ಬ್ರೇಕಿಂಗ್ ನ್ಯೂಸ್
03-03-21 05:42 pm Source: MYKHEL ಕ್ರೀಡೆ
ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗೆ ಇದೇ ಮೊದಲ ಬಾರಿಗೆ ಕಳೆದ ಬಾರಿಯ ಐಪಿಎಲ್ನಲ್ಲಿ ಮಿಂಚಿದ್ದ ಆಟಗಾರ ರಾಹುಲ್ ತೆವಾಟಿಯಾ ಆಯ್ಕೆಯಾಗಿದ್ದಾರೆ. ಆದರೆ ಈ ಅವಕಾಶ ರಾಹುಲ್ ತೆವಾಟಿಯಾ ಅವರ ಕೈತಪ್ಪುವ ಪರಿಸ್ಥಿತಿ ಉಂಟಾಗಿದೆ. ಫಿಟ್ನೆಸ್ ಪರೀಕ್ಷೆಯಲ್ಲಿ ರಾಹುಲ್ ತೆವಾಟಿಯಾ ವಿಫಲವಾಗಿದ್ದು ತಂಡವನ್ನು ಕೂಡಿಕೊಳ್ಳುವ ಬಗ್ಗೆ ಅನುಮಾನಗಳು ಎದ್ದಿದೆ.
ದಿ ಟೆಲಿಗ್ರಾಫ್ ವರದಿ ಮಾಡಿದಂತೆ ರಾಹುಲ್ ತೆವಾಟಿಯಾ ಮತ್ತು ವರುಣ್ ಚಕ್ರವರ್ತಿ ಫಿಟ್ನೆಸ್ ಟೆಸ್ಟ್ನಲ್ಲಿ ವಿಫಲರಾಗಿದ್ದಾರೆ ಎನ್ನಲಾಗಿದೆ. ರಾಷ್ಟ್ರೀಯ ತಂಡದ ಆಟಗಾರರಿಗೆ ನಿಗದಿ ಪಡಿಸಿದ ಮಾನದಂಡಕ್ಕಿಂತ ಈ ಇಬ್ಬರು ಆಟಗಾರರ ಫಿಟ್ನೆಸ್ ಸಾಮರ್ಥ್ಯ ಕೆಳಮಟ್ಟದಲ್ಲಿದೆ ಎಂದು ತಿಳಿದುಬಂದಿದೆ. ವರುಣ್ ಚಕ್ರವರ್ತಿ ಫಿಟ್ನೆಸ್ ಪರೀಕ್ಷೆಯಲ್ಲಿ ವಿಫಲವಾಗಿರುವುದು ಈ ಮೊದಲು ಬಹಿರಂಗವಾಗಿತ್ತು.
ರಾಷ್ಟ್ರೀಯ ತಂಡವನ್ನು ಪ್ರತಿನಿಧಿಸುವ ಆಟಗಾರರು ಯೋ-ಯೋ ಪರೀಕ್ಷೆಯಲ್ಲಿ 17:1 ಅಂಕವನ್ನು ಪಡೆದಿರಬೇಕು ಅಥವಾ 2 ಕಿಲೋ ವೀಟರ್ ಅಂತರವನ್ನು 8.3 ನಿಮಿಷಗಳ ಒಳಗೆ ತಲುಪಿರಬೇಕು.
ಹಾಗಾದಲ್ಲಿ ಮಾತ್ರವೇ ಟೀಮ್ ಇಂಡಿಯಾವನ್ನು ಪ್ರತಿನಿಧಿಸಲು ಸಾಧ್ಯವಾಗುತ್ತದೆ. ಆದರೆ ರಾಹುಲ್ ತೆವಾಟಿಯಾ ಹಾಗೂ ವರುಣ್ ಚಕ್ರವರ್ತಿಗೆ ರಾಷ್ಟ್ರೀಯ ತಂಡವನ್ನು ಪ್ರತಿಧಿಸುವ ಅವಕಾಶ ಇಲ್ಲಿಗೇ ಅಂತ್ಯವಾಗುವುದಿಲ್ಲ. ಅವರಿಗೆ ಮತ್ತೊಮ್ಮೆ ಅವಕಾಶವನ್ನು ನೀಡಲಾಗುತ್ತದೆ. ಆಗ ಅವರು ತಮ್ಮ ನಿಗದಿತ ಮಾನದಂಡಗಳನ್ನು ಪೂರೈಸಿದರೆ ತಂಡವನ್ನು ಪ್ರವೇಶಿಸಲು ಅವಕಾಶ ಪಡೆಯುತ್ತಾರೆ.
ರಾಷ್ಟ್ರೀಯ ತಂಡದ ಆಯ್ಕೆಗಾರರು ಹಾಗೂ ತಂಡದ ಮ್ಯಾನೇಜ್ಮೆಂಟ್ ಈ ಆಟಗಾರರ ಲಭ್ಯತೆಯ ಬಗ್ಗೆ ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ ಮಾಹಿತಿಯ ಮೇರೆಗೆ ನಿರ್ಣಯವನ್ನು ತೆಗೆದುಕೊಳ್ಳಲಿದೆ. ಭಾರತೀಯ ಕ್ರಿಕೆಟ್ನಲ್ಲಿ ಅಪರಿಚಿತವಾಗಿದ್ದ ರಾಹುಲ್ ತೆವಾಟಿಯಾ ಕಳೆದ ಐಪಿಎಲ್ನಲ್ಲಿ ನಿಡಿದ ಕೆಲ ಅದ್ಭುತ ಪ್ರದರ್ಶನಗಳಿಂದಾಗಿ ರಾಷ್ಟ್ರೀಯ ತಂಡದಲ್ಲಿ ಅವಕಾಶವನ್ನು ಪಡೆಯುವಂತೆ ಮಾಡಿದೆ.
This News Article Is A Copy Of MYKHEL
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm