಾದರು ಆಗಲಿ ಎಂಬುದಕ್ಕೆ ಈಗ ಅವಕಾಶ ಇಲ್ಲ. ಉತ್ತಮ ರೀತಿಯಲ್ಲಿ ಹೋರಾಟ ನೀಡಿ ಮೂರು ಅಂಕಗಳನ್ನು ಗಳಿಸುವುದು ನಮ್ಮ ಗುರಿ," ಎಂದು ಜಮೀಲ್ ಹೇಳಿದ್ದಾರೆ.

ಅಜೇಯರಾಗಿರುವುದು ಗುರಿಯಲ್ಲ
ಜಮೀಲ್ ಹಿಂದೆಯೂ ಯಶಸ್ಸನ್ನು ಕಂಡ ಕೋಚ್. ಜಯ ಅಥವಾ ಡ್ರಾ ಗಳಿಸಿ ಒಂಬತ್ತು ಪಂದ್ಯಗಳಲ್ಲಿ ಅಜೇಯರಾಗಿರುವುದು ಗುರಿಯಲ್ಲ. ಪ್ಲೇ ಆಫ್ ತಲುಪಿದ ಮೊದಲ ಭಾರತೀಯ ಮ್ಯಾನೇಜರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಬೇಕು. "ಐಎಸ್ ಎಲ್ ದೊಡ್ಟ ಸವಾಲು ಇದ್ದಂತೆ. ಇಲ್ಲಿ ನಾವು ಸಾಮಾನ್ಯವಾಗಿ ಉತ್ತಮ ತಂಡಗಳೊಂದಿಗೆ ಇರುತ್ತೇವೆ. ಅಲ್ಲಿ ಉತ್ತಮ ಆಟಗಾರರು ಮತ್ತು ಕೋಚ್ ಇರುತ್ತಾರೆ, ಆದ್ದರಿಂದ ಇದು ವಿಭಿನ್ನವಾದ ಸವಾಲು," ಎಂದರು.

ಕೇರಳ ಜಯ ಗಳಿಸಿರಲಿಲ್ಲ
ಕಳೆದ ಏಳು ಪಂದ್ಯಗಳಲ್ಲಿ ಕೇರಳ ಜಯ ಗಳಿಸಿರಲಿಲ್ಲ. ತಂಡ ಈಗ ಕೇವಲ ಗೌರವಕ್ಕಾಗಿ ಆಡುತ್ತಿದೆ. ಇಶ್ಫಾಕ್ ಅಹಮ್ಮದ್ ಅವರು ಋತುವನ್ನು ಮುಗಿಸುವ ಉದ್ದೇಶದಿಂದ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ. " ಪಂದ್ಯಗಳು ಪ್ರತಿಯೊಬ್ಬರಿಗೂ ಸಮಾನವಾಗಿರುತ್ತದೆ. ನಮಗೆ ಪಂದ್ಯ ಗೆಲ್ಲಲೇಬೇಕಾಗಿದೆ. ಅವರಿಗೂ ಗೆಲ್ಲಬೇಕಾಗಿದೆ. ಅವರಿಗೆ ಗೆಲ್ಲಬೇಕಾದ ಒತ್ತಡವಿದೆ. ನಮಗೆ ಗೆದ್ದು ಋತುವನ್ನು ಗೌರವದೊಂದಿಗೆ ಮುಗಿಸಲು ಮತ್ತೊಂದು ಅವಕಾಶ," ಎಂದರು. "ನಾವು ಅವರು ನಮ್ಮ ಬಗ್ಗೆ ಏನು ಯೋಚಿಸುತ್ತಾರೆ ಎಂಬುದರ ಬಗ್ಗೆ ಯೋಚಿಸುವುದಿಲ್ಲ, ನಾವು ನಮಗಾಗಿ ಏನು ಮಾಡಬೇಕೆಂಬುದರ ಬಗ್ಗೆ ಯೋಚಿಸುತ್ತೇವೆ," ಎಂದರು.
This News Article is a Copy of MYKHEL
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm