ಬ್ರೇಕಿಂಗ್ ನ್ಯೂಸ್
26-03-21 02:38 pm Source: MYKHEL ಕ್ರೀಡೆ
ಇಂಗ್ಲೆಂಡ್ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಯ ಎರಡನೇ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಭಾರತ ತಂಡದಲ್ಲಿ ಕೇವಲ ಒಂದು ಬದಲಾವಣೆಯನ್ನು ಮಾತ್ರವೇ ಭಾರತ ತಂಡ ಮಾಡಿಕೊಂಡಿದೆ. ಕಳೆದ ಪಂದ್ಯದಲ್ಲಿ ಗಾಯಗೊಂಡು ಹೊರಬಿದ್ದಿರುವ ಶ್ರೇಯಸ್ ಐಯ್ಯರ್ ಸ್ಥಾನಕ್ಕೆ ರಿಷಭ್ ಪಂತ್ ಆಡುವ ಬಳಗದಲ್ಲಿ ಅವಕಾಶವನ್ನು ಪಡೆದುಕೊಂಡಿದ್ದಾರೆ.
ಈ ಮೂಲಕ ಸುದೀರ್ಘ 437 ದಿನಗಳ ನಂತರ ಏಕದಿನ ಆಡುವ ಬಳಗದಲ್ಲಿ ಅವಕಾಶವನ್ನು ಗಿಟ್ಟಿಸಿಕೊಂಡಿದ್ದಾರೆ ರಿಷಭ್ ಪಂತ್. ಪಂತ್ ಕೊನೆಯ ಬಾರಿ 2020ರ ಜನವರಿಯಲ್ಲಿ ಟೀಮ್ ಇಂಡಿಯಾ ಪರವಾಗಿ ಏಕದಿನ ತಂಡದಲ್ಲಿ ಆಡುವ ಬಳಗದಲ್ಲಿ ಸ್ಥಾನವನ್ನು ಪಡೆದಿದ್ದರು.
ಬಳಇಕ ರಿಷಭ್ ಪಂತ್ ನ್ಯೂಜಿಲೆಂಡ್ ಪ್ರವಾಸದಲ್ಲಿ ಟೀಮ್ ಇಂಡಿಯಾ ಏಕದಿನ ತಂಡದಲ್ಲಿದ್ದರು. ಆದರೆ ಆಡುವ ಬಳಗದಲ್ಲಿ ಪಂತ್ ಅವಕಾಶ ಪಡೆದಿರಲಿಲ್ಲ. ಕೆಎಲ್ ರಾಹುಲ್ ಅವರು ವಿಕೆಟ್ ಕೀಪಿಂಗ್ ಜವಾಬ್ಧಾರಿಯನ್ನು ವಹಿಸಿಕೊಂಡಿದ್ದರು. ಅದಾದ ನಂತರ ಕಳೆದ ಆಸ್ಟ್ರೇಲಿಯಾ ಪ್ರವಾಸದಲ್ಲಿ ಪಂತ್ ಸೀಮಿತ ಓವರ್ಗಳ ಸರಣಿಗೆ ಆಯ್ಕೆಯಾಗಿರಲಿಲ್ಲ.
ಪಂತ್ ಬದಲಿಗೆ ಸಂಜು ಸ್ಯಾಮ್ಸನ್ಗೆ ಅವಕಾಶವನ್ನು ನೀಡಲಾಗಿತ್ತು. ಆದರೆ ಬಳಿಕ ಟೆಸ್ಟ್ ಸರಣಿಯಲ್ಲಿ ರಿಷಭ್ ಪಂತ್ ನೀಡಿದ ಮ್ಯಾಚ್ ವಿನ್ನಿಂಗ್ ಪ್ರದರ್ಶನದಿಂದಾಗಿ ಮತ್ತೆ ಸೀಮತ ಓವರ್ಗಳ ಸರಣಿಗೆ ತನ್ನನ್ನು ಪರಿಗಣಿಸುವಂತೆ ಮಾಡಿದರು. ಈ ಮೂಲಕ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಜೊತೆಗೆ ಟಿ20 ಹಾಗೂ ಏಕದಿನ ಸ್ಕ್ವಾಡ್ಗೂ ಪಂತ್ ಮರಳಿದರು. ಈಗ ಏಕದಿನ ಆಡುವ ಬಳಗದಲ್ಲಿ ಅವಕಾಶವನ್ನು ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ರಿಷಭ್ ಪಂತ್ ಈವರೆಗೆ ಭಾರತದ ಪರವಾಗಿ 16 ಏಕದಿನ ಪಂದ್ಯಗಳಲ್ಲಿ ಕಣಕ್ಕಿಳಿದಿದ್ದಾರೆ. ಇದರಲ್ಲಿ 374 ರನ್ಗಳಿಸಿದ್ದು 103.6ರ ಸ್ಟ್ರೈಕ್ರೇಟ್ನಲ್ಲಿ ಬ್ಯಾಟ್ ಬೀಸಿದ್ದಾರೆ. 2020ರಲ್ಲಿ ಆಸ್ಟ್ರೇಲಿಯಾ ಭಾರತಕ್ಕೆ ಸೀಮಿತ ಓವರ್ಗಳ ಸರಣಿಗೆ ಬಂದಿದ್ದಾಗ ಪಂತ್ ಕೊನೆಯ ಬಾರಿ ಏಕದಿನ ಪಂದ್ಯವನ್ನು ಆಡಿದ್ದರು.
ಭಾರತ ಪ್ಲೇಯಿಂಗ್ XI ರೋಹಿತ್ ಶರ್ಮಾ, ಶಿಖರ್ ಧವನ್, ವಿರಾಟ್ ಕೊಹ್ಲಿ (ಸಿ), ಕೆ.ಎಲ್.ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಕೃನಾಲ್ ಪಾಂಡ್ಯ, ಶಾರ್ದೂಲ್ ಠಾಕೂರ್, ಭುವನೇಶ್ವರ್ ಕುಮಾರ್, ಕುಲದೀಪ್ ಯಾದವ್, ಪ್ರಸಿದ್ಧ್ ಕೃಷ್ಣ
This News Article Is A Copy Of MYKHEL
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm