ಬ್ರೇಕಿಂಗ್ ನ್ಯೂಸ್
12-03-21 11:00 am Source: MYKHEL ಕ್ರೀಡೆ
ಅಬುಧಾಬಿ: ಅಫ್ಘಾನಿಸ್ತಾನದ ಬ್ಯಾಟ್ಸ್ಮನ್ ಹಶ್ಮತುಲ್ಲ ಶಾಹಿದಿ ಟೆಸ್ಟ್ ಕ್ರಿಕೆಟ್ನಲ್ಲಿ ಅಪರೂಪದ ದಾಖಲೆ ನಿರ್ಮಿಸಿದ್ದಾರೆ. ಅಬುಧಾಬಿಯ ಶೈಕ್ ಝಾಯೆದ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಜಿಂಬಾಬ್ವೆ ಮತ್ತು ಅಫ್ಘಾನಿಸ್ತಾನ ನಡುವಿನ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಹಶ್ಮತುಲ್ಲ ಅಫ್ಘಾನ್ ಪರ ಇತಿಹಾಸ ಬರೆದಿದ್ದಾರೆ. ಶಾಹಿದಿ ಮತ್ತು ನಾಯಕ ಅಸ್ಘರ್ ಅಫ್ಘಾನ್ ರನ್ ಕೊಡುಗೆಯೊಂದಿಗೆ ಅಫ್ಘಾನ್ ಮೊದಲ ಇನ್ನಿಂಗ್ಸ್ನಲ್ಲಿ ಭರ್ಜರಿ ರನ್ ಕಲೆ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಅಫ್ಘಾನಿಸ್ತಾನದಿಂದ 4ನೇ ಬ್ಯಾಟಿಂಗ್ ಕ್ರಮಾಂಕದಲ್ಲಿ ಬಂದಿದ್ದ ಹಶ್ಮತುಲ್ಲ ಶಾಹಿದಿ, 443 ಎಸೆತಗಳಲ್ಲಿ 200 ರನ್ ಬಾರಿಸಿದ್ದಾರೆ. ಶಾಹಿದಿ ದ್ವಿಶತಕ ಬಾರಿಸುತ್ತಲೇ ಅವರ ಹಸರಿನಲ್ಲಿ ಮೈಲಿಗಲ್ಲೊಂದು ಸ್ಥಾಪನೆಯಾಗಿದೆ.

ಹೊಸ ದಾಖಲೆ ನಿರ್ಮಾಣ
ಜಿಂಬಾಬ್ವೆ ವಿರುದ್ಧದ ಮೊದಲನೇ ಇನ್ನಿಂಗ್ಸ್ನಲ್ಲಿ ಅಶ್ಮತುಲ್ಲ ಶಾಹಿದಿ ಬಾರಿಸಿದ 200 ರನ್ನಿಂದ ಶಾಹಿದಿ ಟೆಸ್ಟ್ ಕ್ರಿಕೆಟ್ನಲ್ಲಿ ಅಫ್ಘಾನಿಸ್ತಾನ ಪರ ದ್ವಿಶತಕ ಬಾರಿಸಿದ ಮೊದಲನೇ ಆಟಗಾರ ಎಂಬ ದಾಖಲೆ ನಿರ್ಮಿಸಿದ್ದಾರೆ. ಟೆಸ್ಟ್ ಕ್ರಿಕೆಟ್ನಲ್ಲಿ ಕಡಿಮೆ ಅನುಭವಿ ತಂಡವೆನಿಸಿರುವ ಅಫ್ಘಾನ್ಗೆ ಶಾಹಿದಿ ಸಾಧನೆ ಇನ್ನಷ್ಟು ಬಲ ತುಂಬಿದೆ.
ಭಾರತ ವಿರುದ್ಧ ಪಾದಾರ್ಪಣೆ
26ರ ಹರೆಯದ ಶಾಹಿದಿ, 5 ಟೆಸ್ಟ್ ಪಂದ್ಯಗಳಲ್ಲಿ 347 ರನ್ ಬಾರಿಸಿದ್ದಾರೆ. ಇದರಲ್ಲಿ 1 ಶತಕ, 1 ದ್ವಿಶತಕ ಸೇರಿದೆ. ಇನ್ನು 42 ಏಕದಿನ ಪಂದ್ಯಗಳಲ್ಲಿ 1155 ರನ್ ಬಾರಿಸಿದ್ದಾರೆ. ಕೀನ್ಯಾ ವಿರುದ್ಧ 2013ರಲ್ಲಿ ಏಕದಿನ ಪಾದಾರ್ಪಣೆ ಮಾಡಿದ್ದ ಶಾಹಿದಿ 2018ರಲ್ಲಿ ಭಾರತ ವಿರುದ್ಧ ಟೆಸ್ಟ್ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿದ್ದರು. ಈ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದಿತ್ತು.

ಅಫ್ಘಾನಿಸ್ತಾನ ಭರ್ಜರಿ ರನ್
ಬ್ಯಾಟಿಂಗ್ ಆಯ್ದುಕೊಂಡಿದ್ದ ಅಫ್ಘಾನಿಸ್ತಾನ ಮೊದಲ ಇನ್ನಿಂಗ್ಸ್ನಲ್ಲಿ ಭರ್ಜರಿ ರನ್ ಕಲೆ ಹಾಕಿದೆ. ಇಬ್ರಾಹಿಂ ಝದ್ರನ್ 72, ಝಾವೆದ್ ಅಹ್ಮದಿ 4, ರಹಮತ್ ಶಾ 23, ಹಶ್ಮತುಲ್ಲ ಶಾಹಿದಿ ಅಜೇಯ 200, ನಾಯಕ ಅಸ್ಘರ್ ಅಫ್ಘಾನ್ 164, ನಾಸಿರ್ ಜಮಾಲ್ ಅಜೇಯ 55 ರನ್ ಬಾರಿಸಿದ್ದರು. ಅಫ್ಘಾನ್ 160.4 ಓವರ್ಗೆ 4 ವಿಕೆಟ್ ಕಳೆದು 545 ರನ್ ಕಲೆ ಹಾಕಿ ಡಿಕ್ಲೇರ್ ಘೋಷಿಸಿತ್ತು.
This News Article Is A Cop Of MYKHEL
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:59 am
HK News Staffer
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
15-07-26 12:40 pm
HK News Staffer
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm