ಬ್ರೇಕಿಂಗ್ ನ್ಯೂಸ್
09-03-21 01:34 pm Source: MYKHEL ಕ್ರೀಡೆ
ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟಿ20 ಸರಣಿಯಿಂದ ಇಂಗ್ಲೆಂಡ್ ವೇಗಿ ಜೋಫ್ರಾ ಆರ್ಚರ್ ಹೊರಗುಳಿಯಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿತ್ತು. ಆರ್ಚರ್ಗೆ ಟೆಸ್ಟ್ ಸರಣಿಯ ಸಂದರ್ಭದಲ್ಲಿ ಕಾಡಿದ ಗಾಯದ ಸಮಸ್ಯೆಯ ಕಾರಣದಿಂದಾಗಿ ಚುಟುಕು ಸರಣಿಯಿಂದ ಹೊರಗುಳಿಯುವ ಆತಂಕವನ್ನು ಎದುರಿಸಿದ್ದರು.
ಆದರೆ ಆರ್ಚರ್ ಮೊದಲ ಟಿ20 ಪಂದ್ಯದಲ್ಲಿ ಆಡಲು ಸಮರ್ಥರಾಗಿದ್ದಾರೆ ಎನ್ನಲಾಗಿದೆ. ಜೋಫ್ರಾ ಆರ್ಚರ್ ಮೊದಲ ಟೆಸ್ಟ್ ಪಂದ್ಯದಲ್ಲಿ ಆಡಲು ಲಭ್ಯರಾಗುವ ಬಗ್ಗೆ ಇನ್ನಷ್ಟೇ ಅಧಿಕೃತ ಘೋಷಣೆಯಾಗಬೇಕಿದೆ. ಆದರೆ ಕಳೆದ ಭಾನುವಾರ ಹಾಗೂ ಸೋಮವಾರ ಜೋಫ್ರಾ ಆರ್ಚರ್ ಅವರು ನೆಟ್ಸ್ನಲ್ಲಿ ಅಭ್ಯಾಸ ನಡೆಸುವಾಗ ಅವರ ಚೇತರಿಕೆಯ ಮೇಲೆ ವೈದ್ಯಕೀಯ ತಂಡ ನಿಗಾವಹಿಸಿತ್ತು.
25ರ ಹರೆಯದ ಆಲ್ರೌಂಡರ್ ಭಾರತದ ವಿರುದ್ಧಧ ಟೆಸ್ಟ್ ಸರಣಿಯ ಅಂತಿಮ ಪಂದ್ಯವನ್ನು ಗಾಯದ ಕಾರಣದಿಂದಾಗಿ ತಪ್ಪಿಸಿಕೊಂಡಿದ್ದರು. ಮೊಣಕೈ ನೋವಿಗೆ ಒಳಗಾಗಿದ್ದ ಆರ್ಚರ್ ಒಳಗಾಗಿದ್ದರು. ನಾಲ್ಕು ಪಂದ್ಯಗಳ ಈ ಟೆಸ್ಟ್ ಸರಣಿಯನ್ನು ಭಾರತ 3-1 ಅಂತರದಿಂದ ಗೆದ್ದು ಬೀಗಿದೆ.
ಪ್ರವಾಸಿ ಇಂಗ್ಲೆಂಡ್ ತಂಡ ಈಗ ಸಂಪೂರ್ಣ ಪ್ರಮಾಣದ ತಂಡದೊಂದಿಗೆ ಸೀಮಿತ ಓವರ್ಗಳ ಸರಣಿಗೆ ಸಿದ್ದವಾಗುತ್ತಿದೆ. ಈ ಸರಣಿಗಾಗಿ ಇಂಗ್ಲೆಂಡ್ ತಂಡದ ಚಿಕ್ಕಾಣಿಯನ್ನು ಇಯಾನ್ ಮಾರ್ಗನ್ ವಹಿಸಿಕೊಳ್ಳಲಿದ್ದಾರೆ. ಐದು ಟಿ20 ಹಾಗೂ 3 ಏಕದಿನ ಪಂದ್ಯಗಳ ಸರಣಿ ಭಾರತದ ವಿರುದ್ಧ ಇಂಗ್ಲೆಂಡ್ ಆಡಲಿದೆ.
ಜೋಫ್ರಾ ಆರ್ಚರ್ ಗಾಯ ರಾಜಸ್ಥಾನ್ ರಾಯಲ್ಸ್ ತಂಡಕ್ಕೂ ಆತಂಕವನ್ನುಂಟು ಮಾಡಿದೆ. ಆರ್ಆರ್ ತಂಡದ ಪ್ರಮುಖ ವೇಗಿಯಾಗಿರುವ ಆರ್ಚರ್ ಈ ಬಾರಿಯ ಐಪಿಎಲ್ನಲ್ಲಿಯೂ ಆಡುವ ಬಗ್ಗೆ ಅನುಮಾನಗಳು ಳುವಂತೆ ಮಾಡಿತ್ತು. ಆದರೆ ಭಾರತದ ವಿರುದ್ಧದ ಟಿ20 ಸರಣಿಗೆ ಲಭ್ಯರಾಗಲಿದ್ದಾರೆ ಎಂಬ ಸುದ್ಧಿ ಒಂದಷ್ಟು ನಿರಾಳತೆ ಮೂಡುವಂತೆ ಮಾಡಿದೆ.
This News Article Is A Copy Of MYKHEL
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am