ಬ್ರೇಕಿಂಗ್ ನ್ಯೂಸ್
25-03-21 10:58 am Source: MYKHEL ಕ್ರೀಡೆ
ಬೆಂಗಳೂರು: 2020ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಆಡಿದ್ದ ಕನ್ನಡಿಗ ರಾಬಿನ್ ಉತ್ತಪ್ಪ ಈ ಬಾರಿಯ ಐಪಿಎಲ್ ಹರಾಜಿನಲ್ಲಿ ಮಾಜಿ ಚಾಂಪಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್ ಪಾಲಾಗಿದ್ದಾರೆ. ಈ ಬಾರಿ ಸಿಎಸ್ಕೆಗೆ ಆರಿಸಲ್ಪಟ್ಟಾಗ ತಂಡದ ನಾಯಕ ಎಂಎಸ್ ಧೋನಿ ಹೇಳಿದ ಮಾತನ್ನು ಉತ್ತಪ್ಪ ಸ್ಮರಿಸಿಕೊಂಡಿದ್ದಾರೆ.
2017ರ ಟಿ20 ವಿಶ್ವಕಪ್ ವಿಜೇತ ತಂಡಕ್ಕೆ ಎಂಎಸ್ ಧೋನಿ ನಾಯಕರಾಗಿದ್ದಾಗ ರಾಬಿನ್ ಉತ್ತಪ್ಪ ಕೂಡ ತಂಡದಲ್ಲಿದ್ದರು. ಹೀಗಾಗಿ ಮತ್ತೆ ಸಿಎಸ್ಕೆ ನಾಯಕತ್ವದ ತಂಡ ಸೇರಿಕೊಂಡ ಬಗ್ಗೆ ಉತ್ತಪ್ಪ ಮಾತನಾಡಿದ್ದಾರೆ. ತಂಡ ಸೇರಿದ ಕೂಡಲೇ ಧೋನಿ ಹೇಳಿದ್ದೇನೆಂದು ಇಎಸ್ಪಿಎನ್ ಕ್ರಿಕ್ಇನ್ಫೋ ಜೊತೆ ಉತ್ತಪ್ಪ ಹೇಳಿಕೊಂಡಿದ್ದಾರೆ. 'ನನಗೆ ಕರೆ ಮಾಡಿದ ಧೋನಿ, ನಿನ್ನನ್ನು ಈ ತಂಡಕ್ಕೆ ಕರೆತರುವಲ್ಲಿ ನನ್ನ ನಿರ್ಧಾರವೇನಿಲ್ಲ. ಇದನ್ನು ನಿನಗೆ ನಾನು ತಿಳಿಸಬಯಸುತ್ತೇನೆ. ಅದು ನಮ್ಮ ಲೀಡರ್ಶಿಪ್ ಗುಂಪಿನ ನಿರ್ಧಾರ. ನಿನ್ನ ಸ್ವಂತ ಸಾಮರ್ಥ್ಯ, ಕೌಶಲಗಳೊಂದಿಗೆ ನಿನ್ನನ್ನು ತಂಡಕ್ಕೆ ಸೇರಿಸಿಕೊಳ್ಳಲು ಬಯಸಿದ್ದೆ. ಹೀಗಾಗಿ ನಿರ್ಧಾರ ತೆಗೆದುಕೊಳ್ಳಿ ಎಂದು ಎಲ್ಲರಲ್ಲೂ ಹೇಳಿದ್ದೆ. ಯಾಕೆಂದರೆ ಧೋನಿ ಇದ್ದಿದ್ದಕ್ಕೆ ನಿನ್ನನ್ನು ಸಿಎಸ್ಕೆಗೆ ಆರಿಸಲಾಯ್ತು ಅನ್ನೋ ಮಾತು ನಾಳೆ ಬರಬಾರದು ಅಲ್ವಾ?' ಎಂದು ಧೋನಿ ಹೇಳಿರುವುದಾಗಿ ಉತ್ತಪ್ಪ ತಿಳಿಸಿದ್ದಾರೆ.
ಮಾತು ಮುಂದುವರೆಸಿದ ಉತ್ತಪ್ಪ, 'ಪ್ರಾಮಾಣಿಕತೆ ಇದ್ದವರಲ್ಲಿ ಈ ನಡೆ ಅದ್ಭುತವಾದುದು ಅಲ್ಲವೆ? ನಾನು ಖಂಡಿತವಾಗಿಯೂ ಇದನ್ನು ಮೆಚ್ಚಿಕೊಳ್ಳುತ್ತೇನೆ. ನನ್ನ ಸ್ವಂತ ಕೌಶಲ್ಯದಿಂದ, ನನ್ನ ಸ್ವಂತ ವಿಶ್ವಾಸಾರ್ಹತೆಯಿಂದ ನಾನು ಸಿಎಸ್ಕೆಗೆ ಬಂದಿದ್ದೇನೆ ಅನ್ನೋದು ನನಗೆ ಗೊತ್ತು. ಇದೇ ಕಾರಣಕ್ಕೆ ನಾನು ಧೋನಿಯನ್ನು ಪ್ರೀತಿಸುತ್ತೇನೆ,' ಎಂದಿದ್ದಾರೆ.
This News Article Is A Copy Of MYKHEL
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 12:33 pm
HK News Staffer
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm