ಬ್ರೇಕಿಂಗ್ ನ್ಯೂಸ್
03-03-21 03:24 pm Source: MYKHEL ಕ್ರೀಡೆ
ಭಾರತ ಹಾಗೂ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಭಾರತ ಅದ್ಭುತ ಪ್ರದರ್ಶನವನ್ನು ನೀಡಿ ಐತಿಹಾಸಿಕ ಗೆಲುವು ಸಾಧಿಸಿರುವುದು ಈಗ ಇತಿಹಾಸದ ಪುಟ ಸೇರಿದೆ. ಆದರೆ ಈ ಸರಣಿಯಲ್ಲಿ ಅಂತಿಮ ಎರಡು ಟೆಸ್ಟ್ ಪಂದ್ಯಗಳಲ್ಲಿ ಪಾಲ್ಗೊಂಡಿದ್ದ ಡೇವಿಡ್ ವಾರ್ನರ್ ತಮ್ಮ ನಿರ್ಧಾರದ ಬಗ್ಗೆ ವಿಷಾದವನ್ನು ಹೊರ ಹಾಕಿದ್ದಾರೆ. ತಾನು ಆ ನಿರ್ಧಾರವನ್ನು ತೆಗೆದುಕೊಂಡಿದ್ದು ತಪ್ಪು ಎಂದು ಹೇಳಿಕೊಂಡಿದ್ದಾರೆ.
ಟೀಮ್ ಇಂಡಿಯಾ ವಿರುದ್ಧದ ಏಕದಿನ ಸರಣಿಯಲ್ಲಿ ಡೇವಿಡ್ ವಾರ್ನರ್ ಗಾಯಗೊಂಡಿದ್ದರು. ಬಳಿಕ ಸೀಮಿತ ಓವರ್ಗಳ ಸರಣಿಯಿಂದ ಹೊರಗುಳಿದ ವಾರ್ನರ್ ಟೆಸ್ಟ್ ಕ್ರಿಕೆಟ್ನ ಮೊದಲ ಎರಡನೂ ಪಂದ್ಯಗಳನ್ನು ತಪ್ಪಿಸಿಕೊಂಡಿದ್ದರು. ಆದರೆ ಅಂತಿಮ ಎರಡು ಪಂದ್ಯಗಳಿಗೆ ಅವರು ತಂಡವನ್ನು ಕೂಡಿಕೊಂಡಿದ್ದರಾದರೂ ಅವರಿಂದ ಉತ್ತಮ ಪ್ರದರ್ಶನ ಹೊರ ಬಂದಿರಲಿಲ್ಲ.
ಆದರೆ ಈಗ ಡೇವಿಡ್ ವಾರ್ನರ್ ಸಂಪೂರ್ಣ ಚೇತರಿಕೆ ಕಾಣುವ ಮುನ್ನವೇ ನಾನು ತಂಡವನ್ನು ಸೇರಿಕೊಂಡು ಭಾರತದ ವಿರುದ್ಧ ಆಡಲು ಇಳಿದೆ. ಆದರೆ ಆ ನಿರ್ಧಾರವನ್ನು ನಾನು ತೆಗೆದುಕೊಳ್ಳಬಾರದಿತ್ತು ಎಂದಿದ್ದಾರೆ.

ನಾನು ಅದನ್ನು ತಪ್ಪಿಸಿಕೊಳ್ಳಬಹುದಿತ್ತು
ತೊಡೆಸಂದು ನೋವಿನಿಂದ ತಂಡದಿಂದ ಹೊರಗುಳಿದಿದ್ದ ಡೇವಿಡ್ ವಾರ್ನರ್ ಭಾರತದ ವಿರುದ್ಧ ಅಂತಿಮ ಎರಡು ಟೆಸ್ಟ್ ಪಂದ್ಯಗಳಲ್ಲಿ ಆಡಲು ಅವಸರ ಮಾಡಿದೆ. ಆ ನಿರ್ಧಾರವನ್ನು ನಾನು ತೆಗೆದುಕೊಳ್ಳಬಾರದಾಗಿತ್ತು ಎಂದು ವಿಷಾದವನ್ನು ವ್ಯಕ್ತಪಡಿಸಿದ್ದಾರೆ. "ನಾನು ಈ ನಿರ್ಧಾರವನ್ನು ತೆಗೆದುಕೊಳ್ಳದೆ ಇರಬಹುದಾಗಿತ್ತು. ಆದರೆ ಭಾರತದ ವಿರುದ್ಧ ಎದುರಿಸಿದ ಕಠಿಣ ಸವಾಲಿನಿಂದ ಸಹ ಆಟಗಾರರಿಗೆ ಸಹಾಯವಾಗಲು ನಾನು ಬೇಗನೆ ತಂಡಕ್ಕೆ ಮರಳಲು ನಿರ್ಧರಿಸಿದ್ದೆ" ಎಂದಿದ್ದಾರೆ.
ಆ ನಿರ್ಧಾರ ಬೇಡವಾಗಿತ್ತು
ಆ ಪಂದ್ಯಗಳಲ್ಲಿ ಆಡುವ ನಿರ್ಧಾರವನ್ನು ನಾನು ತೆಗದುಕೊಂಡಿದ್ದೆ. ಆ ಸಂದರ್ಭದಲ್ಲಿ ನಾನು ತಂಡದಲ್ಲಿರಬೇಕು ಹಾಗೂ ಸಹ ಆಟಗಾರರಿಗೆ ಸಹಾಯವನ್ನು ಮಾಡಬೇಕು ಎನಿಸಿತ್ತು. ಅದರೆ ಈಗ ಹಿಂದಿರುಗಿ ನೋಡಿದರೆ ಆ ನಿರ್ಧಾರವನ್ನು ನಾನು ತೆಗೆದುಕೊಳ್ಳಬಾರದಾಗಿತ್ತು ಎನಿಸುತ್ತದೆ. ನಾನು ಗಾಯಗೊಂಡಿದ್ದರಿಂದ ಅದು ನನ್ನನ್ನು ಹಿಂದಕ್ಕೆ ತಳ್ಳಿತ್ತು" ಎಂದು ಹೇಳಿದ್ದಾರೆ ಡೇವಿಡ್ ವಾರ್ನರ್.
ತಂಡಕ್ಕೆ ಒಳಿತಾಗಲಿ ಎಂದುಕೊಂಡಿದ್ದೆ
ನಾನು ನನ್ನ ಬಗ್ಗೆ ಯೋಚಿಸಿದ್ದರೆ ಬಹುಶಃ ನಾನು 'ಬೇಡ' ಎನ್ನುತ್ತಿದ್ದೆ. ಆದರೆ ತಂಡಕ್ಕೆ ಒಳಿತಾಗಲೆಂದು ನಾನು ಬಯಸಿದ್ದೆ. ನಾನು ಆರಂಭಿಕನಾಗಿ ಕಣಕ್ಕಿಳಿಯುವ ಮೂಲಕ ತಂಡಕ್ಕೆ ಉತ್ತಮ ಕೊಡುಗೆಯನ್ನು ನೀಡಬಹುದು ಎಂದು ಭಾವಿಸಿದ್ದೆ ಎಂದು ಡೇವಿಡ್ ವಾರ್ನರ್ ಹೇಳಿದ್ದಾರೆ.
This News Article Is A Copy Of MYKHEL
15-04-26 03:15 pm
HK News Staffer
ದಾವಣಗೆರೆ ಗದ್ದಲಕ್ಕೆ ಮತ್ತೊಂದು ತಲೆದಂಡ ; ಸಿಎಂ ರಾಜ...
14-04-26 02:04 pm
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
15-04-26 01:18 pm
HK News Staffer
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm