ಬ್ರೇಕಿಂಗ್ ನ್ಯೂಸ್
03-03-21 05:42 pm Source: MYKHEL ಕ್ರೀಡೆ
ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗೆ ಇದೇ ಮೊದಲ ಬಾರಿಗೆ ಕಳೆದ ಬಾರಿಯ ಐಪಿಎಲ್ನಲ್ಲಿ ಮಿಂಚಿದ್ದ ಆಟಗಾರ ರಾಹುಲ್ ತೆವಾಟಿಯಾ ಆಯ್ಕೆಯಾಗಿದ್ದಾರೆ. ಆದರೆ ಈ ಅವಕಾಶ ರಾಹುಲ್ ತೆವಾಟಿಯಾ ಅವರ ಕೈತಪ್ಪುವ ಪರಿಸ್ಥಿತಿ ಉಂಟಾಗಿದೆ. ಫಿಟ್ನೆಸ್ ಪರೀಕ್ಷೆಯಲ್ಲಿ ರಾಹುಲ್ ತೆವಾಟಿಯಾ ವಿಫಲವಾಗಿದ್ದು ತಂಡವನ್ನು ಕೂಡಿಕೊಳ್ಳುವ ಬಗ್ಗೆ ಅನುಮಾನಗಳು ಎದ್ದಿದೆ.
ದಿ ಟೆಲಿಗ್ರಾಫ್ ವರದಿ ಮಾಡಿದಂತೆ ರಾಹುಲ್ ತೆವಾಟಿಯಾ ಮತ್ತು ವರುಣ್ ಚಕ್ರವರ್ತಿ ಫಿಟ್ನೆಸ್ ಟೆಸ್ಟ್ನಲ್ಲಿ ವಿಫಲರಾಗಿದ್ದಾರೆ ಎನ್ನಲಾಗಿದೆ. ರಾಷ್ಟ್ರೀಯ ತಂಡದ ಆಟಗಾರರಿಗೆ ನಿಗದಿ ಪಡಿಸಿದ ಮಾನದಂಡಕ್ಕಿಂತ ಈ ಇಬ್ಬರು ಆಟಗಾರರ ಫಿಟ್ನೆಸ್ ಸಾಮರ್ಥ್ಯ ಕೆಳಮಟ್ಟದಲ್ಲಿದೆ ಎಂದು ತಿಳಿದುಬಂದಿದೆ. ವರುಣ್ ಚಕ್ರವರ್ತಿ ಫಿಟ್ನೆಸ್ ಪರೀಕ್ಷೆಯಲ್ಲಿ ವಿಫಲವಾಗಿರುವುದು ಈ ಮೊದಲು ಬಹಿರಂಗವಾಗಿತ್ತು.
ರಾಷ್ಟ್ರೀಯ ತಂಡವನ್ನು ಪ್ರತಿನಿಧಿಸುವ ಆಟಗಾರರು ಯೋ-ಯೋ ಪರೀಕ್ಷೆಯಲ್ಲಿ 17:1 ಅಂಕವನ್ನು ಪಡೆದಿರಬೇಕು ಅಥವಾ 2 ಕಿಲೋ ವೀಟರ್ ಅಂತರವನ್ನು 8.3 ನಿಮಿಷಗಳ ಒಳಗೆ ತಲುಪಿರಬೇಕು.
ಹಾಗಾದಲ್ಲಿ ಮಾತ್ರವೇ ಟೀಮ್ ಇಂಡಿಯಾವನ್ನು ಪ್ರತಿನಿಧಿಸಲು ಸಾಧ್ಯವಾಗುತ್ತದೆ. ಆದರೆ ರಾಹುಲ್ ತೆವಾಟಿಯಾ ಹಾಗೂ ವರುಣ್ ಚಕ್ರವರ್ತಿಗೆ ರಾಷ್ಟ್ರೀಯ ತಂಡವನ್ನು ಪ್ರತಿಧಿಸುವ ಅವಕಾಶ ಇಲ್ಲಿಗೇ ಅಂತ್ಯವಾಗುವುದಿಲ್ಲ. ಅವರಿಗೆ ಮತ್ತೊಮ್ಮೆ ಅವಕಾಶವನ್ನು ನೀಡಲಾಗುತ್ತದೆ. ಆಗ ಅವರು ತಮ್ಮ ನಿಗದಿತ ಮಾನದಂಡಗಳನ್ನು ಪೂರೈಸಿದರೆ ತಂಡವನ್ನು ಪ್ರವೇಶಿಸಲು ಅವಕಾಶ ಪಡೆಯುತ್ತಾರೆ.
ರಾಷ್ಟ್ರೀಯ ತಂಡದ ಆಯ್ಕೆಗಾರರು ಹಾಗೂ ತಂಡದ ಮ್ಯಾನೇಜ್ಮೆಂಟ್ ಈ ಆಟಗಾರರ ಲಭ್ಯತೆಯ ಬಗ್ಗೆ ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ ಮಾಹಿತಿಯ ಮೇರೆಗೆ ನಿರ್ಣಯವನ್ನು ತೆಗೆದುಕೊಳ್ಳಲಿದೆ. ಭಾರತೀಯ ಕ್ರಿಕೆಟ್ನಲ್ಲಿ ಅಪರಿಚಿತವಾಗಿದ್ದ ರಾಹುಲ್ ತೆವಾಟಿಯಾ ಕಳೆದ ಐಪಿಎಲ್ನಲ್ಲಿ ನಿಡಿದ ಕೆಲ ಅದ್ಭುತ ಪ್ರದರ್ಶನಗಳಿಂದಾಗಿ ರಾಷ್ಟ್ರೀಯ ತಂಡದಲ್ಲಿ ಅವಕಾಶವನ್ನು ಪಡೆಯುವಂತೆ ಮಾಡಿದೆ.
This News Article Is A Copy Of MYKHEL
16-03-25 10:32 pm
HK News Desk
Reservation for Muslims, Siddaramaiah, BJP: ಸ...
16-03-25 12:11 pm
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
16-03-25 10:55 pm
Mangalore Correspondent
Tejasvi Surya, Marriage, Udupi: ಉಡುಪಿ ಕೃಷ್ಣ ಮ...
16-03-25 10:10 pm
Mangalore Jail, Suicide, POSCO: ಮೂಡುಬಿದ್ರೆಯಲ್...
16-03-25 02:05 pm
ಸಂವಿಧಾನ ಉಲ್ಲಂಘಿಸಿ ವಕ್ಫ್ ಕಾಯ್ದೆ ಸರಿಯಲ್ಲ, ಪ್ರಾಣ...
15-03-25 10:00 pm
Mangalore court, Moral Police, Acquit: ಹಿಂದು...
15-03-25 08:32 pm
16-03-25 10:39 pm
Bangalore Correspondent
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm
Ccb Police, Firearms, Mangalore crime: ವಾಮಂಜೂ...
13-03-25 06:44 pm