ಬ್ರೇಕಿಂಗ್ ನ್ಯೂಸ್
28-03-21 03:32 pm Source: MYKHEL Madhukara Shetty ಕ್ರೀಡೆ
ಭಾರತ ಹಾಗೂ ಇಂಗ್ಲೆಂಡ್ ಏಕದಿನ ಸರಣಿಯ ಅಂತಿಮ ಹಾಗೂ ನಿರ್ಣಾಯಕ ಪಂದ್ಯದಲ್ಲಿ ಕಾದಾಟಕ್ಕೆ ಇಳಿದಿದೆ. ಏಕದಿನ ಸರಣಿಯಲ್ಲಿ ಎರಡು ತಂಡಗಳು ಕೂಡ ತಲಾ ಒಂದು ಪಂದ್ಯ ಗೆದ್ದಿರುವ ಹಿನ್ನೆಲೆಯಲ್ಲಿ ಇಂದಿನ ಪಂದ್ಯ ಬಹಳ ಮುಖ್ಯವಾಗಿದೆ. ಈ ನಿರ್ಣಾಯಕ ಪಂದ್ಯದಲ್ಲಿ ಭಾರತ ತಂಡದ ನಾಯಕನಾಗಿ ವಿರಾಟ್ ಕೊಹ್ಲಿ ವಿಶೇಷ ಮೈಲಿಗಲ್ಲಿ ಸ್ಥಾಪಿಸಿದ್ದಾರೆ.
ಭಾರತ ತಂಡವನ್ನು ವಿರಾಟ್ ಕೊಹ್ಲಿ ಇಂದು 200ನೇ ಅಂತಾರಾಷ್ಟ್ರೀಯ ಪಂದ್ಯದಲ್ಲಿ ನಾಯಕನಾಗಿ ಮುನ್ನಡೆಸುತ್ತಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಕೇವಲ ಮೂರನೇ ಭಾರತೀಯ ನಾಯಕ ಎನಿಸಿದ್ದಾರೆ. ಎಂಎಸ್ ಧೋನಿ ಹಾಗೂ ಮೊಹಮ್ಮದ್ ಅಜರುದ್ದೀನ್ ಈ ಪಟ್ಟಿಯಲ್ಲಿ ಮೊದಲ ಎರಡು ಸ್ಥಾನಗಳಲ್ಲಿ ಇದ್ದಾರೆ.
ಎಂಎಸ್ ಧೋನಿ ನಾಯಕನಾಗಿ ಟೀಮ್ ಇಂಡಿಯಾವನ್ನು 332 ಪಂದ್ಯಗಳನ್ನು ಮುನ್ನಡೆಸಿದ್ದು ಮೊಹಮ್ಮದ್ ಅಜರುದ್ದೀನ್ 221 ಪಂದ್ಯಗಳಲ್ಲಿ ಭಾರತವನ್ನು ಮುನ್ನಡೆಸಿದ್ದಾರೆ. ಮೂರನೇ ಸ್ಥಾನದಲ್ಲಿ ವಿರಾಟ್ ಕೊಹ್ಲಿ ಇದ್ದು ನಾಲ್ಕನೇ ಸ್ಥಾನದಲ್ಲಿ ಮಾಜಿ ನಾಯಕ ಸೌರವ್ ಗಂಗೂಲಿ ಇದ್ದಾರೆ. ಗಂಗೂಲಿ ಭಾರತ ತಂಡವನ್ನು 195 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಮುನ್ನಡೆಸಿದ್ದಾರೆ. ಇನ್ನು ಗೆಲುವಿನ ಲೆಕ್ಕಾಚಾರಗಳನ್ನು ನೋಡುವುದಾದರೆ ಭಾರತ ನಾಯಕ ಕೊಹ್ಲಿಯ ನಾಯಕತ್ವದಲ್ಲಿ 127 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದರೆ ಎಂಎಸ್ ಧೋನಿ ನಾಯಕತ್ವದಲ್ಲಿ 178 ಗೆಲುವುಗಳನ್ನು ಕಂಡಿದೆ. ಅಜರುದ್ದೀನ್ ಮುನ್ನಡೆಸಿದ 221 ಪಂದ್ಯಗಳಲ್ಲಿ ಭಾರತ 104 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ.
ಭಾರತ ಹಾಗೂ ಇಂಗ್ಲೆಂಡ್ ನಡುವಿನ ಅಂತಿಮ ಏಕದಿನ ಪಂದ್ಯದಲ್ಲಿಯೂ ಭಾರತದ ನಾಯಕ ವಿರಾಟ್ ಕೊಹ್ಲಿ ಟಾಸ್ ಸೋತಿದ್ದಾರೆ. ಈ ಮೂಲಕ ಇಂಗ್ಲೆಂಡ್ ವಿರುದ್ಧದ ಈ ಸರಣಿಯಲ್ಲಿ ಸತತ 6ನೇ ಬಾರಿಗೆ ಭಾರತ ಟಾಸ್ ಸೋತಂತಾಗಿದೆ. ಮೊದಲಿಗೆ ಭಾರತ ಬ್ಯಾಟಿಂಗ್ ನಡೆಸಲು ಕಣಕ್ಕಿಳಿದಿದೆ.
This News Article Is A Copy Of MYKHEL
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 05:22 pm
HK News Desk
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm