ಬ್ರೇಕಿಂಗ್ ನ್ಯೂಸ್
07-03-21 04:11 pm Source: MYKHEL Madhukara Shetty ಕ್ರೀಡೆ
ಐಪಿಎಲ್ನ 14ನೇ ಆವೃತ್ತಿಯ ವೇಳಾಪಟ್ಟಿ ಬಿಡುಗಡೆಯಾಗಿದೆ. ಈ ಮೂಲಕ ಐಪಿಎಲ್ ಆರಂಭದ ಚಟುವಟಿಕೆಗಳು ಮತ್ತಷ್ಟು ಗರಿಗೆದರಲು ಆರಂಭವಾಗಿದೆ. ಈ ವೇಳಾಪಟ್ಟಿ ಬಿಡುಗಡೆಯಾಗುವ ಮೂಲಕ ಸಾಕಷ್ಟು ಕುತೂಹಲಕಾರಿ ಪ್ರಶ್ನೆಗಳಿಗೆ ಉತ್ತರಗಳೂ ದೊರೆತಿದೆ.
ಭಾರತ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿ ಅಂತ್ಯವಾಗಿ 19 ದಿನಗಳ ಬಳಿಕ ಈ ಮಹತ್ವದ ಟೂರ್ನಿಗೆ ಚಾಲನೆ ದೊರೆಯಲಿದೆ. ಐಪಿಎಲ್ ಯಾವಾಗ ಆರಂಭವಾಗಲಿದೆ ಎಂಬುದರಿಂದ ಹಿಡಿದು ಈ ಬಾರಿಯ ಐಪಿಎಲ್ಗೆ ಆತಿಥ್ಯವಹಿಸುವ ಕ್ರೀಡಾಂಗಣಗಳು ಯಾವುದು? ಯಾವಾಗ ಫೈನಲ್ ಪಂದ್ಯ ನಡೆಯಲಿದೆ? ಪ್ರೇಕ್ಷಕರಿಗೆ ಕ್ರೀಡಾಂಗಣಕ್ಕೆ ಅವಕಾಶಗಳು ದೊರೆಯಲಿದೆಯಾ ಎಂಬುದು ಸೇರಿದಂತೆ ಹಲವಾರು ಪ್ರಶ್ನೆಗಳು ಅಭಿಮಾನಿಗಳಲ್ಲಿ ಮೂಡಿತ್ತು. ಈ ಬಗೆಗಿನ ಉತ್ತರಕ್ಕಾಗಿ ಅಭಿಮಾನಿಗಳು ಕಾದು ಕುಳಿತಿದ್ದರು.
ಈ ಪ್ರಶ್ನೆಗಳಿಗೆ ಉತ್ತರಗಳು ದೊರೆಯುವ ಜೊತೆಗೆ ಕೆಲ ಕುತೂಹಲಕಾರಿ ಸಂಗತಿಗಳು ಕೂಡ ಬೆಳಕಿಗೆ ಬಂದಿದೆ.
ಆರು ಕ್ರೀಡಾಂಗಣದಲ್ಲಿ ಪಂದ್ಯಗಳು
ಭಾರತದಲ್ಲಿ ಪ್ರತಿ ಬಾರಿಯೂ ಪಂದ್ಯಗಳು ನಡೆಯುವಾಗ ಪ್ರತಿ ತಂಡಗಳಿಗೂ ತವರು ಅಂಗಳಗಳು ಇದ್ದು ತವರು ಹಾಗೂ ಹೊರಗಿನ ಅಂಗಳದಲ್ಲಿ ಪಂದ್ಯಗಳನ್ನು ಆಡುವುದು ಸಾಮಾನ್ಯವಾಗಿದೆ. ಆದರೆ ಈ ಬಾರಿ ಕೊರೊನಾ ವೈರಸ್ನ ಕಾರಣದಿಂದಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಕೇವಲ 6 ಅಂಗಳಗಳಲ್ಲಿ ಪಂದ್ಯಗಳು ನಡೆಯಲಿದೆ. ಚೆನ್ನೈ, ಮುಂಬೈ, ಅಹ್ಮದಾಬಾದ್, ಡೆಲ್ಲಿ, ಬೆಂಗಳೂರು ಹಾಗೂ ಕೊಲ್ಕತ್ತಾ ಕ್ರೀಡಾಂಗಣಗಳಲ್ಲಿ ಪಂದ್ಯಗಳು ನಡೆಯಲಿದೆ
ತವರು ಅಂಗಳದಲ್ಲಿ ಆಡಲ್ಲ ತಂಡಗಳು
ಮತ್ತೊಂದು ಕುತೂಹಲಕಾರಿ ಸಂಗತಿಯೆಂದರೆ ಈ ಬಾರಿಯ ಐಪಿಎಲ್ನಲ್ಲಿ ಯಾವುದೇ ತಂಡಗಳು ಕೂಡ ತವರು ಕ್ರೀಡಾಂಗಣದಲ್ಲಿ ಎದುರಾಳಿಯನ್ನು ಎದುರಿಸುವುದಿಲ್ಲ. ಅಂದರೆ ಉದಾಹರಣೆಗೆ ಆರ್ಸಿಬಿ ತಂಡ ಬೆಂಗಳೂರಿನ ಕ್ರೀಡಾಂಗಣದಲ್ಲಿ ಒಂದೇ ಒಂದು ಪಂದ್ಯವನ್ನೂ ಆಡುವುದಿಲ್ಲ. ಪ್ರತಿಯೊಂದು ತಂಡಕ್ಕೂ ಇದೇ ರೀತಿಯಲ್ಲಿ ಪಂದ್ಯಗಳನ್ನು ಆಯೋಜಿಸಲಾಗಿದೆ. ಹೀಗಾಗಿ ಪ್ರತಿಯೊಂದು ಪಂದ್ಯವೂ ಕೂಡ ತಟಸ್ಥ ಕೇಂದ್ರಗಳಲ್ಲಿಯೇ ನಡೆಯಲಿದೆ. ಹೆಚ್ಚಿನ ಪ್ರಯಾಣವನ್ನು ತಪ್ಪಿಸುವುದು ಹಾಗೂ ಪ್ರತಿ ಫ್ರಾಂಚೈಸಿಗೂ ಸಮಾನ ಅವಕಾಶವನ್ನು ನಿಡುವ ಹಿನ್ನೆಲೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
ಮೊದಲಾರ್ಧದಲ್ಲಿ ಖಾಲಿ ಕ್ರೀಡಾಂಗಣದಲ್ಲಿ ಪಂದ್ಯ
ಕೊರೊನಾ ವೈರಸ್ನ ಮುಂಜಾಗ್ರಥಾ ಕ್ರಮವಾಗಿ ಈ ಬಾರಿಯ ಐಪಿಎಲ್ನ ಮೊದಲಾರ್ಧದ ಪಂದ್ಯಗಳು ಮುಚ್ಚಿದ ಕ್ರೀಡಾಂಗಣಗಳಲ್ಲಿಯೇ ನಡೆಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಮೊದಲಾರ್ಧ ಅಂತ್ಯದ ಬಳಿಕ ಮತ್ತೊಮ್ಮೆ ಪರಿಶೀಲನೆಯನ್ನು ನಡೆಸಿ ಪ್ರೇಕ್ಷಕರಿಗೆ ಅವಕಾಶ ಮಾಡಿಕೊಡುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ತೀರ್ಮಾನಿಸಲಾಗಿದೆ.
This News Article Is A Copy Of MYKHEL
20-08-25 12:33 pm
Bangalore Correspondent
'Shakti' Scheme, Golden Book of World Records...
20-08-25 12:11 pm
ರಾಜ್ಯದಲ್ಲಿ ಸಹಕಾರ ವ್ಯವಸ್ಥೆಗೆ ಬಿಗ್ ಸರ್ಜರಿ ; ಸಹಕ...
19-08-25 11:13 am
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
20-08-25 11:01 am
HK News Desk
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
20-08-25 04:28 pm
Mangalore Correspondent
ಕಡಬ ಪಟ್ಟಣ ಪಂಚಾಯತ್ ಚುನಾವಣೆ ; 13ರಲ್ಲಿ 8 ಗೆದ್ದ ಕ...
20-08-25 03:01 pm
SIT, Exhumation, Dharmasthala: ಶವ ಶೋಧ ಬಳಿಕ ಎಸ...
20-08-25 02:38 pm
Wild Elephant, Belthangady, Eshwar Khandre: ಬ...
20-08-25 01:36 pm
ಧರ್ಮಸ್ಥಳ ಪ್ರಕರಣ ನೆಪದಲ್ಲಿ ಬಿಎಲ್ ಸಂತೋಷ್ ಅವಹೇಳನ...
19-08-25 11:07 pm
19-08-25 10:52 pm
Mangalore Correspondent
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm
Ullal Police Raid, Sports Winners, Mangalore:...
19-08-25 12:41 pm