ಬ್ರೇಕಿಂಗ್ ನ್ಯೂಸ್
05-03-21 12:13 pm Source: MYKHEL ಕ್ರೀಡೆ
ಭಾರತದ ವಿರುದ್ಧದ ಅಂತಿಮ ಟೆಸ್ಟ್ನ ಮೊದಲ ಇನ್ನಿಂಗ್ಸ್ನಲ್ಲಿ ಕಳಪೆ ಪ್ರದರ್ಶನವನ್ನು ನೀಡಿದ ಇಂಗ್ಲೆಂಡ್ ಬ್ಯಾಟ್ಸ್ಮನ್ಗಳನ್ನು ಇಂಗ್ಲೆಂಡ್ ತಂಡದ ಮತ್ತೋರ್ವ ಮಾಜಿ ಕ್ರಿಕೆಟಿಗ ಟೀಕಿಸಿದ್ದಾರೆ. ಮೈಕಲ್ ವಾನ್ ಕೆವಿನ್ ಪೀಟರ್ಸನ್ ಬಳಿಕ ಆಂಡ್ರೋ ಸ್ಟ್ರಾಸ್ ಕೂಡ ಭಾರತೀಯ ನೆಲದಲ್ಲಿ ಇಂಗ್ಲೆಂಡ್ ಆಟಗಾರರ ಕಳಪೆ ಬ್ಯಾಟಿಂಗ್ ಬಗ್ಗೆ ಕುಟುಕಿದ್ದಾರೆ.
ಮೂರನೇ ಟೆಸ್ಟ್ ಪಂದ್ಯ ಎರಡೇ ದಿನಕ್ಕೆ ಅಂತ್ಯವಾದ ಬಳಿಕ ಸ್ಟ್ರಾಸ್ ಅಹ್ಮದಾಬಾದ್ ಪಿಚ್ ಬಗ್ಗೆ ಟೀಕೆಯನ್ನು ಮಾಡಿದ್ದರು. ನಾಲ್ಕನೇ ಪಂದ್ಯವನ್ನು ಕೂಡ ಅಹ್ಮದಾಬಾದ್ನಲ್ಲಿಯೇ ಆಡಿದ್ದರಾದರೂ ಬೇರೆ ಪಿಚ್ನಲ್ಲಿ ಆಡಲಾಗುತ್ತಿದೆ. ಈ ಹಿಂದಿನ ಪಂದ್ಯದಂತೆ ಹೆಚ್ಚಿನ ತಿರುವನ್ನು ಚೆಂಡು ಪಿಚ್ ಈ ಪಿಚ್ನಲ್ಲಿ ಮೊದಲ ದಿನದಾಟದಲ್ಲಿ ಪಡೆದಿರಲಿಲ್ಲ. ಹಾಗಿದ್ದರೂ ಇಂಗ್ಲೆಂಡ್ 205 ರನ್ಗಳಿಸಲಷ್ಟೇ ಶಕ್ತವಾಗಿತ್ತು.
"ಭಾರತೀಯ ಬೌಲಿಂಗ್ ದಾಳಿ ಅತ್ಯುತ್ತಮವಾಗಿತ್ತು. ನಾವು ಉತ್ತಮ ಗುಣಮಟ್ಟದ ಭಾರತೀಯ ಬೌಲಿಂಗ್ ದಾಳಿಯನ್ನು ನಿರೀಕ್ಷಿಸಿದ್ದೆವು. ಆದರೆ ಸತ್ಯವನ್ನು ನಾವು ಮರೆಮಾಚಲು ಸಾಧ್ಯವಿಲ್ಲ. ಇಂತಾ ಪರಿಸ್ಥಿತಿಯಲ್ಲಿ ಇಂಗ್ಲೆಂಡ್ ತಂಡದ ಬ್ಯಾಟಿಂಗ್ ಗುಣಮಟ್ಟ ಸಾಕಾಗಲಿಲ್ಲ. ಪ್ರಾಮಾಣಿಕವಾಗಿ ಹೇಳುತ್ತಿದ್ದೇನೆ" ಎಂದಿದ್ದಾರೆ ಆ್ಯಂಡ್ರೋ ಸ್ಟ್ರಾಸ್.
"ಪಿಚ್ ಬಗ್ಗೆ, ಎಸೆತಗಳ ಬಗ್ಗೆ ಹಾಗೂ ಅನನುಭವದ ಬಗ್ಗೆ ಎಲ್ಲಾ ರೀತಿಯ ನೆಪಗಳನ್ನು ನೀವು ಯೋಚಿಸಬಹುದು. ಆದರೆ ಭಾರತದಲ್ಲಿ ನೀವು ಗೆಲ್ಲಲೇಬೇಕಾದರೆ ಮೊದಲ ಇನ್ನಿಂಗ್ಸ್ನಲ್ಲಿ ನೀವು ರನ್ಗಳಿಸಿವು ದಾರಿಯನ್ನು ಹೊಂದಿರಲೇಬೇಕು. ಅದನ್ನು ಇಂಗ್ಲೆಂಡ್ಗೆ ಸಾಧಿಸಲು ಸಾಧ್ಯವಾಗಿಲ್ಲ" ಎಂದಿದ್ದಾರೆ ಸ್ಟ್ರಾಸ್.
ಇಂಗ್ಲಂಡ್ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಮೂರು ಪಂದ್ಯಗಳಲ್ಲಿ ಭಾರತ 2-1 ಅಂತರದಿಂದ ಮುನ್ನಡೆಯನ್ನು ಸಾಧಿಸಿದೆ. ಅಂತಿಮ ಪಂದ್ಯದಲ್ಲಿ ಇಂಗ್ಲೆಂಡ್ಗೆ ಸರಣಿಯನ್ನು ಡ್ರಾ ಗೊಳಿಸಬೇಕಾದರೆ ಗೆಲುವು ಅನಿವಾರ್ಯವಾಗಿದೆ.
This News Article Is A Copy Of MYKHEL
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:59 am
HK News Staffer
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm