ಬ್ರೇಕಿಂಗ್ ನ್ಯೂಸ್
22-03-21 02:40 pm Source: MYKHEL ಕ್ರೀಡೆ
ಭಾರತ ಹಾಗೂ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯ ಬಳಿಕ ಇಂಗ್ಲೆಂಡ್ ವೇಗಿ ಜೋಪ್ರಾ ಆರ್ಚರ್ ಏಕದಿನ ತಂಡದಿಂದ ಹೊರಗುಳಿದಿದ್ದಾರೆ. ಆದರೆ ಭಾರತದ ವಿರುದ್ಧದ ಏಕದಿನ ಸರಣಿಯ ಜೊತೆಗೆ ಜೋಪ್ರಾ ಆರ್ಚರ್ ಐಪಿಎಲ್ನ ಕೆಲ ಪಂದ್ಯಗಳಿಂದಲೂ ಹೊರಗುಳಿಯಲಿದ್ದಾರೆ ಎಂದು ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಬೋರ್ಡ್ ಮಾಹಿತಿ ನೀಡಿದೆ.
ಬಲ ಮೊಣಕೈ ಗಾಯದ ಹಿನ್ನೆಲೆಯಲ್ಲಿ ಜೋಫ್ರಾ ಆರ್ಚರ್ ಏಕದಿನ ತಂಡದಿಂದ ಹೊರಗುಳಿದಿದ್ದು ವೈದ್ಯಕೀಯ ಪರಿಶೀಲನೆಗಾಗಿ ಯುಕೆಗೆ ಮರಳಿದ್ದಾರೆ. ಹೀಗಾಗಿ ಅವರ ವೈದ್ಯಕೀಯ ಪರಿಶೀಲನೆಯ ಹಿನ್ನೆಲೆಯಲ್ಲಿ ಕೆಲ ದಿನಗಳ ಕಾಲ ವೈದ್ಯರ ನಿಗಾದಲ್ಲಿ ಜೋಫ್ರಾ ಆರ್ಚರ್ ಇರಲಿದ್ದಾರೆ. ಐಪಿಎಲ್ನಲ್ಲಿ ಜೋಫ್ರಾ ಆರ್ಚರ್ ರಾಜಸ್ಥಾನ್ ರಾಯಲ್ಸ್ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ.
"ಭಾರತದ ವಿರುದ್ಧದ ಟಿ20 ಅಂತರರಾಷ್ಟ್ರೀಯ ಸರಣಿಯ ಅವಧಿಯಲ್ಲಿ ಆರ್ಚರ್ ಅವರ ಮೊಣಕೈ ಸಮಸ್ಯೆ ಹೆಚ್ಚಾಗಿದೆ. ಅವರ ಕಾರ್ಯಕ್ಷಮತೆಯ ಮಟ್ಟವನ್ನು ಕಾಯ್ದುಕೊಳ್ಳುವುದು ಅವರಿಗೆ ಹೆಚ್ಚು ಸವಾಲಾಗಿ ಪರಿಣಮಿಸಿದೆ" ಎಂದು ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ತಿಳಿಸಿದೆ. ಇಂಗ್ಲೆಂಡ್ ತಂಡದ ನಾಯಕ ಇಯಾನ್ ಮಾರ್ಗನ್ ಕಳೆದ ಶನಿವಾರ ಮಾತನಾಡುತ್ತಾ ಈ ಬಾರಿಯ ಐಪಿಎಲ್ನ ಆರಂಭಿಕ ಪಂದ್ಯಗಳಿಂದ ಜೋಫ್ರಾ ಆರ್ಚರ್ ಹೊರಗುಳಿಯುವ ಸುಳಿವು ನೀಡಿದ್ದರು. ಆರ್ಚರ್ ಮೊಣಕೈ ನೋವು ಹೆಚ್ಚಾಗುತ್ತಿರುವ ವಿಚಾರವನ್ನು ಈ ಸಂದರ್ಭದಲ್ಲಿ ಅವರು ತಿಳಿಸಿದ್ದರು.
ಮಂಗಳವಾರ ಭಾರತ ಹಾಗೂ ಇಂಗ್ಲೆಂಡ್ ನಡುವಿನ ಏಕದಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ನಡೆಯಲಿದೆ. ಪುಣೆಯಲ್ಲಿ ಈ ಪಂದ್ಯ ಆಯೋಜನೆಯಾಗಿದ್ದು ಮೂರು ಪಂದ್ಯಗಳಿಗೂ ಪುಣೆ ಕ್ರೀಡಾಂಗಣ ವೇದಿಕೆಯಾಗಲಿದೆ. ಎರಡು ತಂಡಗಳು ಚುಟುಕು ಸರಣಿಯ ನಂತರ ಏಕದಿನ ಸರಣಿಗೆ ಸಜ್ಜಾಗಿದೆ.
This News Article Is A Copy Of MYKHEL
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
20-04-26 09:40 pm
HK News Staffer
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಗಳು ಖಾಸಗಿ ತೆಕ್ಕ...
19-04-26 10:41 pm
ಪುತ್ತೂರು ಜಾತ್ರೆ ; ಸುಡುಮದ್ದು ಉತ್ಸವದಲ್ಲಿ ಬೆಂಕಿ...
18-04-26 11:31 pm
21-04-26 12:44 pm
HK News Staffer
ಬೀದರ್ ; ಬಿರು ಬಿಸಿಲಿನ ಝಳಕ್ಕೆ 20 ವರ್ಷದ ಯುವಕ ಕ...
20-04-26 09:35 pm
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm
ಮಣಿಪಾಲದ ಸಾಫ್ಟ್ವೇರ್ ಕಂಪನಿಗೆ ಕೋಟ್ಯಂತರ ಮೌಲ್ಯದ ಷ...
20-04-26 11:13 am
ಬೈಕಿನಲ್ಲಿ 46 ಲಕ್ಷ ಮೌಲ್ಯದ ಡ್ರಗ್ಸ್ ಇಟ್ಟುಕೊಂಡು ವ...
19-04-26 10:23 pm