ಬ್ರೇಕಿಂಗ್ ನ್ಯೂಸ್
03-03-21 03:24 pm Source: MYKHEL ಕ್ರೀಡೆ
ಭಾರತ ಹಾಗೂ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಭಾರತ ಅದ್ಭುತ ಪ್ರದರ್ಶನವನ್ನು ನೀಡಿ ಐತಿಹಾಸಿಕ ಗೆಲುವು ಸಾಧಿಸಿರುವುದು ಈಗ ಇತಿಹಾಸದ ಪುಟ ಸೇರಿದೆ. ಆದರೆ ಈ ಸರಣಿಯಲ್ಲಿ ಅಂತಿಮ ಎರಡು ಟೆಸ್ಟ್ ಪಂದ್ಯಗಳಲ್ಲಿ ಪಾಲ್ಗೊಂಡಿದ್ದ ಡೇವಿಡ್ ವಾರ್ನರ್ ತಮ್ಮ ನಿರ್ಧಾರದ ಬಗ್ಗೆ ವಿಷಾದವನ್ನು ಹೊರ ಹಾಕಿದ್ದಾರೆ. ತಾನು ಆ ನಿರ್ಧಾರವನ್ನು ತೆಗೆದುಕೊಂಡಿದ್ದು ತಪ್ಪು ಎಂದು ಹೇಳಿಕೊಂಡಿದ್ದಾರೆ.
ಟೀಮ್ ಇಂಡಿಯಾ ವಿರುದ್ಧದ ಏಕದಿನ ಸರಣಿಯಲ್ಲಿ ಡೇವಿಡ್ ವಾರ್ನರ್ ಗಾಯಗೊಂಡಿದ್ದರು. ಬಳಿಕ ಸೀಮಿತ ಓವರ್ಗಳ ಸರಣಿಯಿಂದ ಹೊರಗುಳಿದ ವಾರ್ನರ್ ಟೆಸ್ಟ್ ಕ್ರಿಕೆಟ್ನ ಮೊದಲ ಎರಡನೂ ಪಂದ್ಯಗಳನ್ನು ತಪ್ಪಿಸಿಕೊಂಡಿದ್ದರು. ಆದರೆ ಅಂತಿಮ ಎರಡು ಪಂದ್ಯಗಳಿಗೆ ಅವರು ತಂಡವನ್ನು ಕೂಡಿಕೊಂಡಿದ್ದರಾದರೂ ಅವರಿಂದ ಉತ್ತಮ ಪ್ರದರ್ಶನ ಹೊರ ಬಂದಿರಲಿಲ್ಲ.
ಆದರೆ ಈಗ ಡೇವಿಡ್ ವಾರ್ನರ್ ಸಂಪೂರ್ಣ ಚೇತರಿಕೆ ಕಾಣುವ ಮುನ್ನವೇ ನಾನು ತಂಡವನ್ನು ಸೇರಿಕೊಂಡು ಭಾರತದ ವಿರುದ್ಧ ಆಡಲು ಇಳಿದೆ. ಆದರೆ ಆ ನಿರ್ಧಾರವನ್ನು ನಾನು ತೆಗೆದುಕೊಳ್ಳಬಾರದಿತ್ತು ಎಂದಿದ್ದಾರೆ.

ನಾನು ಅದನ್ನು ತಪ್ಪಿಸಿಕೊಳ್ಳಬಹುದಿತ್ತು
ತೊಡೆಸಂದು ನೋವಿನಿಂದ ತಂಡದಿಂದ ಹೊರಗುಳಿದಿದ್ದ ಡೇವಿಡ್ ವಾರ್ನರ್ ಭಾರತದ ವಿರುದ್ಧ ಅಂತಿಮ ಎರಡು ಟೆಸ್ಟ್ ಪಂದ್ಯಗಳಲ್ಲಿ ಆಡಲು ಅವಸರ ಮಾಡಿದೆ. ಆ ನಿರ್ಧಾರವನ್ನು ನಾನು ತೆಗೆದುಕೊಳ್ಳಬಾರದಾಗಿತ್ತು ಎಂದು ವಿಷಾದವನ್ನು ವ್ಯಕ್ತಪಡಿಸಿದ್ದಾರೆ. "ನಾನು ಈ ನಿರ್ಧಾರವನ್ನು ತೆಗೆದುಕೊಳ್ಳದೆ ಇರಬಹುದಾಗಿತ್ತು. ಆದರೆ ಭಾರತದ ವಿರುದ್ಧ ಎದುರಿಸಿದ ಕಠಿಣ ಸವಾಲಿನಿಂದ ಸಹ ಆಟಗಾರರಿಗೆ ಸಹಾಯವಾಗಲು ನಾನು ಬೇಗನೆ ತಂಡಕ್ಕೆ ಮರಳಲು ನಿರ್ಧರಿಸಿದ್ದೆ" ಎಂದಿದ್ದಾರೆ.
ಆ ನಿರ್ಧಾರ ಬೇಡವಾಗಿತ್ತು
ಆ ಪಂದ್ಯಗಳಲ್ಲಿ ಆಡುವ ನಿರ್ಧಾರವನ್ನು ನಾನು ತೆಗದುಕೊಂಡಿದ್ದೆ. ಆ ಸಂದರ್ಭದಲ್ಲಿ ನಾನು ತಂಡದಲ್ಲಿರಬೇಕು ಹಾಗೂ ಸಹ ಆಟಗಾರರಿಗೆ ಸಹಾಯವನ್ನು ಮಾಡಬೇಕು ಎನಿಸಿತ್ತು. ಅದರೆ ಈಗ ಹಿಂದಿರುಗಿ ನೋಡಿದರೆ ಆ ನಿರ್ಧಾರವನ್ನು ನಾನು ತೆಗೆದುಕೊಳ್ಳಬಾರದಾಗಿತ್ತು ಎನಿಸುತ್ತದೆ. ನಾನು ಗಾಯಗೊಂಡಿದ್ದರಿಂದ ಅದು ನನ್ನನ್ನು ಹಿಂದಕ್ಕೆ ತಳ್ಳಿತ್ತು" ಎಂದು ಹೇಳಿದ್ದಾರೆ ಡೇವಿಡ್ ವಾರ್ನರ್.
ತಂಡಕ್ಕೆ ಒಳಿತಾಗಲಿ ಎಂದುಕೊಂಡಿದ್ದೆ
ನಾನು ನನ್ನ ಬಗ್ಗೆ ಯೋಚಿಸಿದ್ದರೆ ಬಹುಶಃ ನಾನು 'ಬೇಡ' ಎನ್ನುತ್ತಿದ್ದೆ. ಆದರೆ ತಂಡಕ್ಕೆ ಒಳಿತಾಗಲೆಂದು ನಾನು ಬಯಸಿದ್ದೆ. ನಾನು ಆರಂಭಿಕನಾಗಿ ಕಣಕ್ಕಿಳಿಯುವ ಮೂಲಕ ತಂಡಕ್ಕೆ ಉತ್ತಮ ಕೊಡುಗೆಯನ್ನು ನೀಡಬಹುದು ಎಂದು ಭಾವಿಸಿದ್ದೆ ಎಂದು ಡೇವಿಡ್ ವಾರ್ನರ್ ಹೇಳಿದ್ದಾರೆ.
This News Article Is A Copy Of MYKHEL
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
28-02-26 10:54 pm
HK News Desk
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
ದೆಹಲಿ ಅಬಕಾರಿ ನೀತಿ ಹಗರಣ ; ಕೇಜ್ರಿವಾಲ್, ಸಿಸೋಡಿಯಾ...
27-02-26 03:55 pm
28-02-26 08:53 pm
HK News Desk
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm