ಬ್ರೇಕಿಂಗ್ ನ್ಯೂಸ್
30-03-21 11:31 am Source: MYKHEL ಕ್ರೀಡೆ
ವಿಂಡ್ ಸರ್ಫಿಂಗ್ ವಿಭಿನ್ನವಾದ ಕ್ರೀಡಾ ಪ್ರಾಕಾರ. ಭಾರತದಲ್ಲಿ ಪುರುಷರು ಹೆಚ್ಚಿನ ಪ್ರಾಭಲ್ಯವನ್ನು ಹೊಂದಿರುವ ಕ್ರೀಡೆಯಿದು. ಸಾಕಷ್ಟು ಪರಿಣತಿ ಹಾಗೂ ಮನೋಸ್ಥೈರ್ಯವಿದ್ದರೆ ಮಾತ್ರ ಇದ್ರಲ್ಲಿ ಯಶಸ್ಸು ಗಳಿಸಲು ಸಾಧ್ಯ. ಆದರೆ ತಮಿಳುನಾಡು ಮೂಲಕ ಐಶ್ವರ್ಯ ಗಣೇಶ್ ಏಕಾಂಗಿಯಾಗಿ ವಿಂಡ್ ಸರ್ಫಿಂಗ್ ಕಲಿತು ಮೂರು ಬಾರಿ ರಾಷ್ಟ್ರೀಯ ಚಾಂಪಿಯನ್ ಆಗಿದ್ದಲ್ಲದೆ ಈಗ ಒಲಿಂಪಿಕ್ಸ್ನಲ್ಲಿ ಭಾಗಿಯಾಗುವ ಕನಸು ಹೊತ್ತಿದ್ದಾರೆ.
ಐಶ್ವರ್ಯ ಗಣೇಶ್ ಮೊದಲಿಗೆ ಸೈಲಿಂಗ್(ಹಾಯಿದೋಣಿ) ತರಬೇತಿಗಾಗಿ ಎರಡು ದಶಕಗಳಿಂದ ಸೈಲಿಂಗ್ ತರಬೇತಿ ನೀಡುತ್ತಿರುವ ಡಿಪಿ ಸೆಲ್ವಂ ಅವರೊಂದಿಗೆ ಸೇರಿಕೊಂಡಿದ್ದರು. 2014ರಿಂದ 2017ರವರೆಗೆ ಸೈಲಿಂಗ್ ಅಭ್ಯಾಸವನ್ನು ಪಡೆದುಕೊಂಡಿದ್ದರು. ಆದರೆ ಐಶ್ವರ್ಯ ಗಣೇಶ್ ಸೈಲಿಂಗ್ ಜೊತೆಗೆ ವಿಂಡ್ ಸರ್ಫಿಂಗ್ ಕಡೆಗೆ ವಾಲಿದರು. ಚೆನ್ನೈ ಸಮುದ್ರದದಲ್ಲಿ ಸೈಲಿಂಗ್ ಸಹಪಾಠಿಗಳ ಜೊತೆಗೆ ವಿಂಡ್ ಸರ್ಫಿಂಗ್ ಅಭ್ಯಾಸವನ್ನು ಮಾಡತೊಡಗಿದರು.
ಆದರೆ ಈ ಸಂದರ್ಭದಲ್ಲಿ ಐಶ್ವರ್ಯಗೆ ವಿಂಡ್ ಸರ್ಫಿಂಗ್ಗೆ ಯಾವುದೇ ತಜ್ಞರು ಇರಲಿಲ್ಲ. ಯೂಟ್ಯೂಬ್ನಲ್ಲಿಯೇ ಕೆಲ ವಿಡಿಯೋಗಳನ್ನು ನೋಡಿಕೊಂಡು ವಿಂಡ್ ಸರ್ಫಿಂಗ್ನ ಚಾಕಚಕ್ಯತೆಯನ್ನು ಅಭ್ಯಾಸ ಮಾಡಲು ಆರಂಭಿಸಿದರು. ಸೈಲಿಂಗ್ನ ಜೊತೆಗೆ ವಿಂಡ್ ಸರ್ಫಿಂಗ್ನಲ್ಲಿಯೂ ರಾಷ್ಟ್ರಮಟ್ಟದಲ್ಲಿ ಮಿಂಚುತ್ತಾ ಪ್ರಶಸ್ತಿ ಗಳಿಸಲು ಆರಂಭಿಸಿದರು.
"ಸೈಲ್ ಬೋಟ್ನಲ್ಲಿ ಮಾಸ್ಟರ್ ಆಗಿ ರಾಷ್ಟ್ರಮಟ್ಟದಲ್ಲಿ ಪ್ರಶಸ್ತಿಗಳಿಸಲು ಸಾಮಾನ್ಯವಾಗಿ ಮೂರರಿಂದ ನಾಲ್ಕು ವರ್ಷಗಳು ಬೇಕಾಗುತ್ತದೆ. ಆದರೆ ಐಶ್ವರ್ಯ ಮೊದಲ ವರ್ಷದಲ್ಲಿಯೇ ಜೂನಿಯರ್ ಕ್ಲಾಸ್ನಿಂದ ಯೂತ್ ಕ್ಲಾಸ್ಗೆ ಬಂದು ಬಳಿಕ ಮರು ವರ್ಷವೇ ಸೀನಿಯರ್ ಕ್ಲಾಸ್ ಕೂಡ ಪೂರ್ಣಗೊಳಿಸುವುದರ ಜೊತೆಗೆ ಎಲ್ಲಾ ವಿಂಡ್ ಸರ್ಫಿಂಗ್ ಪ್ರಶಸ್ತಿಗಳನ್ನು ಕೂಡ ಗಳಿಸಿಕೊಂಡಿದ್ದಾರೆ" ಎಂದು ಐಶ್ವರ್ಯ ಗಣೇಶ್ ಅವರ ಕೋಚ್ ಡಿಪಿ ಸೆಲ್ವಂ ಹೆಮ್ಮೆ ವ್ಯಕ್ತಪಡಿಸುತ್ತಾರೆ.
ಭಾರತದಲ್ಲಿ ಪುರುಷರೇ ಪ್ರಾಬಲ್ಯವನ್ನು ಹೊಂದಿರುವ ವಿಂಡ್ ಸರ್ಫಿಂಗ್ನಲ್ಲಿ ಐಶ್ವರ್ಯ ಗಣೇಶ್ ವಿಶೇಷ ಸಾಧನೆಯನ್ನು ಮಾಡುತ್ತಿದ್ದಾರೆ. ಕಳೆದ ಮೂರು ವರ್ಷಗಳಲ್ಲಿ ಐಶ್ವರ್ಯ ಗಣೇಶ್ ರಾಷ್ಟ್ರೀಯ ವಿಂಡ್ ಸರ್ಫಿಂಗ್ನಲ್ಲಿ ಚಾಂಪಿಯನ್ ಆಗಿದ್ದಾರೆ. ಈಗ ಒಮಾನ್ನಲ್ಲಿದ್ದು ಮುಸ್ಸನ್ಹಾ ಓಪನ್ ಚಾಂಪಿಯನ್ಶಿಪ್ ಇವೆಂಟ್ನಲ್ಲಿ ಪಾಲ್ಗೊಂಡಿದ್ದು ಟೋಕಿಯೋ ಒಲಿಂಪಿಕ್ಸ್ಗೆ ಅರ್ಹತೆ ಗಳಿಸುವ ನಿರೀಕ್ಷೆಯಲ್ಲಿದ್ದಾರೆ.
This News Article Is A Copy Of MYKHEL
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
18-04-26 11:31 pm
HK News Desk
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
19-04-26 02:58 pm
HK News Staffer
15 ವರ್ಷಗಳ ಹಿಂದೆ ಜೈಲಿನಿಂದ ತಪ್ಪಿಸಿಕೊಂಡು ಮುಂಬೈ,...
19-04-26 02:24 pm
ಅಂಬ್ಲಮೊಗರು ; ಸ್ನೇಹಿತರೊಂದಿಗೆ ಕೆರೆ ನೀರಲ್ಲಿ ಆಟವಾ...
19-04-26 10:20 am
ಹೇಯ್ ಮಟನ್ ಸರಿಯಾಗಿ ಬೆಂದಿಲ್ಲ ಎಂದು ಸ್ನೇಹಿತನ ಮುಂದ...
18-04-26 10:37 pm
180 ಅಪ್ರಾಪ್ತ ಬಾಲಕಿಯರ 350 ಅಶ್ಲೀಲ ವಿಡಿಯೋ ವೈರಲ್...
18-04-26 03:50 pm