ಬ್ರೇಕಿಂಗ್ ನ್ಯೂಸ್
03-03-21 05:42 pm Source: MYKHEL ಕ್ರೀಡೆ
ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗೆ ಇದೇ ಮೊದಲ ಬಾರಿಗೆ ಕಳೆದ ಬಾರಿಯ ಐಪಿಎಲ್ನಲ್ಲಿ ಮಿಂಚಿದ್ದ ಆಟಗಾರ ರಾಹುಲ್ ತೆವಾಟಿಯಾ ಆಯ್ಕೆಯಾಗಿದ್ದಾರೆ. ಆದರೆ ಈ ಅವಕಾಶ ರಾಹುಲ್ ತೆವಾಟಿಯಾ ಅವರ ಕೈತಪ್ಪುವ ಪರಿಸ್ಥಿತಿ ಉಂಟಾಗಿದೆ. ಫಿಟ್ನೆಸ್ ಪರೀಕ್ಷೆಯಲ್ಲಿ ರಾಹುಲ್ ತೆವಾಟಿಯಾ ವಿಫಲವಾಗಿದ್ದು ತಂಡವನ್ನು ಕೂಡಿಕೊಳ್ಳುವ ಬಗ್ಗೆ ಅನುಮಾನಗಳು ಎದ್ದಿದೆ.
ದಿ ಟೆಲಿಗ್ರಾಫ್ ವರದಿ ಮಾಡಿದಂತೆ ರಾಹುಲ್ ತೆವಾಟಿಯಾ ಮತ್ತು ವರುಣ್ ಚಕ್ರವರ್ತಿ ಫಿಟ್ನೆಸ್ ಟೆಸ್ಟ್ನಲ್ಲಿ ವಿಫಲರಾಗಿದ್ದಾರೆ ಎನ್ನಲಾಗಿದೆ. ರಾಷ್ಟ್ರೀಯ ತಂಡದ ಆಟಗಾರರಿಗೆ ನಿಗದಿ ಪಡಿಸಿದ ಮಾನದಂಡಕ್ಕಿಂತ ಈ ಇಬ್ಬರು ಆಟಗಾರರ ಫಿಟ್ನೆಸ್ ಸಾಮರ್ಥ್ಯ ಕೆಳಮಟ್ಟದಲ್ಲಿದೆ ಎಂದು ತಿಳಿದುಬಂದಿದೆ. ವರುಣ್ ಚಕ್ರವರ್ತಿ ಫಿಟ್ನೆಸ್ ಪರೀಕ್ಷೆಯಲ್ಲಿ ವಿಫಲವಾಗಿರುವುದು ಈ ಮೊದಲು ಬಹಿರಂಗವಾಗಿತ್ತು.
ರಾಷ್ಟ್ರೀಯ ತಂಡವನ್ನು ಪ್ರತಿನಿಧಿಸುವ ಆಟಗಾರರು ಯೋ-ಯೋ ಪರೀಕ್ಷೆಯಲ್ಲಿ 17:1 ಅಂಕವನ್ನು ಪಡೆದಿರಬೇಕು ಅಥವಾ 2 ಕಿಲೋ ವೀಟರ್ ಅಂತರವನ್ನು 8.3 ನಿಮಿಷಗಳ ಒಳಗೆ ತಲುಪಿರಬೇಕು.
ಹಾಗಾದಲ್ಲಿ ಮಾತ್ರವೇ ಟೀಮ್ ಇಂಡಿಯಾವನ್ನು ಪ್ರತಿನಿಧಿಸಲು ಸಾಧ್ಯವಾಗುತ್ತದೆ. ಆದರೆ ರಾಹುಲ್ ತೆವಾಟಿಯಾ ಹಾಗೂ ವರುಣ್ ಚಕ್ರವರ್ತಿಗೆ ರಾಷ್ಟ್ರೀಯ ತಂಡವನ್ನು ಪ್ರತಿಧಿಸುವ ಅವಕಾಶ ಇಲ್ಲಿಗೇ ಅಂತ್ಯವಾಗುವುದಿಲ್ಲ. ಅವರಿಗೆ ಮತ್ತೊಮ್ಮೆ ಅವಕಾಶವನ್ನು ನೀಡಲಾಗುತ್ತದೆ. ಆಗ ಅವರು ತಮ್ಮ ನಿಗದಿತ ಮಾನದಂಡಗಳನ್ನು ಪೂರೈಸಿದರೆ ತಂಡವನ್ನು ಪ್ರವೇಶಿಸಲು ಅವಕಾಶ ಪಡೆಯುತ್ತಾರೆ.
ರಾಷ್ಟ್ರೀಯ ತಂಡದ ಆಯ್ಕೆಗಾರರು ಹಾಗೂ ತಂಡದ ಮ್ಯಾನೇಜ್ಮೆಂಟ್ ಈ ಆಟಗಾರರ ಲಭ್ಯತೆಯ ಬಗ್ಗೆ ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ ಮಾಹಿತಿಯ ಮೇರೆಗೆ ನಿರ್ಣಯವನ್ನು ತೆಗೆದುಕೊಳ್ಳಲಿದೆ. ಭಾರತೀಯ ಕ್ರಿಕೆಟ್ನಲ್ಲಿ ಅಪರಿಚಿತವಾಗಿದ್ದ ರಾಹುಲ್ ತೆವಾಟಿಯಾ ಕಳೆದ ಐಪಿಎಲ್ನಲ್ಲಿ ನಿಡಿದ ಕೆಲ ಅದ್ಭುತ ಪ್ರದರ್ಶನಗಳಿಂದಾಗಿ ರಾಷ್ಟ್ರೀಯ ತಂಡದಲ್ಲಿ ಅವಕಾಶವನ್ನು ಪಡೆಯುವಂತೆ ಮಾಡಿದೆ.
This News Article Is A Copy Of MYKHEL
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:59 am
HK News Staffer
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm