ಬ್ರೇಕಿಂಗ್ ನ್ಯೂಸ್
28-03-21 03:32 pm Source: MYKHEL Madhukara Shetty ಕ್ರೀಡೆ
ಭಾರತ ಹಾಗೂ ಇಂಗ್ಲೆಂಡ್ ಏಕದಿನ ಸರಣಿಯ ಅಂತಿಮ ಹಾಗೂ ನಿರ್ಣಾಯಕ ಪಂದ್ಯದಲ್ಲಿ ಕಾದಾಟಕ್ಕೆ ಇಳಿದಿದೆ. ಏಕದಿನ ಸರಣಿಯಲ್ಲಿ ಎರಡು ತಂಡಗಳು ಕೂಡ ತಲಾ ಒಂದು ಪಂದ್ಯ ಗೆದ್ದಿರುವ ಹಿನ್ನೆಲೆಯಲ್ಲಿ ಇಂದಿನ ಪಂದ್ಯ ಬಹಳ ಮುಖ್ಯವಾಗಿದೆ. ಈ ನಿರ್ಣಾಯಕ ಪಂದ್ಯದಲ್ಲಿ ಭಾರತ ತಂಡದ ನಾಯಕನಾಗಿ ವಿರಾಟ್ ಕೊಹ್ಲಿ ವಿಶೇಷ ಮೈಲಿಗಲ್ಲಿ ಸ್ಥಾಪಿಸಿದ್ದಾರೆ.
ಭಾರತ ತಂಡವನ್ನು ವಿರಾಟ್ ಕೊಹ್ಲಿ ಇಂದು 200ನೇ ಅಂತಾರಾಷ್ಟ್ರೀಯ ಪಂದ್ಯದಲ್ಲಿ ನಾಯಕನಾಗಿ ಮುನ್ನಡೆಸುತ್ತಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಕೇವಲ ಮೂರನೇ ಭಾರತೀಯ ನಾಯಕ ಎನಿಸಿದ್ದಾರೆ. ಎಂಎಸ್ ಧೋನಿ ಹಾಗೂ ಮೊಹಮ್ಮದ್ ಅಜರುದ್ದೀನ್ ಈ ಪಟ್ಟಿಯಲ್ಲಿ ಮೊದಲ ಎರಡು ಸ್ಥಾನಗಳಲ್ಲಿ ಇದ್ದಾರೆ.
ಎಂಎಸ್ ಧೋನಿ ನಾಯಕನಾಗಿ ಟೀಮ್ ಇಂಡಿಯಾವನ್ನು 332 ಪಂದ್ಯಗಳನ್ನು ಮುನ್ನಡೆಸಿದ್ದು ಮೊಹಮ್ಮದ್ ಅಜರುದ್ದೀನ್ 221 ಪಂದ್ಯಗಳಲ್ಲಿ ಭಾರತವನ್ನು ಮುನ್ನಡೆಸಿದ್ದಾರೆ. ಮೂರನೇ ಸ್ಥಾನದಲ್ಲಿ ವಿರಾಟ್ ಕೊಹ್ಲಿ ಇದ್ದು ನಾಲ್ಕನೇ ಸ್ಥಾನದಲ್ಲಿ ಮಾಜಿ ನಾಯಕ ಸೌರವ್ ಗಂಗೂಲಿ ಇದ್ದಾರೆ. ಗಂಗೂಲಿ ಭಾರತ ತಂಡವನ್ನು 195 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಮುನ್ನಡೆಸಿದ್ದಾರೆ. ಇನ್ನು ಗೆಲುವಿನ ಲೆಕ್ಕಾಚಾರಗಳನ್ನು ನೋಡುವುದಾದರೆ ಭಾರತ ನಾಯಕ ಕೊಹ್ಲಿಯ ನಾಯಕತ್ವದಲ್ಲಿ 127 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದರೆ ಎಂಎಸ್ ಧೋನಿ ನಾಯಕತ್ವದಲ್ಲಿ 178 ಗೆಲುವುಗಳನ್ನು ಕಂಡಿದೆ. ಅಜರುದ್ದೀನ್ ಮುನ್ನಡೆಸಿದ 221 ಪಂದ್ಯಗಳಲ್ಲಿ ಭಾರತ 104 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ.
ಭಾರತ ಹಾಗೂ ಇಂಗ್ಲೆಂಡ್ ನಡುವಿನ ಅಂತಿಮ ಏಕದಿನ ಪಂದ್ಯದಲ್ಲಿಯೂ ಭಾರತದ ನಾಯಕ ವಿರಾಟ್ ಕೊಹ್ಲಿ ಟಾಸ್ ಸೋತಿದ್ದಾರೆ. ಈ ಮೂಲಕ ಇಂಗ್ಲೆಂಡ್ ವಿರುದ್ಧದ ಈ ಸರಣಿಯಲ್ಲಿ ಸತತ 6ನೇ ಬಾರಿಗೆ ಭಾರತ ಟಾಸ್ ಸೋತಂತಾಗಿದೆ. ಮೊದಲಿಗೆ ಭಾರತ ಬ್ಯಾಟಿಂಗ್ ನಡೆಸಲು ಕಣಕ್ಕಿಳಿದಿದೆ.
This News Article Is A Copy Of MYKHEL
14-10-25 11:24 am
HK News Desk
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
14-10-25 10:33 pm
HK News Desk
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
Ex-IAS Officer Kannan Gopinathan, Congress: ಜ...
13-10-25 10:37 pm
Kerala, IT professional dead, RSS members: ಆರ...
13-10-25 05:31 pm
14-10-25 10:36 pm
Mangalore Correspondent
ಸುಳ್ಯ ಮೂಲದ ಯುವಕ ಮಾರಿಷಸ್ ನಲ್ಲಿ ಜಲಪಾತಕ್ಕೆ ಬಿದ್ದ...
14-10-25 10:13 pm
ರಸ್ತೆಯಲ್ಲೇ ತ್ಯಾಜ್ಯ ಸುರಿಸುವ ಮೀನಿನ ಲಾರಿಗಳಿಗೆ ಮತ...
14-10-25 09:12 pm
ಮುದುಂಗಾರುಕಟ್ಟೆ ಬಸ್ ನಿಲ್ದಾಣದಲ್ಲಿ ಯುವಕನ ಮೃತದೇಹ...
14-10-25 06:39 pm
ಬಿ.ಸಿ ರೋಡ್ ; ಹೆದ್ದಾರಿ ಬದಿ ಕಾರು ರಿಪೇರಿ ಮಾಡುತ್...
14-10-25 05:46 pm
14-10-25 04:44 pm
HK News Desk
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm