ಬ್ರೇಕಿಂಗ್ ನ್ಯೂಸ್
10-03-21 03:58 pm Source: MYKHEL ಕ್ರೀಡೆ
ಭಾರತ ಹಾಗೂ ಇಂಗ್ಲೆಂಡ್ ತಂಡಗಳ ನಡುವೆ ನಡೆಯುವ ಐದು ಪಂದ್ಯಗಳ ಟಿ20 ಸರಣಿಯ ಹಿನ್ನೆಲೆಯಲ್ಲಿ ಇಂಗ್ಲೆಂಡ್ ತಂಡದ ಬ್ಯಾಟ್ಸ್ಮನ್ ಜೋಸ್ ಬಟ್ಲರ್ ಪ್ರತಿಕ್ರಿಯೆ ನೀಡಿದ್ದಾರೆ. ಟೀಮ್ ಇಂಡಿಯಾ ಎಲ್ಲಾ ಮಾದರಿಯ ಕ್ರಿಕೆಟ್ನಲ್ಲಿ ಅತ್ಯಂತ ಬಲಿಷ್ಠ ತಂಡವಾಗಿದ್ದು ಅದರಲ್ಲೂ ತವರಿನಲ್ಲಿ ಸೋಲಿಸುವುದು ಅತ್ಯಂತ ಕಠಿಣ ಎಂಬ ಮಾತನ್ನು ಅವರು ಹೇಳಿದ್ದಾರೆ.
ಇದೇ ಸಂದರ್ಭದಲ್ಲಿ ಜೊಸ್ ಬಟ್ಲರ್ ಮುಂಬರುವ ಟಿ20 ವಿಶ್ವಕಪ್ನಲ್ಲಿ ಕಪ್ ಗೆಲ್ಲುವ ಫೇವರೀಟ್ ತಂಡ ಭಾರತ ಎಂಬ ಮಾತನ್ನು ಬಟ್ಲರ್ ಹೇಳಿದ್ದಾರೆ. ಮುಂಬರುವ ಅಕ್ಟೋಬರ್- ನವೆಂಬರ್ ತಿಂಗಳನಲ್ಲಿ ಭಾರತ ಈ ಮಹತ್ವದ ಟೂರ್ನಿಯನ್ನು ಆಯೋಜನೆ ಮಾಡಲಿದೆ. ವಿರಾಟ್ ಕೊಹ್ಲಿ ಪಡೆ ಸೇರಿಕೊಳ್ಳಲಿದ್ದಾರೆ ಯುವ ಸ್ಪಿನ್ನರ್ ರಾಹುಲ್ ಚಾಹರ್ 2013ರರಲ್ಲಿ ಭಾರತ ಚಾಂಪಿಯನ್ಸ್ ಟ್ರೋಫಿ ಗೆದ್ದ ಬಳಿಕ ಯಾವುದೇ ಐಸಿಸಿ ಟೂರ್ನಿಯನ್ನು ಗೆದ್ದಿಲ್ಲ.
ಹೀಗಾಗಿ ಈ ಮಹತ್ವದ ಟೂರ್ನಿಯ ಮೇಲೆ ಭಾರತ ಕಣ್ಣಿಟ್ಟಿದೆ. ಮತ್ತೊಂದೆಡೆ ಟಿ20 ವಿಶ್ವಕಪ್ ಜಯಿಸಿ ಭಾರತ ದಶಕದ ಮೇಲಾಗಿದೆ. ಹೀಗಾಗಿ ಈ ಟೂರ್ನಿ ಗೆಲ್ಲಲು ಭಾರತ ತನ್ನೆಲ್ಲಾ ಪ್ರಯತ್ನವನ್ನು ನಡೆಸಲಿದೆ. 2007ರಲ್ಲಿ ನಡೆದ ಟಿ20 ಉದ್ಘಾಟನಾ ಟೂರ್ನಿಯಲ್ಲಿ ಭಾರತ ಪ್ರಶಸ್ತಿಯನ್ನು ಗೆದ್ದಿತ್ತು. "ವಿಶ್ವಕಪ್ನಂತಾ ಟೂರ್ನಿಯಲ್ಲಿ ಭಾರತ ಬಲಿಷ್ಠವಾಗಿರುತ್ತದೆ. ಅದರಲ್ಲೂ ಈ ಬಾರಿ ಭಾರತದಲ್ಲೇ ಈ ಟೂರ್ನಿ ನಡೆಯುತ್ತಿರುವುದು ಭಾರತ ಈ ಟೂರ್ನಿಯನ್ನು ಗೆಲ್ಲುವ ಫೇವರೀಟ್ ತಂಡ" ಎಂದು ಜೋಸ್ ಬಟ್ಲರ್ ಹೇಳಿಕೆಯನ್ನು ನೀಡಿದ್ದಾರೆ.
"ಸಾಕಷ್ಟು ಅತ್ಯುತ್ತಮ ತಂಡಗಳು ಇವೆ. ಕಳೆದ ಕೆಲ ವಿಶ್ವಕಪ್ಗಳನ್ನು ಗಮನಸಿದರೆ ಆಯೋಜನಾ ತಂಡಗಳು ಅತ್ಯುತ್ತಮ ಪ್ರದರ್ಶನಗಳನ್ನು ನೀಡಿಕೊಂಡು ಬಂದಿದ್ದಾರೆ. ಭಾರತ ಖಂಡಿತವಾಗಿಯೂ ಪ್ರತಿಯೊಂದು ಮಾದರಿಯಲ್ಲೂ ಬಲಿಷ್ಠವಾದ ತಂಡವಾಗಿದೆ. ಟಿ20ಯಲ್ಲೂ ಅದು ಭಿನ್ನವಾಗಿಲ್ಲ. ಭಾರತದಲ್ಲಿ ಆಡುವಾಗ ಭಾರತ ಯಾವಾಗಲೂ ಫೇವರೀಟ್ ತಂಡವಾಗಿರುತ್ತದೆ" ಎಂದು ಜೋಸ್ ಬಟ್ಲರ್ ಹೇಳಿಕೆಯನ್ನು ನೀಡಿದ್ದಾರೆ.
This News Article Is A Copy Of MYKHEL
20-08-25 12:33 pm
Bangalore Correspondent
'Shakti' Scheme, Golden Book of World Records...
20-08-25 12:11 pm
ರಾಜ್ಯದಲ್ಲಿ ಸಹಕಾರ ವ್ಯವಸ್ಥೆಗೆ ಬಿಗ್ ಸರ್ಜರಿ ; ಸಹಕ...
19-08-25 11:13 am
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
20-08-25 11:01 am
HK News Desk
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
20-08-25 04:28 pm
Mangalore Correspondent
ಕಡಬ ಪಟ್ಟಣ ಪಂಚಾಯತ್ ಚುನಾವಣೆ ; 13ರಲ್ಲಿ 8 ಗೆದ್ದ ಕ...
20-08-25 03:01 pm
SIT, Exhumation, Dharmasthala: ಶವ ಶೋಧ ಬಳಿಕ ಎಸ...
20-08-25 02:38 pm
Wild Elephant, Belthangady, Eshwar Khandre: ಬ...
20-08-25 01:36 pm
ಧರ್ಮಸ್ಥಳ ಪ್ರಕರಣ ನೆಪದಲ್ಲಿ ಬಿಎಲ್ ಸಂತೋಷ್ ಅವಹೇಳನ...
19-08-25 11:07 pm
19-08-25 10:52 pm
Mangalore Correspondent
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm
Ullal Police Raid, Sports Winners, Mangalore:...
19-08-25 12:41 pm