ಬ್ರೇಕಿಂಗ್ ನ್ಯೂಸ್
29-03-21 11:08 am Source: MYKHEL ಕ್ರೀಡೆ
ಈ ಕ್ರಿಕೆಟ್ ಋತು ಜೀವನವಿಡೀ ನೆನಪಿನಲ್ಲಿಟ್ಟುಕೊಳ್ಳುವಂತಾ ಋತು ಎಂದು ಭಾರತದ ಮುಖ್ಯ ಕೋಚ್ ರವಿ ಶಾಸ್ತ್ರಿ ಹೇಳಿದ್ದಾರೆ. ಬಯೋ ಬಬಲ್ನಂತಾ ಕಠಿಣ ವಾತಾವರಣದಲ್ಲಿ ಆಸ್ಟ್ರೇಲಿಯಾ ವಿರುದ್ಧದ ಟಿ20 ಹಾಗೂ ಟೆಸ್ಟ್ ಸರಣಿ ಗೆಲುವು ಹಾಗೂ ಇಂಗ್ಲೆಂಡ್ ವಿರುದ್ಧದ ಮೂರು ಮಾದರಿಯಲ್ಲೂ ಭಾರತದ ಸರಣಿ ಗೆಲುವಿನ ಸಾಧನೆಯನ್ನು ದೃಷ್ಟಿಯಲ್ಲಿಟ್ಟು ಈ ಮಾತುಗಳನ್ನು ಆಡಿದ್ದಾರೆ ರವಿ ಶಾಸ್ತ್ರಿ.
"ಅಭಿನಂದನೆಗಳು ಟ್ರೋಫಿಯನ್ನು ಎತ್ತಿ ಹಿಡಿದಿರುವುದಕ್ಕಾಗಿ. ವಿಶ್ವದ ಎರಡು ಅತ್ಯುತ್ತಮ ತಂಡಗಳ ವಿರುದ್ಧ ಎಲ್ಲಾ ಮಾದರಿಯಲ್ಲಿ ಕಠಿಣ ಸಮಯದಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಜೀವಮಾನದ ಋತುವನ್ನು ಹೊಂದಿದ್ದೀರಿ. ಅಭಿನಂದನೆಗೆ ನೀವು ಅತ್ಯಂತ ಅರ್ಹರು" ಎಂದು ಶಾಸ್ತ್ರಿ ಆಟಗಾರರನ್ನು ಪ್ರಶಂಸಿಸಿದ್ದಾರೆ.
ಟೀಮ್ ಇಂಡಿಯಾ ಕೋಚ್ ರವಿ ಶಾಸ್ತ್ರಿ ಈ ಹಿಂದೆ ಹಲವು ಬಾರಿ ಬಯೋಬಬಲ್ನಲ್ಲಿದ್ದು ಆಡುವ ಒತ್ತಡದ ಬಗ್ಗೆ ಪ್ರಸ್ತಾಪವನ್ನು ಮಾಡಿದ್ದರು. ಈಗ ಅದನ್ನು ದೃಷ್ಟಿಯಲ್ಲಿಟ್ಟುಕೊಂಡು ಈ ಟ್ವೀಟ್ ಮಾಡಿ ಭಾರತೀಯ ಆಟಗಾರರ ಪರವಾಗಿ ಹೊಗಳಿಕೆಯ ಮಾತುಗಳನ್ನು ಆಡಿದ್ದಾರೆ. ಭಾರತದ ಬಹುಪಾಲು ಆಟಗಾರರು ಕಳೆದ 7 ತಿಂಗಳುಗಳಲ್ಲಿ ಆಸ್ಟ್ರೇಲಿಯಾ ಪ್ರವಾಸದ ನಂತರದ ಒಂದು ವಾರವನ್ನು ಹೊರತು ಪಡಿಸಿ ಉಳಿದ ಎಲ್ಲಾ ಸಮಯಗಳನ್ನು ಬಯೋಬಬಲ್ನಲ್ಲಿಯೇ ಕಳೆದಿದ್ದಾರೆ.
ಕಳೆದ ಐಪಿಎಲ್ ಆವೃತ್ತಿ ಮುಕ್ತಾವಾಗುತ್ತಿದ್ದಂತೆಯೇ ಭಾರತದ ಬಿಡುವಿಲ್ಲದ ಋತು ಆರಂಭವಾಗಿತ್ತು. ಆರಂಭದಲ್ಲಿ ಏಕದಿನ ಸರಣಿ ಆಸ್ಟ್ರೇಲಿಯಾಗೆ 1-2 ಅಂತರದಿಂದ ಸೋಲುವ ಮೂಲಕ ಆರಂಭವಾಯಿತು. ಆದರೆ ಟಿ20 ಸರಣಿಯಲ್ಲಿ ಆಸ್ಟ್ರೇಲಿಯಾಗೆ ತಿರುಗೇಟು ನೀಡಿದ ಭಾರತ 2-1 ಅಂತರದಿಂದ ಗೆಲುವು ಸಾಧಿಸಿತು. ಅದಾದ ಬಳಿಕ ಬಹು ನಿರೀಕ್ಷಿತ ಟೆಸ್ಟ್ ಸರಣಿ ಭಾರತೀಯ ಅಭಿಮಾನಿಗಳ ಪಾಲಿಗೆ ಸುದೀರ್ಘ ಕಾಲ ನೆನಪಿನಲ್ಲಿ ಉಳಿಯುವಂತಾದ್ದು.
ಮೊದಲ ಪಂದ್ಯದಲ್ಲಿ ಹೀನಾಯ ಸೋಲಿನ ನಂತರ ಸ್ಟಾರ್ ಆಟಗಾರರ ಅಲಭ್ಯತೆಯ ಮಧ್ಯೆಯೂ ಭಾರತ ತಂಡದ ಆಟಗಾರರು ನೀಡಿದ ಪ್ರದರ್ಶನದಿಂದ ಭಾರತ 2-1 ಅಂತರದಿಂದ ಐತಿಹಾಸಿಕವಾಗಿ ಸರಣಿಯನ್ನು ಗೆದ್ದುಕೊಂಡಿತ್ತು.
ಬಳಿಕ ಭಾರತ ತವರಿನಲ್ಲಿಯೂ ಇದೇ ಪ್ರದರ್ಶನವನ್ನು ಮುಂದುವರಿಸಿದೆ. ಮೊದಲಿಗೆ ಟೆಸ್ಟ್ನಲ್ಲಿ 3-1 ಅಂತರದಿಂದ ಭಾರತ ಗೆಲುವು ಸಾಧಿಸಿತ್ತು. ಬಳಿಕ ಸೀಮಿತ ಓವರ್ಗಳಲ್ಲಿ ಇಂಗ್ಲೆಂಡ್ ಕಠಿಣ ಪೈಪೋಟಿಯನ್ನು ನೀಡಿತಾದರೂ ಭಾರತದ ಸರಣಿ ಗೆಲ್ಲುವಲ್ಲಿ ಯಶಸ್ವಿಯಾಗಿದೆ.
This News Article Is A Copy Of MYKHEKL
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
18-04-26 11:31 pm
HK News Desk
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
19-04-26 02:58 pm
HK News Staffer
15 ವರ್ಷಗಳ ಹಿಂದೆ ಜೈಲಿನಿಂದ ತಪ್ಪಿಸಿಕೊಂಡು ಮುಂಬೈ,...
19-04-26 02:24 pm
ಅಂಬ್ಲಮೊಗರು ; ಸ್ನೇಹಿತರೊಂದಿಗೆ ಕೆರೆ ನೀರಲ್ಲಿ ಆಟವಾ...
19-04-26 10:20 am
ಹೇಯ್ ಮಟನ್ ಸರಿಯಾಗಿ ಬೆಂದಿಲ್ಲ ಎಂದು ಸ್ನೇಹಿತನ ಮುಂದ...
18-04-26 10:37 pm
180 ಅಪ್ರಾಪ್ತ ಬಾಲಕಿಯರ 350 ಅಶ್ಲೀಲ ವಿಡಿಯೋ ವೈರಲ್...
18-04-26 03:50 pm