ಬ್ರೇಕಿಂಗ್ ನ್ಯೂಸ್
04-04-21 10:38 am Source: MYKHEL ಕ್ರೀಡೆ
ಆರ್ಸಿಬಿ ಆಟಗಾರ ದೇವದತ್ ಪಡಿಕ್ಕಲ್ಗೆ ಕೊರೊನಾ ವೈರಸ್ ದೃಢಪಟ್ಟಿದೆ ಎಂಬ ಮಾಹಿತಿ ಲಭ್ಯವಾಗಿದೆ. ಐಪಿಎಲ್ಗೆ ಕೆಲವೇ ದಿನಗಳು ಬಾಕಿಯಿರುವಾಗ ಈ ಬೆಳವಣಿಗೆ ಐಪಿಎಲ್ ಪಾಳಯದಲ್ಲಿ ಆತಂಕಕ್ಕೆ ಕಾರಣವಾಗಿದೆ.
ಭಾನುವಾರ ನಡೆಸಿದ ಪರೀಕ್ಷೆಯಲ್ಲಿ ದೇವದತ್ ಪಡಿಕ್ಕಲ್ಗೆ ಕೊರೊನಾ ವೈರಸ್ ಸೋಂಕು ಪತ್ತೆಯಾಗಿದೆ. ಹೀಗಾಗಿ ಆರ್ಸಿಬಿ ತಂಡದ ಈ ಆಟಗಾರನನ್ನು ಈಗ ಉಳಿದ ತಂಡದ ಸದಸ್ಯರಿಂದ ಪ್ರತ್ಯೇಕವಾಗಿರಿಸಲಾಗಿದ್ದು ಚಿಕಿತ್ಸೆಯನ್ನು ನೀಡಲಾಗುತ್ತಿದೆ.
ದೇವದತ್ ಪಡಿಕ್ಕಲ್ಗೆ ಕೊರೊನಾ ವೈರಸ್ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಈ ಬಾರಿಯ ಐಪಿಎಲ್ನ ಉದ್ಘಾಟನಾ ಪಂದ್ಯದಲ್ಲಿ ಅವರು ಆಡುವುದು ಅನುಮಾನವಾಗಿದೆ. ಚೆನ್ನೈನಲ್ಲಿ ಆರ್ಸಿಬಿ ಹಾಗೂ ಮುಂಬೈ ತಂಡಗಳು ಏಪ್ರಿಲ್ 9ರಂದು ಉದ್ಘಾಟನಾ ಪಂದ್ಯದಲ್ಲಿ ಆಡಲು ಇಳಿಯಲಿದೆ. ಕಳೆದ ಆವೃತ್ತಿಯಲ್ಲಿ ಆರ್ಸಿಬಿ ತಂಡದ ಪರವಾಗಿ ಆರಂಭಿಕನಾಗಿ ಕಣಕ್ಕಿಳಿದಿದ್ದ ಪಡಿಕ್ಕಲ್ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ದೊಡ್ಡ ಸ್ಟಾರ್ ಆಗಿ ಮಿಂಚಿದ್ದರು.
ಕಳೆದ ಆವೃತ್ತಿಯಲ್ಲಿ ಆರ್ಸಿಬಿ ತಂಡ ಪ್ಲೇಆಫ್ ಹಂತಕ್ಕೇರಲು ದೇವದತ್ ಪಡಿಕ್ಕಲ್ ಕೂಡ ಕಾರಣರಾಗಿದ್ದರು. ಸ್ಥಿರ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಗಿದ್ದ ಪಡಿಕ್ಕಲ್ ದಿಗ್ಗಜರಿಂದ ಮೆಚ್ಚುಗೆಗೆ ಒಳಗಾಗಿದ್ದಾರೆ.
ಈ ಬಾರಿಯ ಐಪಿಎಲ್ನಲ್ಲಿ ಕೊರೊನಾ ವೈರಸ್ಗೆ ತುತ್ತಾಗಿರುವ ಮೂರನೇ ಆಟಗಾರನಾಗಿದ್ದಾರೆ ದೇವದತ್ ಪಡಿಕ್ಕಲ್. ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ನಿತೀಶ್ ರಾಣಾ ಮೊದಲಿಗೆ ಕೊರೊನಾ ವೈರಸ್ಗೆ ತುತ್ತಾಗಿರುವುದು ಪತ್ತೆಯಾಗಿತ್ತು. ಬಳಿಕ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಅಕ್ಷರ್ ಪಟೇಲ್ ಕೂಡ ಕೊರೊನಾ ವೈರಸ್ಗೆ ತುತ್ತಾಗಿರುವುದು ದೃಢಪಟ್ಟಿತ್ತು.
This News Article Is A Copy Of MYKHEL
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:59 am
HK News Staffer
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
15-07-26 01:17 pm
HK News Staffer
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm