ಬ್ರೇಕಿಂಗ್ ನ್ಯೂಸ್
07-03-21 04:38 pm Source: MYKHEL ಕ್ರೀಡೆ
ಗೋವಾ, ಮಾರ್ಚ್ 7: ಹೀರೋ ಇಂಡಿಯನ್ ಸೂಪರ್ ಲೀಗ್ ಎರಡನೇ ಸೆಮಿಫೈನಲ್ ನ ಮೊದಲ ಲೆಗ್ ನ ಪಂದ್ಯ 1-1ರಲ್ಲಿ ಸಮಬಲಗೊಂಡಿದೆ. ಪ್ರಥಮಾರ್ಧದ 34ನೇ ನಿಮಿಷದಲ್ಲಿ ಡೇವಿಡ್ ವಿಲಿಯಮ್ಸ್ ಎಟಿಕೆಎಂಬಿಗೆ ಮುನ್ನಡೆ ನೀಡಿದ್ದರು. ಆದರೆ ದ್ವಿತಿಯಾರ್ಧದ 94+4ನೇ ನಿಮಿಷದಲ್ಲಿ ಇಡ್ರಿಸಾ ಸಿಲ್ಲಾ ಗಳಿಸಿದ ಗೋಲು ಪಂದ್ಯವನ್ನು ಸಮಬಲಗೊಳಿಸಿತು. ಮುನ್ನಡೆದ ಎಟಿಕೆಎಂಬಿ: ಡೇವಿಡ್ ವಿಲಿಯಮ್ಸ್ (34ನೇ ನಿಮಿಷ) ಗಳಿಸಿದ ಗೋಲಿನ ನೆರವಿನಿಂದ ಎಟಿಕೆ ಮೋಹನ್ ಬಾಗನ್ ತಂಡ ಪ್ರಥಮಾರ್ಧದಲ್ಲಿ 1-0 ಅಂತರದಲ್ಲಿ ಮೇಲುಗೈ ಸಾಧಿಸಿತು. ಹೆಚ್ಚಿನ ಪಂದ್ಯಗಳಲ್ಲಿ ಪ್ರಥಮಾರ್ಧದಲ್ಲೇ ಗೋಲು ಗಳಿಸಿ ಮೇಲುಗೈ ಸಾಧಿಸಿದ್ದ ನಾರ್ಥ್ ಈಸ್ಟ್ ಈ ಬಾರಿ ಉತ್ತಮ ಡಿಫೆನ್ಸ್ ವಿಭಾಗವನ್ನು ಹೊಂದಿರುವ ಎಟಿಕೆ ವಿರುದ್ಧ ಗೋಲು ಗಳಿಸಿ ಸಮಬಲ ಸಾಧಿಸಲು ವಿಫಲವಾಯಿತು.

ಜಯವೊಂದೇ ಮಂತ್ರ
ಲೀಗ್ ಹಂತದಲ್ಲಿ ಅಚ್ಚರಿಯ ಫಲಿತಾಂಶಗಳನ್ನು ಕಂಡು ಪ್ಲೇ ಆಫ್ ತಲುಪಿರುವ ನಾರ್ಥ್ ಈಸ್ಟ್ ಯುನೈಟೆಡ್ ಎಫ್ ಸಿ.ಗೆ ಈಗ ಮೋಹನ್ ಬಾಗನ್ ವಿರುದ್ಧ ಕಠಿಣ ಸವಾಲು. ಲೀಗ್ ನಲ್ಲಿ ಒಂದು ಹಂತದಲ್ಲಿ ವೈಫಲ್ಯದ ಹಾದಿ ಹಿಡಿದಿದ್ದ ತಂಡ ಇದ್ದಕ್ಕಿದ್ದಂತೆ ಪ್ರಮುಖ ಪಂದ್ಯಗಳನ್ನು ಗೆದ್ದು, ಎರಡನೇ ಬಾರಿಗೆ ಪ್ಲೇ ಆಫ್ ತಲುಪಿತು. ಖಾಲೀದ್ ಜಮೀಲ್ ಕೋಚ್ ಜವಾಬ್ದಾರಿಯನ್ನು ವಹಿಸಿಕೊಂಡ ನಂತರ ನಾರ್ಥ್ ಈಸ್ಟ್ ನ ಅದೃಷ್ಟ ಬದಲಾಯಿತೆಂದರೆ ತಪ್ಪಾಗಲಾರದು. 9 ಪಂದ್ಯಗಳಲ್ಲಿ ಸೋಲನ್ನೇ ಕಂಡಿರದ ತಂಡಕ್ಕೆ ಅದೇ ಆತ್ಮವಿಶ್ವಾಸ.
ಭರ್ಜರಿ ಪ್ರದರ್ಶನ
ಅದರಲ್ಲಿ ಆರು ಜಯ ಮತ್ತು ಮೂರು ಡ್ರಾ ಸೇರಿದೆ. 13 ಪಂದ್ಯಗಳಲ್ಲಿ ಆರಂಭದಲ್ಲಿ ಮುನ್ನಡೆದ ತಂಡ ಎಂಟು ಪಂದ್ಯಗಳಲ್ಲಿ ಜಯ ಗಳಿಸಿದೆ. ಉಳಿದ ಪಂದ್ಯಗಳಲ್ಲಿ ಅಂಕ ಹಂಚಿಕೊಂಡಿದೆ. ಅದೇ ರೀತಿ ಬಾಗನ್ ತಂಡ 14 ಬಾರಿ ಆರಂಭಿಕ ಮುನ್ನಡೆ ಗಳಿಸಿ 12 ಪಂದ್ಯಗಳಲ್ಲಿ ಜಯ ಗಳಿಸಿ 2 ಪಂದ್ಯಗಳಲ್ಲಿ ಡ್ರಾ ಸಾಧಿಸಿತ್ತು.

ಐಎಸ್ಎಲ್ ಗೆಲ್ಲುವ ಫೇವರೀಟ್
ನಾರ್ಥ್ ಈಸ್ಟ್ ತಂಡ ಇತಿಹಾಸವನ್ನು ಗಮನಿಸಬೇಕು. ಬಗಾನ್ ಕೋಚ್ ಆಂಟೋನಿಯೊ ಹಬ್ಬಾಸ್ ಐಎಸ್ ಎಲ್ ಸೆಮಿಫೈನಲ್ ನ ಮೊದಲ ಲೆಗ್ ನಲ್ಲಿ ಮೂರು ಬಾಗಿ ಜಯ ಕಂಡಿರಲಿಲ್ಲ. 2 ಸೋಲು ಹಾಗೂ 1 ಡ್ರಾ. ಕೊನೆಯ ಮೂರು ಪಂದ್ಯಗಳ ಫಲಿತಾಂಶ ಎಟಿಕೆ ಮೋಹನ್ ಬಾಗನ್ ತಂಡ ಲೀಗ್ ವಿನ್ನರ್ಸ್ ಶೀಲ್ಡ್ ಕಳೆದುಕೊಳ್ಳುವಂತೆ ಮಾಡಿತು. ಆದರೆ ಕ್ಲಬ್ ಈಗಲೂ ಐಎಸ್ ಎಲ್ ಪ್ರಶಸ್ತಿ ಗೆಲ್ಲುವ ಫೇವರಿಟ್ ಎನಿಸಿದೆ.
This News Article Is A Copy Of MYKHEL
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm