ಬ್ರೇಕಿಂಗ್ ನ್ಯೂಸ್
01-03-21 10:42 am Source: MYKHEL ಕ್ರೀಡೆ
ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ಅಂತಿಮ ಪಂದ್ಯ ಮಾತ್ರವೇ ಬಾಕಿಯಿದೆ. ಮಾರ್ಚ್ ನಾಲ್ಕರಿಂದ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಆಟಗಾರರು ಸಿದ್ಧತೆಯನ್ನು ನಡೆಸುತ್ತಿದ್ದಾರೆ.
ಭಾನುವಾರ ವಿರಾಟ್ ಕೊಹ್ಲಿ ನೇತೃತ್ವ ಟೀಮ್ ಇಂಡಿಯಾ ನಾಲ್ಕನೇ ಪಂದ್ಯಕ್ಕಾಗಿ ಭರ್ಜರಿ ಅಭ್ಯಾಸವನ್ನು ನಡೆಸಿದೆ. ನೆಟ್ನಲ್ಲಿ ಟೀಮ್ ಇಂಡಿಯಾದ ಎಲ್ಲಾ ಆಟಗಾರರು ಕಠಿಣ ತರಬೇತಿಯಲ್ಲಿ ತೊಡಗಿಸಿಕೊಂಡಿದ್ದು ಬೆವರಿಳಿಸಿ ಅಭ್ಯಾಸವನ್ನು ಮಾಡಿದ್ದಾರೆ. ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ ಸದ್ಯ 2-1 ಅಂತರದಿಂದ ಮುನ್ನಡೆಯನ್ನು ಸಾಧಿಸಿದೆ.
ಬಿಸಿಸಿಐನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಟೀಮ್ ಇಂಡಿಯಾ ಆಟಗಾರರ ಅಭ್ಯಾಸದ ಫೋಟೋಗಳನ್ನು ಹಂಚಿಕೊಳ್ಳಲಾಗಿದೆ. ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಬ್ಯಾಟಿಂಗ್ ಅಭ್ಯಾಸವನ್ನು ನಡೆಸುತ್ತಿದ್ದರೆ ಅಕ್ಷರ್ ಪಟೇಲ್ ಬೌಲಿಂಗ್ನಲ್ಲಿ ತೊಡಗಿಸಿಕೊಂಡಿದ್ದರು. ಮತ್ತೊಂದೆಡೆ ಅಜಿಂಕ್ಯ ರಹಾನೆ ಫೀಲ್ಡಿಂಗ್ ಅಭ್ಯಾಸದಲ್ಲಿ ತೊಡಗಿಕೊಂಡಿರುವ ಫೋಟೋವನ್ನು ಹಂಚಿಕೊಳ್ಳಲಾಗಿದೆ.
ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಸರಣಿ ಕೇವಲ ಎರಡೇ ದಿನದಲ್ಲಿ ಅಂತ್ಯವಾಗಿದ್ದು ಭಾರತ 10 ವಿಕೆಟ್ಗಳ ಭರ್ಜರಿ ಗೆಲುವು ಸಾಧಿಸಿದೆ. ಸ್ಪಿನ್ನರ್ಗಳಿಗೆ ಸಹಕಾರಿಯಾಗಿದ್ದ ಪಿಚ್ನಲ್ಲಿ ಇಂಗ್ಲೆಂಡ್ ತಂಡದ ಬ್ಯಾಟ್ಸ್ಮನ್ಗಳು ಮಿಂಚುವಲ್ಲಿ ಸಂಪೂರ್ಣ ವಿಫಲವಾಗಿದ್ದರು.
ಮತ್ತೊಂದೆಡೆ ಐಸಿಸಿ ಪ್ರಕಟಿಸಿದ ಶ್ರೇಯಾಂಕ ಪಟ್ಟಿಯಲ್ಲಿ ಟೀಮ್ ಇಂಡಿಯಾದ ಹಲವು ಆಟಗಾರರು ಉತ್ತಮ ಸಾಧನೆ ತೋರಿದ್ದಾರೆ. ಆರ್ ಅಶ್ವಿನ್, ಅಕ್ಷರ್ ಪಟೇಲ್ ಮತ್ತೊ ರೋಹಿತ್ ಶರ್ಮಾ ಮಹತ್ವದ ಏರಿಕೆ ಕಾಣುವಲ್ಲಿ ಯಶಸ್ವಿಯಾಗಿದ್ದಾರೆ. ಬ್ಯಾಟಿಂಗ್ನಲ್ಲಿ ಟೆಸ್ಟ್ ಕ್ರಿಕೆಟ್ನ ತಮ್ಮ ಸಾರ್ವಕಾಲಿಕ ಉತ್ತಮ ಶ್ರೇಯಾಂಕ 8ನೇ ಸ್ಥಾನಕ್ಕೇರಿದ್ದಾರೆ ರೋಹಿತ್ ಶರ್ಮಾ. ಮತ್ತೊಂದೆಡೆ ಆರ್ ಅಶ್ವಿನ್ ಬೌಲರ್ಗಳ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ತಲುಪಿದ್ದಾರೆ. ಅಕ್ಷರ್ ಪಟೇಲ್ 30 ಸ್ಥಾನಗಳ ಏರಿಕೆ ಕಂಡಿದ್ದು ಈಗ 38ನೇ ಶ್ರೇಯಾಂಕದಲ್ಲಿದ್ದಾರೆ.
This News Article Is A Copy Of MYKHEL
15-05-25 10:16 pm
HK News Desk
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
15-05-25 08:04 pm
Mangalore Correspondent
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
15-05-25 06:02 pm
Bangalore Correspondent
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm