ಬ್ರೇಕಿಂಗ್ ನ್ಯೂಸ್
03-03-21 05:42 pm Source: MYKHEL ಕ್ರೀಡೆ
ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗೆ ಇದೇ ಮೊದಲ ಬಾರಿಗೆ ಕಳೆದ ಬಾರಿಯ ಐಪಿಎಲ್ನಲ್ಲಿ ಮಿಂಚಿದ್ದ ಆಟಗಾರ ರಾಹುಲ್ ತೆವಾಟಿಯಾ ಆಯ್ಕೆಯಾಗಿದ್ದಾರೆ. ಆದರೆ ಈ ಅವಕಾಶ ರಾಹುಲ್ ತೆವಾಟಿಯಾ ಅವರ ಕೈತಪ್ಪುವ ಪರಿಸ್ಥಿತಿ ಉಂಟಾಗಿದೆ. ಫಿಟ್ನೆಸ್ ಪರೀಕ್ಷೆಯಲ್ಲಿ ರಾಹುಲ್ ತೆವಾಟಿಯಾ ವಿಫಲವಾಗಿದ್ದು ತಂಡವನ್ನು ಕೂಡಿಕೊಳ್ಳುವ ಬಗ್ಗೆ ಅನುಮಾನಗಳು ಎದ್ದಿದೆ.
ದಿ ಟೆಲಿಗ್ರಾಫ್ ವರದಿ ಮಾಡಿದಂತೆ ರಾಹುಲ್ ತೆವಾಟಿಯಾ ಮತ್ತು ವರುಣ್ ಚಕ್ರವರ್ತಿ ಫಿಟ್ನೆಸ್ ಟೆಸ್ಟ್ನಲ್ಲಿ ವಿಫಲರಾಗಿದ್ದಾರೆ ಎನ್ನಲಾಗಿದೆ. ರಾಷ್ಟ್ರೀಯ ತಂಡದ ಆಟಗಾರರಿಗೆ ನಿಗದಿ ಪಡಿಸಿದ ಮಾನದಂಡಕ್ಕಿಂತ ಈ ಇಬ್ಬರು ಆಟಗಾರರ ಫಿಟ್ನೆಸ್ ಸಾಮರ್ಥ್ಯ ಕೆಳಮಟ್ಟದಲ್ಲಿದೆ ಎಂದು ತಿಳಿದುಬಂದಿದೆ. ವರುಣ್ ಚಕ್ರವರ್ತಿ ಫಿಟ್ನೆಸ್ ಪರೀಕ್ಷೆಯಲ್ಲಿ ವಿಫಲವಾಗಿರುವುದು ಈ ಮೊದಲು ಬಹಿರಂಗವಾಗಿತ್ತು.
ರಾಷ್ಟ್ರೀಯ ತಂಡವನ್ನು ಪ್ರತಿನಿಧಿಸುವ ಆಟಗಾರರು ಯೋ-ಯೋ ಪರೀಕ್ಷೆಯಲ್ಲಿ 17:1 ಅಂಕವನ್ನು ಪಡೆದಿರಬೇಕು ಅಥವಾ 2 ಕಿಲೋ ವೀಟರ್ ಅಂತರವನ್ನು 8.3 ನಿಮಿಷಗಳ ಒಳಗೆ ತಲುಪಿರಬೇಕು.
ಹಾಗಾದಲ್ಲಿ ಮಾತ್ರವೇ ಟೀಮ್ ಇಂಡಿಯಾವನ್ನು ಪ್ರತಿನಿಧಿಸಲು ಸಾಧ್ಯವಾಗುತ್ತದೆ. ಆದರೆ ರಾಹುಲ್ ತೆವಾಟಿಯಾ ಹಾಗೂ ವರುಣ್ ಚಕ್ರವರ್ತಿಗೆ ರಾಷ್ಟ್ರೀಯ ತಂಡವನ್ನು ಪ್ರತಿಧಿಸುವ ಅವಕಾಶ ಇಲ್ಲಿಗೇ ಅಂತ್ಯವಾಗುವುದಿಲ್ಲ. ಅವರಿಗೆ ಮತ್ತೊಮ್ಮೆ ಅವಕಾಶವನ್ನು ನೀಡಲಾಗುತ್ತದೆ. ಆಗ ಅವರು ತಮ್ಮ ನಿಗದಿತ ಮಾನದಂಡಗಳನ್ನು ಪೂರೈಸಿದರೆ ತಂಡವನ್ನು ಪ್ರವೇಶಿಸಲು ಅವಕಾಶ ಪಡೆಯುತ್ತಾರೆ.
ರಾಷ್ಟ್ರೀಯ ತಂಡದ ಆಯ್ಕೆಗಾರರು ಹಾಗೂ ತಂಡದ ಮ್ಯಾನೇಜ್ಮೆಂಟ್ ಈ ಆಟಗಾರರ ಲಭ್ಯತೆಯ ಬಗ್ಗೆ ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ ಮಾಹಿತಿಯ ಮೇರೆಗೆ ನಿರ್ಣಯವನ್ನು ತೆಗೆದುಕೊಳ್ಳಲಿದೆ. ಭಾರತೀಯ ಕ್ರಿಕೆಟ್ನಲ್ಲಿ ಅಪರಿಚಿತವಾಗಿದ್ದ ರಾಹುಲ್ ತೆವಾಟಿಯಾ ಕಳೆದ ಐಪಿಎಲ್ನಲ್ಲಿ ನಿಡಿದ ಕೆಲ ಅದ್ಭುತ ಪ್ರದರ್ಶನಗಳಿಂದಾಗಿ ರಾಷ್ಟ್ರೀಯ ತಂಡದಲ್ಲಿ ಅವಕಾಶವನ್ನು ಪಡೆಯುವಂತೆ ಮಾಡಿದೆ.
This News Article Is A Copy Of MYKHEL
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 05:22 pm
HK News Desk
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm