ಬ್ರೇಕಿಂಗ್ ನ್ಯೂಸ್
02-03-21 11:06 am Source: MYKHEL ಕ್ರೀಡೆ
ವಿಜಯ್ ಹಜಾರೆ ಟೂರ್ನಿಯಲ್ಲಿ ಕರ್ನಾಟಕ ಅದ್ಭುತವಾಗಿ ಪ್ರದರ್ಶನ ನೀಡುತ್ತಿದ್ದು ಕ್ವಾರ್ಟರ್ ಫೈನಲ್ ಹಂತಕ್ಕೆ ಪ್ರವೇಶವನ್ನು ಪಡೆದುಕೊಂಡಿದೆ. ಈ ಹಂತಕ್ಕೆ ಕರ್ನಾಟಕ ಮತ್ತಷ್ಟು ಬಲಿಷ್ಠವಾಗಿ ಕಾಣಿಸಿಕೊಳ್ಳಲಿದೆ. ಅದಕ್ಕೆ ಕಾರಣ ಕರ್ನಾಟಕ ತಂಡಕ್ಕೆ ಇಬ್ಬರು ಅನುಭವಿ ಆಟಗಾರರು ಸೇರಿಕೊಳ್ಳಲಿದ್ದಾರೆ.
ಮನೀಶ್ ಪಾಂಡೆ ಹಾಗೂ ಕೃಷ್ಣಪ್ಪ ಗೌತಮ್ ಕರ್ನಾಟಕ ತಂಡವನ್ನು ಮುಂದಿನ ಹಂತದ ವೇಳೆಗೆ ಸೇರಿಕೊಳ್ಳಲಿದ್ದಾರೆ. ಈ ಬಗ್ಗೆ ಸೋಮವಾರ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೊಸಿಯೇಶನ್ ಸ್ಪಷ್ಟವಾಗಿ ಮಾಹಿತಿಯನ್ನು ನೀಡಿದೆ. ಈ ಅನುಭವಿ ಆಟಗಾರರ ಸೇರ್ಪಡೆ ಕರ್ನಾಟಕ ತಂಡಕ್ಕೆ ದೊಡ್ಡ ಬಲವನ್ನು ನೀಡಲಿದೆ ಎಂಬುದರಲ್ಲಿ ಅನುಮಾನವಿಲ್ಲ.
ಗಾಯಗೊಂಡಿದ್ದ ಮನೀಶ್ ಪಾಂಡೆ ಈಗ ಸಂಪೂರ್ಣವಾಗಿ ಚೇತರಿಕೆಯನ್ನು ಕಂಡಿದ್ದಾರೆ. ಮತ್ತೊಂದೆಡೆ ಟೀಮ್ ಇಂಡಿಯಾದ ನೆಟ್ ಬೌಲರ್ ಆಗಿ ತೆರಳಿದ್ದ ಕೆ ಗೌತಮ್ ಅವರನ್ನು ಬಿಡುಗಡೆಗೊಳಿಸಲಾಗಿದೆ. ಹೀಗಾಗಿ ಈ ಇಬ್ಬರೂ ರಾಜ್ಯ ತಂಡವನ್ನು ಪ್ರತಿನಿಧಿಸುವ ಅವಕಾಶವನ್ನು ಪಡೆದುಕೊಂಡಿದ್ದಾರೆ.
ವಿಜಯ್ ಹಜಾರೆ ಟ್ರೋಫಿಯಲ್ಲಿ 'ಎಲೈಟ್ ಗ್ರೂಫ್ ಸಿ'ಯಲ್ಲಿರುವ ಕರ್ನಾಟಕ ಆಡಿದ ಐದು ಪಂದ್ಯಗಳಲ್ಲಿ ನಾಲ್ಕರಲ್ಲಿ ಗೆಲುವು ಕಂಡಿದೆ. ಈ ಮೂಲಕ ಅಂಕಪಟ್ಟಿಯಲ್ಲಿ ಮೊದಲ ಸ್ಥಾನವನ್ನು ಪಡೆದುಕೊಂಡಿದ್ದು ಈಗಾಗಲೇ ಕ್ವಾರ್ಟರ್ ಫೈನಲ್ ಹಂತಕ್ಕೆ ಪ್ರವೇಶವನ್ನು ಪಡೆದುಕೊಂಡಿದೆ.
ಕರ್ನಾಟಕ ತಂಡದ ಅಗ್ರ ಕ್ರಮಾಂಕದ ಆಟಗಾರರು ಅತ್ಯುತ್ತಮ ಫಾರ್ಮ್ನಲ್ಲಿದ್ದು ತಂಡಕ್ಕೆ ಸಾಕಷ್ಟು ಕೊಡುಗೆಯನ್ನು ನೀಡಿದ್ದಾರೆ. ದೇವದತ್ ಪಡಿಕ್ಕಲ್ ಹಾಗೂ ನಾಯಕ ಆರ್ ಸಮರ್ಥ್ ಅದ್ಭುತವಾಗಿ ಪ್ರದರ್ಶನ ನೀಡುತ್ತಿದ್ದಾರೆ. ಸತತ ಮೂರನೇ ಶತಕವನ್ನು ದಾಖಲಿಸಿ ಮಿಂಚಿದ್ದಾರೆ ದೇವದತ್ ಪಡಿಕ್ಕಲ್.
This News Article Is A Copy Of MYKHEL
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm