ಬ್ರೇಕಿಂಗ್ ನ್ಯೂಸ್
28-03-21 03:32 pm Source: MYKHEL Madhukara Shetty ಕ್ರೀಡೆ
ಭಾರತ ಹಾಗೂ ಇಂಗ್ಲೆಂಡ್ ಏಕದಿನ ಸರಣಿಯ ಅಂತಿಮ ಹಾಗೂ ನಿರ್ಣಾಯಕ ಪಂದ್ಯದಲ್ಲಿ ಕಾದಾಟಕ್ಕೆ ಇಳಿದಿದೆ. ಏಕದಿನ ಸರಣಿಯಲ್ಲಿ ಎರಡು ತಂಡಗಳು ಕೂಡ ತಲಾ ಒಂದು ಪಂದ್ಯ ಗೆದ್ದಿರುವ ಹಿನ್ನೆಲೆಯಲ್ಲಿ ಇಂದಿನ ಪಂದ್ಯ ಬಹಳ ಮುಖ್ಯವಾಗಿದೆ. ಈ ನಿರ್ಣಾಯಕ ಪಂದ್ಯದಲ್ಲಿ ಭಾರತ ತಂಡದ ನಾಯಕನಾಗಿ ವಿರಾಟ್ ಕೊಹ್ಲಿ ವಿಶೇಷ ಮೈಲಿಗಲ್ಲಿ ಸ್ಥಾಪಿಸಿದ್ದಾರೆ.
ಭಾರತ ತಂಡವನ್ನು ವಿರಾಟ್ ಕೊಹ್ಲಿ ಇಂದು 200ನೇ ಅಂತಾರಾಷ್ಟ್ರೀಯ ಪಂದ್ಯದಲ್ಲಿ ನಾಯಕನಾಗಿ ಮುನ್ನಡೆಸುತ್ತಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಕೇವಲ ಮೂರನೇ ಭಾರತೀಯ ನಾಯಕ ಎನಿಸಿದ್ದಾರೆ. ಎಂಎಸ್ ಧೋನಿ ಹಾಗೂ ಮೊಹಮ್ಮದ್ ಅಜರುದ್ದೀನ್ ಈ ಪಟ್ಟಿಯಲ್ಲಿ ಮೊದಲ ಎರಡು ಸ್ಥಾನಗಳಲ್ಲಿ ಇದ್ದಾರೆ.
ಎಂಎಸ್ ಧೋನಿ ನಾಯಕನಾಗಿ ಟೀಮ್ ಇಂಡಿಯಾವನ್ನು 332 ಪಂದ್ಯಗಳನ್ನು ಮುನ್ನಡೆಸಿದ್ದು ಮೊಹಮ್ಮದ್ ಅಜರುದ್ದೀನ್ 221 ಪಂದ್ಯಗಳಲ್ಲಿ ಭಾರತವನ್ನು ಮುನ್ನಡೆಸಿದ್ದಾರೆ. ಮೂರನೇ ಸ್ಥಾನದಲ್ಲಿ ವಿರಾಟ್ ಕೊಹ್ಲಿ ಇದ್ದು ನಾಲ್ಕನೇ ಸ್ಥಾನದಲ್ಲಿ ಮಾಜಿ ನಾಯಕ ಸೌರವ್ ಗಂಗೂಲಿ ಇದ್ದಾರೆ. ಗಂಗೂಲಿ ಭಾರತ ತಂಡವನ್ನು 195 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಮುನ್ನಡೆಸಿದ್ದಾರೆ. ಇನ್ನು ಗೆಲುವಿನ ಲೆಕ್ಕಾಚಾರಗಳನ್ನು ನೋಡುವುದಾದರೆ ಭಾರತ ನಾಯಕ ಕೊಹ್ಲಿಯ ನಾಯಕತ್ವದಲ್ಲಿ 127 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದರೆ ಎಂಎಸ್ ಧೋನಿ ನಾಯಕತ್ವದಲ್ಲಿ 178 ಗೆಲುವುಗಳನ್ನು ಕಂಡಿದೆ. ಅಜರುದ್ದೀನ್ ಮುನ್ನಡೆಸಿದ 221 ಪಂದ್ಯಗಳಲ್ಲಿ ಭಾರತ 104 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ.
ಭಾರತ ಹಾಗೂ ಇಂಗ್ಲೆಂಡ್ ನಡುವಿನ ಅಂತಿಮ ಏಕದಿನ ಪಂದ್ಯದಲ್ಲಿಯೂ ಭಾರತದ ನಾಯಕ ವಿರಾಟ್ ಕೊಹ್ಲಿ ಟಾಸ್ ಸೋತಿದ್ದಾರೆ. ಈ ಮೂಲಕ ಇಂಗ್ಲೆಂಡ್ ವಿರುದ್ಧದ ಈ ಸರಣಿಯಲ್ಲಿ ಸತತ 6ನೇ ಬಾರಿಗೆ ಭಾರತ ಟಾಸ್ ಸೋತಂತಾಗಿದೆ. ಮೊದಲಿಗೆ ಭಾರತ ಬ್ಯಾಟಿಂಗ್ ನಡೆಸಲು ಕಣಕ್ಕಿಳಿದಿದೆ.
This News Article Is A Copy Of MYKHEL
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:59 am
HK News Staffer
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
15-07-26 01:17 pm
HK News Staffer
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm