ಬ್ರೇಕಿಂಗ್ ನ್ಯೂಸ್
30-03-21 11:31 am Source: MYKHEL ಕ್ರೀಡೆ
ವಿಂಡ್ ಸರ್ಫಿಂಗ್ ವಿಭಿನ್ನವಾದ ಕ್ರೀಡಾ ಪ್ರಾಕಾರ. ಭಾರತದಲ್ಲಿ ಪುರುಷರು ಹೆಚ್ಚಿನ ಪ್ರಾಭಲ್ಯವನ್ನು ಹೊಂದಿರುವ ಕ್ರೀಡೆಯಿದು. ಸಾಕಷ್ಟು ಪರಿಣತಿ ಹಾಗೂ ಮನೋಸ್ಥೈರ್ಯವಿದ್ದರೆ ಮಾತ್ರ ಇದ್ರಲ್ಲಿ ಯಶಸ್ಸು ಗಳಿಸಲು ಸಾಧ್ಯ. ಆದರೆ ತಮಿಳುನಾಡು ಮೂಲಕ ಐಶ್ವರ್ಯ ಗಣೇಶ್ ಏಕಾಂಗಿಯಾಗಿ ವಿಂಡ್ ಸರ್ಫಿಂಗ್ ಕಲಿತು ಮೂರು ಬಾರಿ ರಾಷ್ಟ್ರೀಯ ಚಾಂಪಿಯನ್ ಆಗಿದ್ದಲ್ಲದೆ ಈಗ ಒಲಿಂಪಿಕ್ಸ್ನಲ್ಲಿ ಭಾಗಿಯಾಗುವ ಕನಸು ಹೊತ್ತಿದ್ದಾರೆ.
ಐಶ್ವರ್ಯ ಗಣೇಶ್ ಮೊದಲಿಗೆ ಸೈಲಿಂಗ್(ಹಾಯಿದೋಣಿ) ತರಬೇತಿಗಾಗಿ ಎರಡು ದಶಕಗಳಿಂದ ಸೈಲಿಂಗ್ ತರಬೇತಿ ನೀಡುತ್ತಿರುವ ಡಿಪಿ ಸೆಲ್ವಂ ಅವರೊಂದಿಗೆ ಸೇರಿಕೊಂಡಿದ್ದರು. 2014ರಿಂದ 2017ರವರೆಗೆ ಸೈಲಿಂಗ್ ಅಭ್ಯಾಸವನ್ನು ಪಡೆದುಕೊಂಡಿದ್ದರು. ಆದರೆ ಐಶ್ವರ್ಯ ಗಣೇಶ್ ಸೈಲಿಂಗ್ ಜೊತೆಗೆ ವಿಂಡ್ ಸರ್ಫಿಂಗ್ ಕಡೆಗೆ ವಾಲಿದರು. ಚೆನ್ನೈ ಸಮುದ್ರದದಲ್ಲಿ ಸೈಲಿಂಗ್ ಸಹಪಾಠಿಗಳ ಜೊತೆಗೆ ವಿಂಡ್ ಸರ್ಫಿಂಗ್ ಅಭ್ಯಾಸವನ್ನು ಮಾಡತೊಡಗಿದರು.
ಆದರೆ ಈ ಸಂದರ್ಭದಲ್ಲಿ ಐಶ್ವರ್ಯಗೆ ವಿಂಡ್ ಸರ್ಫಿಂಗ್ಗೆ ಯಾವುದೇ ತಜ್ಞರು ಇರಲಿಲ್ಲ. ಯೂಟ್ಯೂಬ್ನಲ್ಲಿಯೇ ಕೆಲ ವಿಡಿಯೋಗಳನ್ನು ನೋಡಿಕೊಂಡು ವಿಂಡ್ ಸರ್ಫಿಂಗ್ನ ಚಾಕಚಕ್ಯತೆಯನ್ನು ಅಭ್ಯಾಸ ಮಾಡಲು ಆರಂಭಿಸಿದರು. ಸೈಲಿಂಗ್ನ ಜೊತೆಗೆ ವಿಂಡ್ ಸರ್ಫಿಂಗ್ನಲ್ಲಿಯೂ ರಾಷ್ಟ್ರಮಟ್ಟದಲ್ಲಿ ಮಿಂಚುತ್ತಾ ಪ್ರಶಸ್ತಿ ಗಳಿಸಲು ಆರಂಭಿಸಿದರು.
"ಸೈಲ್ ಬೋಟ್ನಲ್ಲಿ ಮಾಸ್ಟರ್ ಆಗಿ ರಾಷ್ಟ್ರಮಟ್ಟದಲ್ಲಿ ಪ್ರಶಸ್ತಿಗಳಿಸಲು ಸಾಮಾನ್ಯವಾಗಿ ಮೂರರಿಂದ ನಾಲ್ಕು ವರ್ಷಗಳು ಬೇಕಾಗುತ್ತದೆ. ಆದರೆ ಐಶ್ವರ್ಯ ಮೊದಲ ವರ್ಷದಲ್ಲಿಯೇ ಜೂನಿಯರ್ ಕ್ಲಾಸ್ನಿಂದ ಯೂತ್ ಕ್ಲಾಸ್ಗೆ ಬಂದು ಬಳಿಕ ಮರು ವರ್ಷವೇ ಸೀನಿಯರ್ ಕ್ಲಾಸ್ ಕೂಡ ಪೂರ್ಣಗೊಳಿಸುವುದರ ಜೊತೆಗೆ ಎಲ್ಲಾ ವಿಂಡ್ ಸರ್ಫಿಂಗ್ ಪ್ರಶಸ್ತಿಗಳನ್ನು ಕೂಡ ಗಳಿಸಿಕೊಂಡಿದ್ದಾರೆ" ಎಂದು ಐಶ್ವರ್ಯ ಗಣೇಶ್ ಅವರ ಕೋಚ್ ಡಿಪಿ ಸೆಲ್ವಂ ಹೆಮ್ಮೆ ವ್ಯಕ್ತಪಡಿಸುತ್ತಾರೆ.
ಭಾರತದಲ್ಲಿ ಪುರುಷರೇ ಪ್ರಾಬಲ್ಯವನ್ನು ಹೊಂದಿರುವ ವಿಂಡ್ ಸರ್ಫಿಂಗ್ನಲ್ಲಿ ಐಶ್ವರ್ಯ ಗಣೇಶ್ ವಿಶೇಷ ಸಾಧನೆಯನ್ನು ಮಾಡುತ್ತಿದ್ದಾರೆ. ಕಳೆದ ಮೂರು ವರ್ಷಗಳಲ್ಲಿ ಐಶ್ವರ್ಯ ಗಣೇಶ್ ರಾಷ್ಟ್ರೀಯ ವಿಂಡ್ ಸರ್ಫಿಂಗ್ನಲ್ಲಿ ಚಾಂಪಿಯನ್ ಆಗಿದ್ದಾರೆ. ಈಗ ಒಮಾನ್ನಲ್ಲಿದ್ದು ಮುಸ್ಸನ್ಹಾ ಓಪನ್ ಚಾಂಪಿಯನ್ಶಿಪ್ ಇವೆಂಟ್ನಲ್ಲಿ ಪಾಲ್ಗೊಂಡಿದ್ದು ಟೋಕಿಯೋ ಒಲಿಂಪಿಕ್ಸ್ಗೆ ಅರ್ಹತೆ ಗಳಿಸುವ ನಿರೀಕ್ಷೆಯಲ್ಲಿದ್ದಾರೆ.
This News Article Is A Copy Of MYKHEL
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
01-03-26 09:52 am
HK News Staffer
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
28-02-26 08:53 pm
HK News Desk
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm