ಬ್ರೇಕಿಂಗ್ ನ್ಯೂಸ್
15-03-21 11:01 am source: MYKHEL ಕ್ರೀಡೆ
ವೆಸ್ಟ್ ಇಂಡೀಸ್ ಕ್ರಿಕೆಟ್ ತಂಡದ ಮಾಜಿ ಆಟಗಾರ ದಿಗ್ಗಜ ಕ್ರಿಕೆಟಿಗ ಸರ್ ವಿವಿಯನ್ ರಿಚರ್ಡ್ಸ್ ಭಾರತದ ಪ್ರಧಾನಿ ನರೇಂದ್ರ ಮೋದಿಯವರಿಗೆ ಭಾನುವಾರ ಧನ್ಯವಾದ ಸಲ್ಲಿಸಿದ್ದಾರೆ. ಕೆರಿಬಿಯನ್ ಸಮೂಹಕ್ಕೆ ಕೊರೊನಾ ವೈರಸ್ ಲಸಿಕೆಯನ್ನು ಭಾರತ ಸರ್ಕಾರ ನೀಡಿತ್ತು. ಇದಕ್ಕಾಗಿ ರಿಚರ್ಡ್ಸ್ ಧನ್ಯವಾದ ತಿಳಿಸಿದ್ದಾರೆ.
ಮಾರ್ಚ್ ತಿಂಗಳಲ್ಲಿ ಆಂಟಿಗುವಾ ಮತ್ತು ಬಾರ್ಬುಡಾ 1,75,000 ಕೋವಿಡ್ ಲಸಿಕೆಯನ್ನು ಭಾರತದಿಂದ ಸ್ವೀಕರಿಸಿದೆ. ಇದರಲ್ಲಿ 40,000 ಲಸಿಕೆಗಳು ಭಾರತದ "ವ್ಯಾಕ್ಸಿನ್ ಮೈತ್ರಿ" ಮುಂದಾಳತ್ವದಲ್ಲಿ ಉಚಿತವಾಗಿ ನೀಡಲಾಗಿದೆ. ವಿಡಿಯೋ ಸಂದೇಶದಲ್ಲಿ ಮಾತನಾಡಿದ ವಿವಿಯನ್ ರಿಚರ್ಡ್ಸ್ ಭಾರತದ ಈ ಸಹಾಯ ದಯಾಳು ಮನೋಭಾವ ಪ್ರಶಂಸನಾರ್ಹ ಎಂದಿದ್ದಾರೆ. ಇದರ ಜೊತೆಗೆ ಕೆರಿಬಿಯನ್ ದ್ವೀಪ ಸಮೂಹ ಭಾರತದೊಂದಿಗಿನ ಈ ಸಂಬಂಧವನ್ನು ಮತ್ತಷ್ಟು ಮುಂದುವರಿಸಲು ಬಯಸುತ್ತದೆ ಎಂದಿದ್ದಾರೆ. ಭಾರತ vs ಇಂಗ್ಲೆಂಡ್: ರನ್ ಮಷಿನ್ ವಿರಾಟ್ ಕೊಹ್ಲಿ ದಾಖಲೆ ಈ ವಿಡೊಯೋ ಸಂದೇಶವನ್ನು ಗಯಾನದಲ್ಲಿರುವ ಭಾರತದ ಹೈಕಮಿಶನ್ ಟ್ವಿಟ್ಟರ್ ಖಾತೆಯಿಂದ ಹಂಚಿಕೊಳ್ಳಲಾಗಿದೆ.
"ಲಸಿಕೆಯ ರೂಪದಲ್ಲಿ ನಮ್ಮ ದೇಶಕ್ಕೆ ನೀಡಿದ ಅದ್ಭುತವಾದ ಕೊಡುಗೆಗಾಗಿ ಭಾರತಕ್ಕೆ ಧನ್ಯವಾದಗಳು. ಆಂಟಿಗುವಾ ಮತ್ತು ಬಾರ್ಬುಡಾನ್ ಜನತೆಯ ಪರವಾಗಿ ತುಂಬಾ ಧನಗುವಾದಗಳು" ಎಂದು ಸರ್ ವಿವಿಯನ್ ರಿಚರ್ಡ್ಸ್ ಹೇಳಿದ್ದಾರೆ. "ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಧನ್ಯವಾದಗಳು. ನಮ್ಮ ಭಾಗದ ಹೈಕಮಿಶನರ್ಗೆ ಧನ್ಯವಾದಗಳು. ಈ ವಿಶಾಲ ಮನೋಭಾವ ತೋರಿದ ಕಾರಣಕ್ಕೆ ಭಾರತದ ಎಲ್ಲಾ ಜನತೆಗೂ ನಾವು ಧನ್ಯವಾದವನ್ನು ಸಲ್ಲಿಸುತ್ತೇವೆ" ಎಂದು ಈ ವಿಡಿಯೋದಲ್ಲಿ ಸರ್ ವಿವಿಯನ್ ರಿಚರ್ಡ್ಸ್ ಪ್ರತಿಕ್ರಿಯಿಸಿದ್ದಾರೆ.
ಕಿಶನ್ ಸ್ಫೋಟಕ ಅರ್ಧಶತಕ, ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ ಸಾಂಕ್ರಾಮಿಕ ರೋಗವನ್ನು ಎದುರಿಸಲು ವಿಶ್ವದಾದ್ಯಂತ ಇತರ ದೇಶಗಳಿಗೆ ಸಹಾಯ ಮಾಡುವ ಉದ್ದೇಶದಿಂದ ಭಾರತ ಲಸಿಕೆಯನ್ನು ನೀಡುತ್ತಿದೆ. ಇದರ ಬಾಗವಾಗಿ ಕೆರಿಬಿಯನ್ ರಾಷ್ಟ್ರಗಳು ಭಾರತದಿಂದ ಕರೋನಾ ವೈರಸ್ ಲಸಿಕೆಗಳನ್ನು ಪಡೆದುಕೊಂಡಿವೆ.
This News Article Is A Copy Of MYKHEL
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 12:33 pm
HK News Staffer
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm