ಬ್ರೇಕಿಂಗ್ ನ್ಯೂಸ್
03-03-21 05:42 pm Source: MYKHEL ಕ್ರೀಡೆ
ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗೆ ಇದೇ ಮೊದಲ ಬಾರಿಗೆ ಕಳೆದ ಬಾರಿಯ ಐಪಿಎಲ್ನಲ್ಲಿ ಮಿಂಚಿದ್ದ ಆಟಗಾರ ರಾಹುಲ್ ತೆವಾಟಿಯಾ ಆಯ್ಕೆಯಾಗಿದ್ದಾರೆ. ಆದರೆ ಈ ಅವಕಾಶ ರಾಹುಲ್ ತೆವಾಟಿಯಾ ಅವರ ಕೈತಪ್ಪುವ ಪರಿಸ್ಥಿತಿ ಉಂಟಾಗಿದೆ. ಫಿಟ್ನೆಸ್ ಪರೀಕ್ಷೆಯಲ್ಲಿ ರಾಹುಲ್ ತೆವಾಟಿಯಾ ವಿಫಲವಾಗಿದ್ದು ತಂಡವನ್ನು ಕೂಡಿಕೊಳ್ಳುವ ಬಗ್ಗೆ ಅನುಮಾನಗಳು ಎದ್ದಿದೆ.
ದಿ ಟೆಲಿಗ್ರಾಫ್ ವರದಿ ಮಾಡಿದಂತೆ ರಾಹುಲ್ ತೆವಾಟಿಯಾ ಮತ್ತು ವರುಣ್ ಚಕ್ರವರ್ತಿ ಫಿಟ್ನೆಸ್ ಟೆಸ್ಟ್ನಲ್ಲಿ ವಿಫಲರಾಗಿದ್ದಾರೆ ಎನ್ನಲಾಗಿದೆ. ರಾಷ್ಟ್ರೀಯ ತಂಡದ ಆಟಗಾರರಿಗೆ ನಿಗದಿ ಪಡಿಸಿದ ಮಾನದಂಡಕ್ಕಿಂತ ಈ ಇಬ್ಬರು ಆಟಗಾರರ ಫಿಟ್ನೆಸ್ ಸಾಮರ್ಥ್ಯ ಕೆಳಮಟ್ಟದಲ್ಲಿದೆ ಎಂದು ತಿಳಿದುಬಂದಿದೆ. ವರುಣ್ ಚಕ್ರವರ್ತಿ ಫಿಟ್ನೆಸ್ ಪರೀಕ್ಷೆಯಲ್ಲಿ ವಿಫಲವಾಗಿರುವುದು ಈ ಮೊದಲು ಬಹಿರಂಗವಾಗಿತ್ತು.
ರಾಷ್ಟ್ರೀಯ ತಂಡವನ್ನು ಪ್ರತಿನಿಧಿಸುವ ಆಟಗಾರರು ಯೋ-ಯೋ ಪರೀಕ್ಷೆಯಲ್ಲಿ 17:1 ಅಂಕವನ್ನು ಪಡೆದಿರಬೇಕು ಅಥವಾ 2 ಕಿಲೋ ವೀಟರ್ ಅಂತರವನ್ನು 8.3 ನಿಮಿಷಗಳ ಒಳಗೆ ತಲುಪಿರಬೇಕು.
ಹಾಗಾದಲ್ಲಿ ಮಾತ್ರವೇ ಟೀಮ್ ಇಂಡಿಯಾವನ್ನು ಪ್ರತಿನಿಧಿಸಲು ಸಾಧ್ಯವಾಗುತ್ತದೆ. ಆದರೆ ರಾಹುಲ್ ತೆವಾಟಿಯಾ ಹಾಗೂ ವರುಣ್ ಚಕ್ರವರ್ತಿಗೆ ರಾಷ್ಟ್ರೀಯ ತಂಡವನ್ನು ಪ್ರತಿಧಿಸುವ ಅವಕಾಶ ಇಲ್ಲಿಗೇ ಅಂತ್ಯವಾಗುವುದಿಲ್ಲ. ಅವರಿಗೆ ಮತ್ತೊಮ್ಮೆ ಅವಕಾಶವನ್ನು ನೀಡಲಾಗುತ್ತದೆ. ಆಗ ಅವರು ತಮ್ಮ ನಿಗದಿತ ಮಾನದಂಡಗಳನ್ನು ಪೂರೈಸಿದರೆ ತಂಡವನ್ನು ಪ್ರವೇಶಿಸಲು ಅವಕಾಶ ಪಡೆಯುತ್ತಾರೆ.
ರಾಷ್ಟ್ರೀಯ ತಂಡದ ಆಯ್ಕೆಗಾರರು ಹಾಗೂ ತಂಡದ ಮ್ಯಾನೇಜ್ಮೆಂಟ್ ಈ ಆಟಗಾರರ ಲಭ್ಯತೆಯ ಬಗ್ಗೆ ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ ಮಾಹಿತಿಯ ಮೇರೆಗೆ ನಿರ್ಣಯವನ್ನು ತೆಗೆದುಕೊಳ್ಳಲಿದೆ. ಭಾರತೀಯ ಕ್ರಿಕೆಟ್ನಲ್ಲಿ ಅಪರಿಚಿತವಾಗಿದ್ದ ರಾಹುಲ್ ತೆವಾಟಿಯಾ ಕಳೆದ ಐಪಿಎಲ್ನಲ್ಲಿ ನಿಡಿದ ಕೆಲ ಅದ್ಭುತ ಪ್ರದರ್ಶನಗಳಿಂದಾಗಿ ರಾಷ್ಟ್ರೀಯ ತಂಡದಲ್ಲಿ ಅವಕಾಶವನ್ನು ಪಡೆಯುವಂತೆ ಮಾಡಿದೆ.
This News Article Is A Copy Of MYKHEL
15-04-26 03:15 pm
HK News Staffer
ದಾವಣಗೆರೆ ಗದ್ದಲಕ್ಕೆ ಮತ್ತೊಂದು ತಲೆದಂಡ ; ಸಿಎಂ ರಾಜ...
14-04-26 02:04 pm
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
15-04-26 01:18 pm
HK News Staffer
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm